Monkey Disease; ರಾಜ್ಯದಲ್ಲಿ ಹೆಚ್ಚುತ್ತಿರುವ ಕೆಎಫ್ ಡಿ: ನಿರ್ಲಕ್ಷ್ಯ ಸಲ್ಲ


Team Udayavani, Feb 21, 2024, 6:15 AM IST

Monkey Disease; ರಾಜ್ಯದಲ್ಲಿ ಹೆಚ್ಚುತ್ತಿರುವ ಕೆಎಫ್ ಡಿ: ನಿರ್ಲಕ್ಷ್ಯ ಸಲ್ಲ

ರಾಜ್ಯದಲ್ಲಿ “ಮಂಗನ ಕಾಯಿಲೆ’ ಎಂದು ಸಾಮಾನ್ಯವಾಗಿ ಕರೆಯಲಾಗುವ ಕೆಎಫ್ ಡಿ ಸೋಂಕಿಗೆ ಗುರಿಯಾದವರ ಸಂಖ್ಯೆ ನೂರು ದಾಟಿರುವುದು ಆತಂಕಕಾರಿ ಬೆಳವಣಿಗೆ. ಕಳೆದ ಕೆಲವು ವರ್ಷಗಳಲ್ಲಿ ಕಾಣಿಸಿಕೊಳ್ಳದಿದ್ದ ಕೆಎಫ್ ಡಿ ಈ ವರ್ಷ ಮತ್ತೆ ಮಲೆನಾಡಿನಲ್ಲಿ ಪತ್ತೆಯಾಗಿರುವುದು ಸಹಜವಾಗಿಯೇ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಕೆಎಫ್ ಡಿ ಪೀಡಿತ ಎಂದು ಗುರುತಿಸಲಾದ 12 ಜಿಲ್ಲೆಗಳಿವೆಯಾದರೂ, ಈಗ ಬರೆ ಮೂರು ಜಿಲ್ಲೆಗಳಿಗಷ್ಟೇ ಇದು ವ್ಯಾಪಕವಾಗಿರುವುದು ಒಂದಿಷ್ಟು ಸಮಾಧಾನದ ಸಂಗತಿ. ಪ್ರಸಕ್ತ ವರ್ಷ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೋಂಕು ತೀವ್ರಗತಿಯಲ್ಲಿ ಹಬ್ಬುತ್ತಿದ್ದು, ಈ ತನಕ 4,080 ಜನರನ್ನು ಪರೀಕ್ಷೆಗೊಳಪಡಿಸಲಾಗಿದೆ. ಸೋಮವಾರದ ತನಕ 103 ಜನರಿಗೆ ಸೋಂಕು ದೃಢವಾಗಿದೆ.

ದುರಂತವೆಂದರೆ, ಈ ಕಾಯಿಲೆ ಈ ಭಾಗದಲ್ಲಿ ಪತ್ತೆಯಾಗಿ ಅರುವತ್ತು ವರ್ಷಗಳು ಕಳೆದರೂ ಇನ್ನೂ ಅದಕ್ಕೆ ಸೂಕ್ತ ಲಸಿಕೆ ಮತ್ತು ಚಿಕಿತ್ಸೆಗೆ ಸರಕಾರಗಳು ವ್ಯವಸ್ಥೆ ಮಾಡದೇ ಇರುವುದು. ಕೋವಿಡ್‌ನ‌ಂಥ ಮಹಾಮಾರಿಗೆ ಕೆಲವೇ ತಿಂಗಳಲ್ಲಿ ಲಸಿಕೆ ಕಂಡುಹಿಡಿದ ನಮ್ಮ ದೇಶದಲ್ಲಿ ಕೆಎಫ್ಡಿಯಂಥ ಸಮಸ್ಯೆಗೆ ಇನ್ನೂ ಲಸಿಕೆಯನ್ನು ಮರು ಆವಿಷ್ಕಾರ ಮಾಡ ಲಾಗದೇ ಇರುವುದು ನಾಚಿಕೆಗೇಡು. ಇನ್ನೂ ಅಪಮಾನಕಾರಿ ಸಂಗತಿ ಎಂದರೆ, ಈ ಬಗ್ಗೆ ಸಂಶೋಧನೆ ನಡೆಸಲು ಈ ಭಾಗದಲ್ಲಿ ಒಂದೇ ಒಂದು ಕೇಂದ್ರವನ್ನು ಸ್ಥಾಸಲು ಸರಕಾರಗಳು ವಿಫ‌ಲವಾಗಿರುವುದು. ಜನ ಸಾಮಾ ನ್ಯರ ಬದುಕಿನ ಬಗ್ಗೆ ಆಡಳಿತಾರೂಢರಿಗೆ ಇರುವ ಕಳಕಳಿಯನ್ನು ಇದು ಸೂಚಿಸುತ್ತದೆ.
ಹಿಂದೆ ಕೇಂದ್ರ ಸರಕಾರ “ಒನ್‌ ಹೆಲ್ತ್‌’ ಯೋಜನೆಯಡಿ ಕೆಎಫ್ಡಿ ಕುರಿತು ಸಂಶೋಧನೆ ಕೈಗೊಳ್ಳಲಿದೆ ಎಂಬ ವರದಿಗಳು ಬಂದಿದ್ದವು. ಆದರೆ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದಾಗಿ ಇದು ಕಾರ್ಯಸಾಧುವಾಗಲೇ ಇಲ್ಲ. ಈಗ ಶಿರಸಿ ಹಾಗೂ ಸಾಗರದಲ್ಲಿ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಸರಕಾರ ಮುಂದಾಗಿರುವುದು ಶ್ಲಾಘನೀಯ.

