Udupi MGM College ground: “ಬಿಲ್ಡ್‌ ಟೆಕ್‌-2024′ ಕಟ್ಟಡ ಸಾಮಗ್ರಿ ಪ್ರದರ್ಶನಕ್ಕೆ ಚಾಲನೆ


Team Udayavani, Feb 24, 2024, 1:04 AM IST

bUdupi MGM College ground: “ಬಿಲ್ಡ್‌ ಟೆಕ್‌-2024′ ಕಟ್ಟಡ ಸಾಮಗ್ರಿ ಪ್ರದರ್ಶನಕ್ಕೆ ಚಾಲನೆ

ಉಡುಪಿ: ಅಸೋಸಿಯೇಶನ್‌ ಆಫ್ ಕನ್ಸಲ್ಟಿಂಗ್‌ ಸಿವಿಲ್‌ ಎಂಜಿನಿಯರ್ ಆ್ಯಂಡ್‌ ಆರ್ಕಿಟೆಕ್ಟ್$Õ ಮತ್ತು ಬೆಂಗಳೂರಿನ ಯು.ಎಸ್‌. ಕಮ್ಯೂನಿಕೇಶನ್ಸ್‌ ವತಿಯಿಂದ ಫೆ. 25ರ ವರೆಗೆ ಎಂಜಿಎಂ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾದ “ಬಿಲ್ಡ್‌ ಟೆಕ್‌-2024′ ಕಟ್ಟಡ ಸಾಮಗ್ರಿಗಳ ವಸ್ತು ಪ್ರದರ್ಶನಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಕ್ರೆಡೈ ಉಡುಪಿ ಅಧ್ಯಕ್ಷ ಮನೋಹರ ಎಸ್‌. ಶೆಟ್ಟಿ ಉದ್ಘಾಟಿಸಿ, ಹಿಂದೆ ಮನೆ, ಕಟ್ಟಡಗಳನ್ನು ನಿರ್ಮಿಸಲು ಸಾಕಷ್ಟು ಕಷ್ಟ ಎದುರಿಸುವುದರೊಂದಿಗೆ ಸಮಯದ ಅಭಾವವೂ ಎದುರಾಗುತ್ತಿತ್ತು. ಆದರೆ ಪ್ರಸ್ತುತ ಆಧುನಿಕ ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಕಟ್ಟಡ, ಮನೆಗಳ ನಿರ್ಮಾಣ ಅತ್ಯಂತ ಸುಲಭವಾಗಿ ಪರಿಣಮಿಸಿದೆ ಎಂದರು.

ಕಟ್ಟಡ ನಿರ್ಮಾಣಕ್ಕೆ ಬೇಕಾದ ಎಲ್ಲ ಬಗೆಯ ಸಾಮಗ್ರಿಗಳನ್ನು ಒಟ್ಟುಗೂಡಿಸಲು ಹೆಚ್ಚು ಕಷ್ಟವಾಗದು. ಪ್ರಸ್ತುತ ಜನತೆಗೆ ಅವರ ಕನಸಿನ ಮನೆ ಕಟ್ಟಲು ವಿನ್ಯಾಸಗಾರರು, ವಾಸ್ತುತಜ್ಞರು, ಕಟ್ಟಡ ಸಾಮಗ್ರಿಗಳು, ಕಾರ್ಮಿಕರು ಇತ್ಯಾದಿ ಎಲ್ಲ ರೀತಿಯ ಸಹಾಯ ಸಹಕಾರ ಅತ್ಯಂತ ಸುಲಭವಾಗಿ ದೊರಕುತ್ತಿದೆ. ಜನರಿಗೆ ಇನ್ನಷ್ಟು ಪ್ರಯೋಜನವಾಗಬೇಕು ಎನ್ನುವ ನೆಲೆಯಲ್ಲಿ ಉಡುಪಿಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಕಟ್ಟಡ ಸಾಮಗ್ರಿಗಳ ವಸ್ತು ಪ್ರದರ್ಶನದಲ್ಲಿ ಎಲ್ಲ ಸಾಮಗ್ರಿಗಳೊಂದಿಗೆ ಮಾಹಿತಿ ದೊರಕಲಿವೆ. ಜನರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾಲ ಬುಡದಲ್ಲೇ ಸೌಲಭ್ಯ
ಮಾಂಡವಿ ಬಿಲ್ಡರ್ ಆ್ಯಂಡ್‌ ಡೆವಲಪರ್ನ ಎಂಡಿ ಡಾ| ಜೆರ್ರಿ ವಿನ್ಸೆಂಟ್‌ ಡಯಾಸ್‌ ಮಾತನಾಡಿ, ಹಿಂದೆ ಕಟ್ಟಡ ಸಾಮಗ್ರಿಗಳಿಗಾಗಿ ದೂರದ ಪಟ್ಟಣಕ್ಕೆ ತೆರಳಬೇಕಿತ್ತು. ಆದರೆ ಪ್ರಸ್ತುತ ನಮ್ಮ ಕಾಲ ಬುಡದಲ್ಲೇ ಎಲ್ಲ ಬಗೆಯ ಸಾಮಗ್ರಿಗಳು ದೊರಕುತ್ತಿವೆ ಎಂದು ಹರ್ಷ ವ್ಯಕ್ತಪಡಿಸಿದರು.

