Ranji:ಕರ್ನಾಟಕ ತಂಡದೆದುರು ಉತ್ತಮ ಸ್ಥಿತಿಯಲ್ಲಿ ವಿದರ್ಭ


Team Udayavani, Feb 23, 2024, 11:34 PM IST

1-asdsad

ನಾಗ್ಪುರ: ಆರಂಭಿಕ ಆಟಗಾರ ಅಥರ್ವ ಟೈಡ್‌ ಅವರ ಅಮೋಘ ಶತಕ ದಿಂದಾಗಿ ವಿದರ್ಭ ತಂಡವು ಕರ್ನಾಟಕ ತಂಡದೆದುರಿನ ರಣಜಿ ಟ್ರೋಫಿ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಉತ್ತಮ ಮೊತ್ತ ಪೇರಿಸು ವತ್ತ ಹೊರಟಿದೆ. ಅಥರ್ವ ಅವರ ಶತಕ ಮತ್ತು ಯಶ್‌ ರಾಥೋಡ್‌ ಅವರ 93 ರನ್‌ ನೆರವಿನಿಂದಾಗಿ ವಿದರ್ಭ ತಂಡವು ಮೊದಲ ದಿನದಾಟದ ಅಂತ್ಯಕ್ಕೆ ಮೂರು ವಿಕೆಟಿಗೆ 261 ರನ್‌ ಪೇರಿಸಿದೆ.

ಲೀಗ್‌ ಹಂತದಲ್ಲಿ ಬೌಲಿಂಗ್‌ನಲ್ಲಿ ಉತ್ತಮ ನಿರ್ವಹಣೆ ನೀಡಿದ್ದ ಕರ್ನಾಟಕ ತಂಡವು ಈ ಪಂದ್ಯದಲ್ಲಿ ಪರಿಣಾಮಕಾರಿಯಾಗಿ ದಾಳಿ ಸಂಘಟಿಸಲು ವಿಫ‌ಲವಾಗಿದೆ. ಅದರ ಪೂರ್ಣ ಲಾಭ ಪಡೆದ ವಿದರ್ಭ ತಂಡವು ದೊಡ್ಡ ಮೊತ್ತ ಪೇರಿಸುವ ಸೂಚನೆ ನೀಡಿದೆ. ಇದರಿಂದಾಗಿ ಕರ್ನಾಟಕ ತಂಡ ಬಹಳ ಎಚ್ಚರಿಕೆಯಿಂದ ಆಡಬೇಕಾದ ಅಗತ್ಯವಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಲು ಕರ್ನಾಟಕ ಪ್ರಯತ್ನ ಪಡಬೇಕಾಗಿದೆ.

ವಿದರ್ಭ ಮೊದಲ ವಿಕೆಟನ್ನು ಬೇಗನೇ ಕಳೆದುಕೊಂಡರೂ ಅಥರ್ವ ಮತ್ತು ಯಶ್‌ ರಾಥೋಡ್‌ ದ್ವಿತೀಯ ವಿಕೆಟಿಗೆ 184 ರನ್ನುಗಳ ಜತೆಯಾಟ ನಡೆಸಿ ತಂಡವನ್ನು ಉತ್ತಮ ಸ್ಥಿತಿಗೆ ತಲುಪಿಸುವಲ್ಲಿ ಯಶಸ್ವಿಯಾದರು. ಈ ಹಂತದಲ್ಲಿ ಶತಕದತ್ತ ದಾಪುಗಾಲು ಹಾಕುತ್ತಿದ್ದ ರಾಥೋಡ್‌ ಅವರನ್ನು ಕಾವೇರಪ್ಪ ಔಟ್‌ ಮಾಡಿಸಿದರು. 157 ಎಸೆತ ಎದುರಿಸಿದ ಅವರು 12 ಬೌಂಡರಿ ನೆರವಿನಿಂದ 93 ರನ್‌ ಗಳಿಸಿದ್ದರು. ಇದೇ ವೇಳೆ ಅಥರ್ವ ಟೈಡ್‌ 109 ರನ್‌ ಗಳಿಸಿ ಔಟಾದರು. 244 ಎಸೆತ ಎದುರಿಸಿದ ಅವರು 16 ಬೌಂಡರಿ ಮತ್ತು 1 ಸಿಕ್ಸರ್‌ ಬಾರಿಸಿದ್ದರು. ಈ ಹಿಂದೆ ಕರ್ನಾಟಕ ಪರ ಆಡಿದ್ದ ಕರುಣ್‌ ನಾಯರ್‌ 30 ರನ್‌ ಗಳಿಸಿ ಔಟಾಗದೆ ಉಳಿದಿದ್ದಾರೆ.

ಸಂಕ್ಷಿಪ್ತ ಸ್ಕೋರು: ವಿದರ್ಭ ಮೊದಲ ಇನ್ನಿಂಗ್ಸ್‌: ಮೂರು ವಿಕೆಟಿಗೆ 261 (ಅಥರ್ವ ಟೈಡ್‌ 109, ಯಶ್‌ ರಾಥೋಡ್‌ 93, ಕರುಣ್‌ ನಾಯರ್‌ 30 ಬ್ಯಾಟಿಂಗ್‌).

