ಶಿಕ್ಷಕರ ಕ್ಷೇತ್ರ: ಮೈತ್ರಿಕೂಟಕ್ಕೆ ಸೋಲು, ಕಾಂಗ್ರೆಸ್‌ ಜಯ


Team Udayavani, Feb 20, 2024, 11:16 PM IST

ಶಿಕ್ಷಕರ ಕ್ಷೇತ್ರ: ಮೈತ್ರಿಕೂಟಕ್ಕೆ ಸೋಲು, ಕಾಂಗ್ರೆಸ್‌ ಜಯ

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಸತತ ಐದನೇ ಬಾರಿ ಗೆಲ್ಲುವುದರೊಂದಿಗೆ, ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ಈ ಕ್ಷೇತ್ರದಲ್ಲಿ ತಮ್ಮ ಹಿಡಿತವನ್ನು ಮುಂದುವರಿಸಿದರು. ಇದರ ಪರಿಣಾಮವಾಗಿ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಮೊದಲ ಚುನಾವಣೆಯಲ್ಲೇ ಸೋಲಾಗಿದೆ. ಪುಟ್ಟಣ್ಣ ಅವರ ಪಕ್ಷಾತೀತ ವರ್ಚಸ್ಸು ಅವರ ‘ಕೈ’ ಹಿಡಿದಿದ್ದು ಬಿಜೆಪಿ-ಜೆಡಿಎಸ್‌ನ “ಮೈತ್ರಿ’ ಲೆಕ್ಕಾಚಾರ ಬುಡಮೇಲಾಗಿದೆ.

ಬೆಂಗಳೂರು ಸರಕಾರಿ ಆರ್ಟ್ಸ್ ಕಾಲೇಜಿನಲ್ಲಿ ನಡೆದ ಮೂರು ಸುತ್ತಿನ ಮತ ಎಣಿಕೆಯಲ್ಲಿ, ಪುಟ್ಟಣ್ಣ ಮೊದಲ ಪ್ರಾಶಸ್ತ್ಯದ ಮತಗಳ ಆಧಾರದಲ್ಲಿ ಗೆಲುವು ಸಾಧಿಸಿದ್ದಾರೆ. ಪುಟ್ಟಣ್ಣ 8,260 ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎ.ಪಿ.ರಂಗನಾಥ್‌ 6,753 ಮತಗಳನ್ನು ಪಡೆದರು.

1,239 ಮತಗಳು ತಿರಸ್ಕೃತಗೊಂಡಿವೆ!
2002ರಲ್ಲಿ ಜೆಡಿಎಸ್‌ನಿಂದ ಮೊದಲ ಬಾರಿ ಪರಿಷತ್‌ ಪ್ರವೇಶಿಸಿದ್ದ ಪುಟ್ಟಣ್ಣ, ಬಳಿಕ 2008 ಮತ್ತು 2014ರಲ್ಲಿ ಜೆಡಿಎಸ್‌ನಿಂದಲೇ ಗೆದ್ದಿದ್ದರು. ಬಳಿಕ 2020ರಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಮಲವನ್ನು ಈ ಕ್ಷೇತ್ರದಲ್ಲಿ ಅರಳಿಸಿದ್ದರು. 2023ರಲ್ಲಿ ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ತಮ್ಮ ಸ್ಥಾನಕ್ಕೆ ರಾಜೀ ನಾಮೆ ನೀಡಿ ಕಾಂಗ್ರೆಸ್‌ ಸೇರಿ, ರಾಜಾಜಿನಗರದಿಂದ ವಿಧಾನ ಸಭೆಗೆ ಸ್ಪರ್ಧಿಸಿ ಸೋತಿದ್ದರು. ಬಳಿಕ ಮತ್ತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದಾರೆ.

ಮೈತ್ರಿಕೂಟಕ್ಕೆ ಹಿನ್ನಡೆ
ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ದಾಖಲಿಸಿ ತಮ್ಮ ಮೊದಲ ಚುನಾವಣಾ ಪೂರ್ವ ಮೈತ್ರಿಯನ್ನು ಶುಭಾರಂಭ ಮಾಡಬೇಕು, ಲೋಕಸಭಾ ಚುನಾವಣೆಗೆ ಆತ್ಮ ವಿಶ್ವಾಸ ದಕ್ಕಿಸಿಕೊಳ್ಳಬೇಕು ಎಂಬ ನಿರೀಕ್ಷೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟವಿತ್ತು.

ಸ್ಥಳೀಯ ಬಿಜೆಪಿ ಮುಖಂಡರ ಜತೆ ಸಮಾಲೋಚಿಸದೆ, ಕಳೆದ ಚುನಾವಣೆಯಲ್ಲಿ ಸೋತಿದ್ದ ಎ.ಪಿ.ರಂಗನಾಥ್‌ರನ್ನು ಜೆಡಿಎಸ್‌ ಕಣಕ್ಕಿಳಿಸಿತ್ತು. ಆರಂಭದಲ್ಲಿ ತುಸು ಮುನಿಸು ತೋರಿದ ಬಿಜೆಪಿ ಆ ಬಳಿಕ ಮೈತ್ರಿಧರ್ಮಕ್ಕೆ ಕಟ್ಟು ಬಿದ್ದು ಚುನಾವಣೆಯಲ್ಲಿ ಸಕ್ರಿಯವಾಗಿಯೇ ಚುನಾವಣೆಯಲ್ಲಿ ತೊಡಗಿಸಿಕೊಂಡಿ ತ್ತಾದರೂ ಜಯ ತಂದು ಕೊಡಲು ಸಾಧ್ಯವಾಗಲಿಲ್ಲ.

ಪರಿಷತ್‌ನಲ್ಲಿ ಪಕ್ಷಗಳ ಬಲಾಬಲ
ಪುಟ್ಟಣ್ಣ ಅವರ ಪ್ರವೇಶದೊಂದಿಗೆ ವಿಧಾನ ಪರಿಷತ್‌ನಲ್ಲಿ ಆಡಳಿತ ರೂಢ ಕಾಂಗ್ರೆಸ್‌ನ ಸ್ಥಾನಗಳ ಸಂಖ್ಯೆ 30ಕ್ಕೆ ಏರಲಿದೆ. ಕಾಂಗ್ರೆಸ್‌ನಿಂದ ವಿಧಾನ ಪರಿಷತ್‌ ಪ್ರವೇಶಿಸಿದ್ದ ಜಗದೀಶ್‌ ಶೆಟ್ಟರ್‌ ರಾಜೀನಾಮೆಯಿಂದ ಒಂದು ಸ್ಥಾನ ಖಾಲಿ ಉಳಿದಿದೆ.

ಸಭಾಪತಿ – 1, ಬಿಜೆಪಿ – 34, ಕಾಂಗ್ರೆಸ್‌ – 30
ಜೆಡಿಎಸ್‌ – 8, ಸ್ವತಂತ್ರ – 1, ಖಾಲಿ – 1

ಬಿಜೆಪಿ ಮತ್ತು ಜೆಡಿಎಸ್‌ ನಾಯಕರ ನಡುವೆ ಮೈತ್ರಿಯಾಗಿದೆಯೇ ಹೊರತು ಇದಕ್ಕೆ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ವಿಧಾನ ಪರಿಷತ್‌ ಉಪಚುನಾವಣೆ ಫ‌ಲಿತಾಂಶ ಸ್ಪಷ್ಟಪಡಿಸಿದೆ .
-ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.