Krishna Bhairegowda: ಉಪ ನೋಂದಣಾಧಿಕಾರಿ ಹೆಸರಿನಲ್ಲಿ ಹಣ ವಸೂಲಿ ಮಾಡಿದರೆ ಕ್ರಮ; ಸಚಿವ
Team Udayavani, Feb 22, 2024, 9:38 PM IST
ವಿಧಾನ ಪರಿಷತ್ತು: ಸಬ್ ರಿಜಿಸ್ಟ್ರಾರ್ ಕಚೇರಿಗೆ ಆಸ್ತಿ ನೋಂದಣಿಗೆ ಬರುವ ಸಾರ್ವಜನಿಕರಿಂದ ಸ್ಟಾಂಪ್ ವೆಂಡರ್ಸ್ ನಿಗದಿಪಡಿಸಿದ ಶುಲ್ಕಕಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಅಂತವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಎಚ್ಚರಿಕೆ ನೀಡಿದರು.
ಪರಿಷತ್ತಿನಲ್ಲಿ ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ- 2024 ಮಂಡಿಸಿ ಅವರು ಮಾತನಾಡಿದರು.
ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ಹಲವು ಸದಸ್ಯರು ನೋಂದಣಿ ವಿಧೇಯಕದ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಹಲವು ಸಲಹೆಗಳನ್ನು ನೀಡಿದ್ದಾರೆ. ನೋಂದಣಿ ಇಲಾಖೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಸ್ಯಾಂಪ್ ವೆಂಡರ್ಸ್ಗಳು, ವಕೀಲರು ಉಪನೋಂದಣಾಧಿಕಾರಿಗಳ ಹೆಸರು ಹೇಳಿಕೊಂಡು ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಬಗ್ಗೆ ಇಲಾಖೆಗೆ ಸಾಕಷ್ಟು ದೂರು ಬಂದಿವೆ ಎಂದರು.
ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಸಹಾಯ ವಾಣಿ ಯೊಂದನ್ನು ಆರಂಭಿಸಿದೆ. ಉಪ ನೋಂದಣಿ ಅಧಿಕಾರಿಗಳ ಹೆಸರು ಹೇಳಿಕೊಂಡು ಹೆಚ್ಚು ಹಣ ವಸೂಲಿ ಮಾಡಿದ ಸ್ಟಾಂಪ್ ವೆಂಡರ್ ವಿರುದ್ದ ಸಾಕ್ಷ್ಯ ಸಹಿತ
ಸಹಾಯವಾಣಿಗೆ ಸಂಖ್ಯೆ 080-68265316 ಕರೆ ಮಾಡಿ ದೂರು ದಾಖಲಿಸಿದರೆ ಅಂತವರ ವಿರುದ್ಧ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದರು. ಒಂದು ವೇಳೆ ಆರೋಪ ರುಜುವಾತಾದರೆ ಸ್ಟಾಂಪ್ ವೆಂಡರ್ ಅವರ ಪರವಾನಗಿ ರದ್ದು ಮಾಡುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.