ಇಂದಿನಿಂದ ರಣಜಿ ಟ್ರೋಫಿ ಕ್ವಾರ್ಟರ್‌ ಫೈನಲ್ಸ್‌ :ಕರ್ನಾಟಕಕ್ಕೆ ವಿದರ್ಭ ಸವಾಲು


Team Udayavani, Feb 23, 2024, 7:15 AM IST

ಇಂದಿನಿಂದ ರಣಜಿ ಟ್ರೋಫಿ ಕ್ವಾರ್ಟರ್‌ ಫೈನಲ್ಸ್‌ :ಕರ್ನಾಟಕಕ್ಕೆ ವಿದರ್ಭ ಸವಾಲು

ನಾಗ್ಪುರ: ಒಂದು ತಿಂಗಳ ಲೀಗ್‌ ಹಣಾಹಣಿಯ ಬಳಿಕ ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯ ಕ್ವಾರ್ಟರ್‌ ಫೈನಲ್‌ ಸ್ಪರ್ಧೆಗೆ ಸಮಯ ಕೂಡಿಬಂದಿದೆ. ಬಹುತೇಕ ಬಲಿಷ್ಠ ತಂಡಗಳೇ ನಾಕೌಟ್‌ಗೆ ಪ್ರವೇಶ ಪಡೆದಿವೆ. ಇವುಗಳಲ್ಲಿ ಕರ್ನಾಟಕವೂ ಒಂದು. ನಾಗ್ಪುರದಲ್ಲಿ ನಡೆಯುವ ಮುಖಾಮುಖೀಯಲ್ಲಿ ಮಾಯಾಂಕ್‌ ಅಗರ್ವಾಲ್‌ ಪಡೆ ವಿದರ್ಭವನ್ನು ಎದುರಿಸಲಿದೆ.

41 ಬಾರಿಯ ಚಾಂಪಿಯನ್‌ ಮುಂಬಯಿ, ತಮಿಳುನಾಡು, ಬರೋಡ, ಸೌರಾಷ್ಟ್ರ, ಆಂಧ್ರ ಪ್ರದೇಶ ಮತ್ತು ಮಧ್ಯ ಪ್ರದೇಶ ಉಳಿದ ತಂಡಗಳು.

ವಿದರ್ಭ ಅಜೇಯ ತಂಡ:

ಕರ್ನಾಟಕದ ಎದುರಾಳಿಯಾಗಿರುವ ವಿದರ್ಭಕ್ಕೆ ಇದು ತವರಿನ ಪಂದ್ಯ. ಗ್ರೂಪ್‌ ವಿಭಾಗದಲ್ಲಿ ಅತ್ಯಧಿಕ 5 ಪಂದ್ಯ ಗೆದ್ದ ಕೇವಲ 2ನೇ ತಂಡವೆಂಬುದು ವಿದರ್ಭದ ಹಿರಿಮೆ. ಇನ್ನೊಂದು ತಂಡ ಮುಂಬಯಿ. ವಿದರ್ಭ “ಎ’ ವಿಭಾಗದ ಟಾಪ್‌ ಟೀಮ್‌. ಒಂದು ಪಂದ್ಯ ಸೋತ ಕರ್ನಾಟಕ “ಸಿ’ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿತ್ತು.

ಫ‌ಯಾಜ್‌ ಫ‌ಜಲ್‌ ಕೊನೆಯ ಲೀಗ್‌ ಪಂದ್ಯದ ಬಳಿಕ ನಿವೃತ್ತಿ ಘೋಷಿಸಿದ್ದು ವಿದರ್ಭಕ್ಕೆ ಎದುರಾದ ದೊಡ್ಡ ಹಿನ್ನಡೆ. ನಾಯಕ ಅಕ್ಷಯ್‌ ವಾಡ್ಕರ್‌ (431 ರನ್‌), ಧ್ರುವ ಶೋರಿ (427 ರನ್‌) ಹಾಗೂ ಕರ್ನಾಟಕದ ಮಾಜಿ ಆಟಗಾರ ಕರುಣ್‌ ನಾಯರ್‌ (391 ರನ್‌) ವಿದರ್ಭದ ಪ್ರಮುಖ ಬ್ಯಾಟರ್‌ಗಳಾಗಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ಆದಿತ್ಯ ಸರ್ವಟೆ, ಆದಿತ್ಯ ಠಾಕರೆ ತಲಾ 30 ವಿಕೆಟ್‌ ಉಡಾಯಿಸಿ ಅಪಾಯಕಾರಿಗಳಾಗಿ ಗೋಚರಿಸಿದ್ದಾರೆ.

ಕಾಡಲಿದೆ ಪಡಿಕ್ಕಲ್‌ ಗೈರು :

ಕರ್ನಾಟಕಕ್ಕೆ ದೇವದತ್ತ ಪಡಿಕ್ಕಲ್‌ ಗೈರು ಖಂಡಿತ ಕಾಡಲಿದೆ. ಅವರು ಭಾರತದ ಟೆಸ್ಟ್‌ ತಂಡದಲ್ಲಿದ್ದಾರೆ. ನಾಲ್ಕೇ ಪಂದ್ಯಗಳಲ್ಲಿ 556 ರನ್‌ ಪೇರಿಸಿದ ಹೆಗ್ಗಳಿಕೆ ಪಡಿಕ್ಕಲ್‌ ಅವರದ್ದಾಗಿದೆ. ಸರಾಸರಿ 92.66. ಹಿರಿಯ ಬ್ಯಾಟರ್‌ ಮನೀಷ್‌ ಪಾಂಡೆ (464 ರನ್‌), ಶರತ್‌ ಶ್ರೀನಿವಾಸ್‌ (429 ರನ್‌) ಕರ್ನಾಟಕದ ಟಾಪ್‌-2 ಬ್ಯಾಟರ್‌ಗಳಾಗಿದ್ದಾರೆ.

ನಾಯಕ ಮಾಯಾಂಕ್‌ ಅಗರ್ವಾಲ್‌, ಇವರ ಆರಂಭಿಕ ಜತೆಗಾರ ಆರ್‌. ಸಮರ್ಥ್, ನಿಕಿನ್‌ ಜೋಸ್‌ ಸ್ಥಿರವಾದ ಬ್ಯಾಟಿಂಗ್‌ ಪ್ರದರ್ಶಿಸಬೇಕಾದ ಅಗತ್ಯವಿದೆ.

ಕ್ವಾರ್ಟರ್‌ ಫೈನಲ್ಸ್‌ :

  1. ವಿದರ್ಭ-ಕರ್ನಾಟಕ (ನಾಗ್ಪುರ)
  2. ಮುಂಬಯಿ-ಬರೋಡ (ಮುಂಬಯಿ)
  3. ತಮಿಳುನಾಡು-ಸೌರಾಷ್ಟ್ರ (ಕೊಯಮತ್ತೂರು)
  4. ಮಧ್ಯ ಪ್ರದೇಶ-ಆಂಧ್ರ ಪ್ರದೇಶ (ಇಂದೋರ್‌)

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.