ಕುಸಿದ ಸೌರಾಷ್ಟ್ರ
ಕೊಯಮತ್ತೂರಿನಲ್ಲಿ ಸಾಗುತ್ತಿರುವ ಇನ್ನೊಂದು ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ತಮಿಳುನಾಡಿನ ಸಾಯಿ ಕಿಶೋರ್‌ ಅವರ ದಾಳಿಗೆ ತತ್ತರಿಸಿದ ಹಾಲಿ ಚಾಂಪಿಯನ್‌ ಸೌರಾಷ್ಟ್ರ ತಂಡವು ಕೇವಲ 183 ರನ್ನಿಗೆ ಆಲೌಟಾಗಿದೆ. 27ರ ಹರೆಯದ ಸಾಯಿ ಕಿಶೋರ್‌ 66 ರನ್ನಿಗೆ 5 ವಿಕೆಟ್‌ ಉರುಳಿಸಿದ್ದಾರೆ. ಅವರು ಈ ಕೂಟದಲ್ಲಿ ಗರಿಷ್ಠ 43 ವಿಕೆಟ್‌ ಕಿತ್ತ ಸಾಧನೆ ಮಾಡಿದ್ದಾರೆ.
ಮೊದಲ ದಿನದಾಟದ ಅಂತ್ಯಕ್ಕೆ ತಮಿಳು ನಾಡು ಒಂದು ವಿಕೆಟ್‌ ಕಳೆದುಕೊಂಡಿದ್ದು 23 ರನ್‌ ಗಳಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಲು ತಮಿಳುನಾಡು ಇನ್ನೂ 160 ರನ್‌ ಗಳಿಸಬೇಕಾಗಿದೆ.

ಮಧ್ಯಪ್ರದೇಶ 9ಕ್ಕೆ 234
ಇಂಧೋರ್‌ನಲ್ಲಿ ನಡೆಯುತ್ತಿರುವ ಪಂದ್ಯ ದಲ್ಲಿ ಆಂಧ್ರ ವಿರುದ್ಧ ಮಧ್ಯ ಪ್ರದೇಶ 9 ವಿಕೆಟಿಗೆ 234 ರನ್‌ ಗಳಿಸಿ ಆಡುತ್ತಿದೆ. ಯಶ್‌ ದುಬೆ (64) ಮತ್ತು ಹಿಮಾಂಶು ಮಂತ್ರಿ (49), ಸಾರಾನ್ಸ್‌ ಜೈನ್‌ (41 ಬ್ಯಾಟಿಂಗ್‌) ಅವರ ಉತ್ತಮ ಆಟದಿಂದಾಗಿ ತಂಡ ಚೇತರಿಸಿಕೊಂಡಿದೆ.

ಮುಂಬಯಿಗೆ ಮುಶೀರ್‌ ನೆರವು
ಅಂಡರ್‌-19 ವಿಶ್ವಕಪ್‌ನಲ್ಲಿ ಭಾರತದ ಸ್ಟಾರ್‌ ಆಟಗಾರಾಗಿ ಕಾಣಿಸಿಕೊಂಡಿದ್ದ ಮುಶೀರ್‌ ಖಾನ್‌ ಅವರು ಶುಕ್ರವಾರದಿಂದ ಆರಂಭವಾದ ಬರೋಡ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಮುಂಬಯಿ ತಂಡದ ನೆರವಿಗೆ ನಿಂತಿದ್ದಾರೆ. ಅವರ ಚೊಚ್ಚಲ ಪ್ರಥಮ ದರ್ಜೆ ಶತಕದಿಂದಾಗಿ ಮುಂಬಯಿ ತಂಡವು ಮೊದಲ ದಿನದಾಟದ ಅಂತ್ಯಕ್ಕೆ 5 ವಿಕೆಟಿಗೆ 248 ರನ್‌ ಪೇರಿಸಿದೆ.

ಒಂದು ಹಂತದಲ್ಲಿ 99 ರನ್ನಿಗೆ 4 ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿದ್ದ ಮುಂಬಯಿ ತಂಡವನ್ನು ಮುಶೀರ್‌ ಆಧರಿಸಿದರು. ಅವರ ಅಜೇಯ 128 ರನ್‌ ನೆರವಿನಿಂದ ತಂಡ ಉತ್ತಮ ಸ್ಥಿತಿಗೆ ತಲುಪುವಂತಾಯಿತು. 216 ಎಸೆತ ಎದುರಿಸಿದ ಅವರು 10 ಬೌಂಡರಿ ಬಾರಿಸಿದ್ದಾರೆ. 18ರ ಹರೆಯದ ಮುಶೀರ್‌ ಇತ್ತೀಚೆಗೆ ಮುಗಿದ ಅಂಡರ್‌ -19 ವಿಶ್ವಕಪ್‌ನಲ್ಲೂ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದರು. ಬರೋಡದ ಅನುಭವಿ ಬೌಲರ್‌ ಭಾರ್ಗವ್‌ ಭಟ್‌ 82 ರನ್ನಿಗೆ ನಾಲ್ಕು ವಿಕೆಟ್‌ ಕಿತ್ತು ಮುಂಬಯಿಗೆ ಹೊಡೆತ ನೀಡಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Paralympics closing ceremony: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌, ಪ್ರೀತಿ ಧ್ವಜಧಾರಿಗಳು

Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

Paris Paralympics; Another gold for India; Praveen Kumar won gold in high jump

Paralympics; ಭಾರತಕ್ಕೆ ಮತ್ತೊಂದು ಬಂಗಾರ; ಹೈಜಂಪ್‌ ನಲ್ಲಿ ಚಿನ್ನ ಗೆದ್ದ ಪ್ರವೀಣ್‌ ಕುಮಾರ್

Vikram Rathore; Former coach of Team India joined New Zealand team

Vikram Rathour; ನ್ಯೂಜಿಲ್ಯಾಂಡ್‌ ತಂಡ ಸೇರಿದ ಟೀಂ ಇಂಡಿಯಾ ಮಾಜಿ ಕೋಚ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.