ಈ ಸಲ ಕೆಎಫ್ ಡಿ ತೀವ್ರವಾಗಿ ಹರಡುತ್ತಿರುವುದು ಈ ಭಾಗದಲ್ಲಿ ಮತ್ತಷ್ಟು ಭಯಕ್ಕೆ ಕಾರಣವಾಗಿದೆ. ಅಡಿಕೆ ಕುಯಿಲಿನ ಸಂದರ್ಭದಲ್ಲಿ ಈ ವೈರಸ್‌ ಹಬ್ಬುತ್ತಿದೆ ಎನ್ನುವುದು ಈಚೆಗೆ ಬಾಲಕಿಯೊಬ್ಬಳು ಸಾವನ್ನಪ್ಪಿರುವುದರಿಂದ ಖಚಿತವಾಗಿದೆ. ಕೊಪ್ಪದಲ್ಲಿ ತೋಟಕ್ಕೆ ಕೆಲಸಕ್ಕೆಂದು ಬಂದಿದ್ದ ಉತ್ತರ ಭಾರತದ ಕಾರ್ಮಿಕರಲ್ಲೂ ಸೋಂಕು ಕಾಣಿಸಿಕೊಂಡಿದೆ. ಇದನ್ನೆಲ್ಲ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಜನಸಾಮಾನ್ಯರಿಗೆ ಕೆಎಫ್ಡಿ ಸೋಂಕು ಹೇಗೆ ಬರುತ್ತದೆ ಎನ್ನುವ ಸಾಮಾನ್ಯ ಮಾಹಿತಿಯೂ ಇಲ್ಲದೆ ಇರುವುದನ್ನು ನೋಡಿದರೆ ನಮ್ಮ ಆರೋಗ್ಯ ಇಲಾಖೆ ಈ ಕುರಿತು ಯಾವ ಮಟ್ಟದಲ್ಲಿ ಜಾಗೃತಿ ಮೂಡಿಸುತ್ತಿದೆ ಎನ್ನುವುದಕ್ಕೆ ಕನ್ನಡಿ ಹಿಡಿಯುತ್ತದೆ. ಲಸಿಕೆ ಹಾಗೂ ಚಿಕಿತ್ಸೆಯ ಜತೆಗೆ ಈ ಸೋಂಕಿನ ಕುರಿತು ಜನಸಾಮಾನ್ಯರಲ್ಲಿ ಸರಿಯಾದ ಜಾಗೃತಿ ಮೂಡಿಸುವ ಕೆಲಸ ಆದ್ಯತೆಯಲ್ಲಿ ನಡೆಯಬೇಕಿದೆ. ಶಾಲಾ ಮಟ್ಟದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಈ ಭಾಗದಲ್ಲಿ ಅನಾರೋಗ್ಯದ ಗುಣಲಕ್ಷಣ ಕಾಣಿಸಿಕೊಂಡ ಕೂಡಲೇ ತಡ ಮಾಡದೆ ತಪಾಸಣೆ ಹಾಗೂ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಾರ್ಯತತ್ಪರವಾಗಬೇಕು ಹಾಗೂ ಇದಕ್ಕೆ ಜನರ ಸಹಕಾರವೂ ಬೇಕು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.