BJP ಯೊಂದಿಗೆ ಯಾವುದೇ ರೀತಿಯ ಸಮಸ್ಯೆಗಳಿಲ್ಲ: ಶಾ ಭೇಟಿ ಬಳಿಕ ಎಚ್.ಡಿ.ಕುಮಾರಸ್ವಾಮಿ

ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.... ಡಾ.ಮಂಜುನಾಥ್ ಸ್ಪರ್ಧೆ ಕುರಿತು ಮಾಜಿ ಸಿಎಂ ಹೇಳಿದ್ದೇನು?

Team Udayavani, Feb 23, 2024, 7:05 PM IST

HDK BJP

ಬೆಂಗಳೂರು: ”ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಬಿಜೆಪಿಯೊಂದಿಗೆ ಯಾವುದೇ ರೀತಿಯ ಸಮಸ್ಯೆಗಳಿಲ್ಲ, ರಾಜ್ಯದ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಮೈತ್ರಿಕೂಟ ಗೆಲ್ಲಬೇಕು ಎಂಬುದು ನಮ್ಮ ಉದ್ದೇಶವಾಗಿದೆ” ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಶುಕ್ರವಾರ ಹೇಳಿದ್ದಾರೆ.

ಪುತ್ರ ನಿಖಿಲ್ ಅವರೊಂದಿಗೆ ಗುರುವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಎರಡೂ ಪಕ್ಷಗಳು ಒಟ್ಟಾಗಿ ನಿರ್ಧಾರ ಕೈಗೊಳ್ಳಲಿವೆ ಎಂದು ಹೇಳಿದ್ದಾರೆ.

ಇನ್ನೂ ನಿರ್ಧರಿಸಿಲ್ಲ
ಡಾ.ಮಂಜುನಾಥ್ ಅವರು ಚುನಾವಣೆಗೆ ಸ್ಪರ್ಧಿಸುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ “ರಾಜ್ಯ ಮತ್ತು ವೈದ್ಯಕೀಯ ಕ್ಷೇತ್ರಕ್ಕೆ ಅವರ ಸೇವೆಯ ಬಗ್ಗೆ ಎಲ್ಲರಿಗೂ ಸಕಾರಾತ್ಮಕ ಅಭಿಪ್ರಾಯವಿದೆ, ಅದರ ಆಧಾರದ ಮೇಲೆ ಕೆಲವರು ಅವರನ್ನು ರಾಜಕೀಯಕ್ಕೆ ಕರೆ ತರುವ ಬಗ್ಗೆ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ. ಸಮಯ ಬಂದಾಗ ನೋಡೋಣ” ಎಂದರು.

ಡಿ.ಕೆ. ಸುರೇಶ್ ಅವರು ಪ್ರತಿನಿಧಿಸುತ್ತಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮಂಜುನಾಥ್ ಅವರನ್ನು ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಬಗ್ಗೆ ತೀವ್ರ ಊಹಾಪೋಹಗಳಿವೆ.ಕೆಲವು ವರದಿಗಳ ಪ್ರಕಾರ, ಎರಡೂ ಪಕ್ಷಗಳ ನಡುವಿನ ಹೊಂದಾಣಿಕೆಯ ಆಧಾರದ ಮೇಲೆ ಅವರು ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಬಹುದು ಎನ್ನಲಾಗಿದೆ.

ಫೆಬ್ರವರಿ 27 ರಂದು ತಿಳಿಯಲಿದೆ
ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ನಾಯಕ ಡಿ ಕುಪೇಂದ್ರ ರೆಡ್ಡಿ ಅವರ ಗೆಲುವಿನ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ” ನಾವೆಲ್ಲರೂ ಗುರಿಯನ್ನು ಗೆಲ್ಲುವ ಹಂಬಲದಿಂದ ಯಾವುದೇ ಕೆಲಸ ಮಾಡುತ್ತೇವೆ. ಆಸೆ ಈಡೇರುತ್ತದೋ ಇಲ್ಲವೋ ಎಂಬುದು ಫೆಬ್ರವರಿ 27 ರಂದು ನಡೆಯುವ ಮತದಾನದ ನಂತರ ತಿಳಿಯಲಿದೆ ಎಂದರು.

ಮೈತ್ರಿಕೂಟಕ್ಕೆ ನಾಲ್ಕರಲ್ಲಿ ಒಂದನ್ನು ಮಾತ್ರ ಗೆಲ್ಲುವ ಸಾಮರ್ಥ್ಯವಿದ್ದರೂ ಬಿಜೆಪಿ-ಜೆಡಿ(ಎಸ್) ಮೈತ್ರಿ ರೆಡ್ಡಿ ಅವರನ್ನು ಎರಡನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.

ವಾಯ್ಸ್ ರೆಸ್ಟ್ ಗೆ ಸಲಹೆ
ಹೆಚ್ಚು ಮಾತನಾಡಬೇಡಿ ಎಂದು ವೈದ್ಯರು ಸಲಹೆ ನೀಡಿದ್ದರಿಂದ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಬೊಕ್ಕಸ ಖಾಲಿ
ಇತ್ತೀಚಿಗೆ ವಿಧಾನ ಪರಿಷತ್ತಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರಕಾರ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಗುರಿಯಾಗಿಸಿಕೊಂಡು ರಾಜ್ಯಕ್ಕೆ ಕೇಂದ್ರದ ಅನುದಾನಕ್ಕೆ ಒತ್ತಾಯಿಸಿ ಭಾಷಣ ಮಾಡಿರುವುದು ರಾಜ್ಯದ ಘನತೆಯನ್ನು ಕೆಡವಿದ್ದಾರೆ.
ಸಿಎಂ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು.

ಕರ್ನಾಟಕ ಶ್ರೀಮಂತ ರಾಜ್ಯವಾಗಿದ್ದು, ಸ್ವಂತ ತೆರಿಗೆ ಆದಾಯಕ್ಕೆ ಬಂದರೆ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಹಣದ ಕೊರತೆ ಇಲ್ಲ. ನಿಮ್ಮ ಲೂಟಿಯ ದಾಹ ನೀಗಿಸಿಕೊಳ್ಳಲು ರಾಜ್ಯದ ಬೊಕ್ಕಸವನ್ನು ಖಾಲಿ ಮಾಡುತ್ತಿದ್ದೀರಿ. ಖಜಾನೆ ಖಾಲಿಯಾಗುತ್ತಿರುವುದು ಖಾತರಿ ಯೋಜನೆಗಳಿಂದಲ್ಲ. ರಾಜ್ಯ ಸರಕಾರ ನಿರಂತರವಾಗಿ ಕೇಂದ್ರದ ವಿರುದ್ಧ ಹೋರಾಟ ನಡೆಸುತ್ತಿದೆ ಎಂದು ಕಿಡಿ ಕಾರಿದರು.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.