PM ಮೋದಿಗೆ ಹೆದರಿ ಕಾಂಗ್ರೆಸ್‌ ಬಿಡುತ್ತಿರುವ ನಾಯಕರು: ಮಲ್ಲಿಕಾರ್ಜುನ ಖರ್ಗೆ

ಮಂತ್ರಿ, ಸಿಎಂ ಆಗಿ ಅಧಿಕಾರ ಅನುಭವಿಸಿ ಈಗ ಪಕ್ಷ ಬಿಡುತ್ತಿದ್ದಾರೆ

Team Udayavani, Feb 20, 2024, 7:00 PM IST

PM ಮೋದಿಗೆ ಹೆದರಿ ಕಾಂಗ್ರೆಸ್‌ ಬಿಡುತ್ತಿರುವ ನಾಯಕರು: ಮಲ್ಲಿಕಾರ್ಜುನ ಖರ್ಗೆ

ಬೀದರ: ಇಡಿ, ಐಟಿಯಂಥ ಸರ್ಕಾರಿ ಯಂತ್ರಗಳನ್ನು ದುರ್ಬಳಕೆ ಮಾಡಿಕೊಂಡು ಪ್ರಧಾನಿ ಮೋದಿ ಕಾಂಗ್ರೆಸ್ಸಿಗರನ್ನು ಹೆದರಿಸುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್‌ನ ಹಲವು ನಾಯಕರು ಮೋದಿಗೆ ಹೆದರಿ ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಡಾ| ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ನಗರದ ನೆಹರು ಕ್ರೀಡಾಂಗಣದಲ್ಲಿ ಮಂಗಳವಾರ ಜಿಲ್ಲಾ ಕಾಂಗ್ರೆಸ್‌, ಹಲವು ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಲಂ 371 (ಜೆ) ದಶಮಾನೋತ್ಸವ ಮತ್ತು ನಾಗರಿಕ ಸಮ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಲಾಭ ಪಡೆದು ಮಂತ್ರಿ ಮತ್ತು ಮುಖ್ಯಮಂತ್ರಿಯಾದವರು ಮೋದಿಗೆ ಹೆದರಿ ಪಕ್ಷ ತೊರೆಯುತ್ತಿದ್ದಾರೆ. ಇದರಿಂದ ಕರ್ನಾಟಕ, ಮಧ್ಯಪ್ರದೇಶ, ಗೋವಾ ಸೇರಿ ದೇಶದ ಹಲವು ರಾಜ್ಯಗಳಲ್ಲಿ ಆಡಳಿತದಲ್ಲಿದ್ದ ಕಾಂಗ್ರೆಸ್‌ ಅಧಿಕಾರ ಕಳೆದುಕೊಳ್ಳಬೇಕಾಯಿತು. ಕೆಲವರು ಹಣ, ಅ ಧಿಕಾರದ ಆಸೆಗೆ, ಮತ್ತೆ ಕೆಲವರು ಗಟ್ಟಿಯಾದ ನಂಬಿಕೆ ಇಲ್ಲದ ಕಾರಣ ಪಕ್ಷದಿಂದ ದೂರವಾದರು ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನೆಷ್ಟು ರಾಜಕೀಯ ನಾಯಕರನ್ನು ಬಿಜೆಪಿಗೆ ಸೇರಿಸಿಕೊಳ್ಳುತ್ತೀರಿ. ಇನ್ನೂ ನಿಮ್ಮ ಹೊಟ್ಟೆ ತುಂಬಿಲ್ಲವೇ. ಸೆಕ್ಯುಲರ್‌ ಎಂದು ಹೇಳಿಕೊಳ್ಳುವ 91 ವರ್ಷದ ದೇವೇಗೌಡರನ್ನು ಸಹ ಬಿಟ್ಟಿಲ್ಲ. ನಿಮ್ಮ ಬಳಿ ಅಂಥ ಯಾವ ಔಷಧ ಇದೆ ಎಂದು ಇತ್ತೀಚೆಗೆ ದೆಹಲಿಯ ಸಭೆಯೊಂದರಲ್ಲಿ ಪ್ರಧಾನಿ ಮೋದಿಗೆ ಕೇಳಿದ್ದೆ. ಅದಕ್ಕವರು ಅವರಾಗಿಯೇ ಬರುತ್ತಿದ್ದಾರೆಂದು ಹೇಳಿದ್ದರು. ಅದಕ್ಕೆ ನಾನು ನಿಮ್ಮ ಬಳಿ ಇಡಿ, ಐಟಿ ಅಂತಹ ಗುಂಡುಗಳಿವೆ. ಅದಕ್ಕಾಗಿ ಬರುತ್ತಿದ್ದಾರಷ್ಟೇ ಎಂದಿದ್ದೆ. ಜನರನ್ನು ಒಂದೆರಡು ಬಾರಿ ಮರಳು ಮಾಡಬಹುದು. ಈಗ ಮೂರನೇ ಬಾರಿಗೆ ಹಾಗಾಗುವುದಿಲ್ಲ ಎಂದರು.

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನವನ್ನು ಮೋದಿ ಸರ್ಕಾರ ನಾಶ ಮಾಡುತ್ತಿದೆ. ಸರ್ಕಾರಿ ಯಂತ್ರಗಳನ್ನು ಇಂದು ಮೋದಿ, ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಹಿಡಿತದಲ್ಲಿಟ್ಟುಕೊಂಡಿದೆ. ಮಾಧ್ಯಮಗಳ ಮಾಲೀಕತ್ವ ಶ್ರೀಮಂತರ ಕೈಸೇರಿದೆ. ಹಾಗಾಗಿ ದೇಶದ ಮುಂದಿನ ಪೀಳಿಗೆಗಾಗಿ ಅಪಾಯದ ಅಂಚಿನಲ್ಲಿರುವ ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸಬೇಕಾಗಿದೆ. ಕೋಮುವಾದಿ ಬಿಜೆಪಿ ಸರ್ಕಾರವನ್ನು ಕಿತ್ತೆಸೆಯಬೇಕಿದೆ. ತತ್ವ ಮತ್ತು ಸಿದ್ಧಾಂತದ ಮೇಲೆ ದೀರ್ಘ‌ಕಾಲ ದೇಶದ ಸೇವೆ ಮಾಡಿರುವ ಕಾಂಗ್ರೆಸ್‌ಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಂಬಲ ನೀಡಬೇಕಿದೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಮತ್ತು ದಲಿತ, ಕನ್ನಡಪರ ಮತ್ತು ಬಸವಪರ ಸಂಘಟನೆಗಳಿಂದ ಡಾ|ಖರ್ಗೆ ಅವರನ್ನು ಅಭಿನಂದಿಸಲಾಯಿತು. ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಮ್‌ ಖಾನ್‌ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.