ಅಸೋಸಿಯೇಶನ್‌ ಗೌರವಾಧ್ಯಕ್ಷ ಶ್ರೀನಾಗೇಶ್‌ ಹೆಗ್ಡೆ ಅವರು, ಒಂದೇ ಸೂರಿನಡಿ ಎಲ್ಲ ಬಗೆಯ ಉತ್ತಮ ಗುಣಮಟ್ಟದ ಸಾಮಗ್ರಿಗಳು ದೊರಕುತ್ತಿದ್ದು, ಎಲ್ಲರಿಗೂ ಅನುಕೂಲವಾಗಿದೆ ಎಂದು ತಿಳಿಸಿದರು.

ಶಾಂತಾ ಎಲೆಕ್ಟ್ರಿಕಲ್ಸ್‌ ಆ್ಯಂಡ್‌ ಎಂಜಿನಿಯರಿಂಗ್‌ನ ಎಂಡಿ ಶ್ರೀಪತಿ ಭಟ್‌, 3 ದಿನಗಳ ಪ್ರದರ್ಶನದ ಯಶಸ್ಸಿಗೆ ಎಲ್ಲರ ಸಹಕಾರ ಅತ್ಯಗತ್ಯ ಎಂದರು.ಉಜ್ವಲ್‌ ಡೆವಲಪರ್ನ ಎಂಡಿ ಪುರುಷೋತ್ತಮ ಪಿ. ಶೆಟ್ಟಿ, ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಗೋಪಾಲ ಎಂ. ಭಟ್‌, ಯು.ಎಸ್‌. ಕಮ್ಯೂನಿಕೇಶನ್ಸ್‌ನ ಉಮಾಪತಿ, ಕೋಶಾಧಿಕಾರಿ ಲಕ್ಷ್ಮೀನಾರಾಯಣ ಉಪಾಧ್ಯ, ಅಸೋಸಿಯೇಶನ್‌ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಅಸೋಸಿಯೇಶನ್‌ ಅಧ್ಯಕ್ಷ ಪಾಂಡುರಂಗ ಆಚಾರ್‌ ಕೆ. ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಕಾರ್ಯದರ್ಶಿ ಯೋಗೀಶ್ಚಂದ್ರಧರ ವಂದಿಸಿದರು. ಅರ್ಚನಾ ಪ್ರೊಜೆಕ್ಟ್ ನ ಪಾಲುದಾರ ಅಮಿತ್‌ ಅರವಿಂದ್‌ ನಿರೂಪಿಸಿದರು.

ಕಟ್ಟಡ ಸಾಮಗ್ರಿಗಳ ಪ್ರದರ್ಶನ
ಎಲ್ಲ ತಾಲೂಕುಗಳ ಎಂಜಿನಿಯರ್, ಕಾಂಟ್ರಾಕ್ಟರ್, ಬಿಲ್ಡರ್, ಡೆವಲಪರ್, ಕಟ್ಟಡ ಸಾಮಗ್ರಿಗಳ ಉತ್ಪಾದಕರು ಮತ್ತು ಮಾರಾಟಗಾರರು, ಮೇಸನ್ಸ್‌, ಪೈಂಟರ್, ಫ್ಲಂಬರ್, ಟೈಲ್ಸ್‌ ಫಿಟ್ಟರ್, ಬಾರ್‌ ಬೆಂಡರ್ ಮತ್ತು ಸೆಂಟ್ರಿಂಗ್‌ ಇರುವರು. ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಅಗತ್ಯ ಸಾಲ ಸೌಲಭ್ಯಗಳ ಮಾಹಿತಿ ದೊರಕುವುದು. ರಾಷ್ಟ್ರ, ಅಂತಾರಾಷ್ಟ್ರೀಯ ಉತ್ಪಾದಕರಿಂದ ಕಟ್ಟಡ ಸಾಮಗ್ರಿಗಳು, ಇಂಟೀರಿಯರ್, ಎಕ್ಸ್‌ಟೀರಿಯರ್ ಉತ್ಪನ್ನಗಳು, ಕನ್‌ಸ್ಟ್ರಕ್ಷನ್‌ ಟೆಕ್ನಾಲಜೀಸ್‌, ಸೋಲಾರ್‌ ಪ್ರೊಡಕ್ಟ್, ಫ್ಲೋರಿಂಗ್‌ ಮತ್ತು ರೂಫಿಂಗ್‌ಗೆ ಸಂಬಂಧಿಸಿದ ಉತ್ಪನ್ನಗಳು, ಪೈಂಟ್ಸ್‌/ವಾಟರ್‌ ಪ್ರೂಫ್ ಕೆಮಿಕಲ್ಸ್‌, ಸ್ಟೀಲ್‌, ಸಿಮೆಂಟ್‌, ಪ್ಲೆವುಡ್‌, ಸೇಫ್ಟಿ ಮತ್ತು ಮೆಷಿನರಿ ಎಕ್ವಿಪ್‌ಮೆಂಟ್ಸ್‌, ಎಲಿವೇಟರ್ ಹೀಗೆ ಹತ್ತಾರು ಕಟ್ಟಡ ಸಾಮಗ್ರಿ ಇಲ್ಲಿನ ಆಕರ್ಷಣೆಯಾಗಿದೆ.

 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.