KPTCL ಪಿಂಚಣಿ ಹೊರೆ ಗ್ರಾಹಕರಿಗೆ ಹೊರಿಸಲು ವಿರೋಧ

ಗ್ರಾಹಕರ ಮೇಲೆ 3,357 ಕೋ. ರೂ. ಹೊರಿಸಲು ಸರಕಾರ ತೀರ್ಮಾನ ; ಸಾರ್ವಜನಿಕರಿಂದ ವಿರೋಧ

Team Udayavani, Feb 24, 2024, 11:36 PM IST

KPTCL ಪಿಂಚಣಿ ಹೊರೆ ಗ್ರಾಹಕರಿಗೆ ಹೊರಿಸಲು ವಿರೋಧ

ಬೆಂಗಳೂರು: ವಿದ್ಯುತ್‌ ದರ ಪರಿಷ್ಕರಣೆಗೆ ಸಂಬಂಧಿಸಿ ಎಲ್ಲ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ನಡೆಸಿದ ಸಾರ್ವಜನಿಕ ವಿಚಾರಣೆಯಲ್ಲೂ ಗ್ರಾಹಕರು ಕೆಪಿಟಿಸಿಎಲ್‌ ನೌಕರರ ಪಿಂಚಣಿ ಪ್ರತಿಧ್ವನಿಸಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ.

ಈ ಮೊದಲೇ ಕೆಇಆರ್‌ಸಿಯು, ನೌಕರರ ಪಿಂಚಣಿ ಗ್ರಾಹಕರ ಮೇಲೆ ವರ್ಗಾಯಿಸಲು ಬರುವುದಿಲ್ಲ ಎಂದು ಹೇಳಿತ್ತು. ಆದರೂ ತೆರೆಮರೆಯಲ್ಲಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ(ಕೆಪಿಟಿಸಿಎಲ್‌)ದಿಂದ ಪ್ರಯತ್ನಗಳು ಮುಂದುವರಿದಿದ್ದು, ಈಚೆಗೆ ನಡೆದ ಸಾರ್ವಜನಿಕ ವಿಚಾರಣೆಯಲ್ಲಿ ಪ್ರಸ್ತಾವಗೊಂಡಿದೆ.

ಆದರೆ ಸಾರ್ವಜನಿಕರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸುತಾರಾಂ ಒಪ್ಪಿಲ್ಲ ಎನ್ನಲಾಗಿದೆ.ಫೆ.12ರಿಂದ ಆರಂಭಗೊಂಡ ಸಾರ್ವಜನಿಕ ವಿಚಾರಣೆ, ಫೆ.22ರ ವರೆಗೆ ಬೆಂಗಳೂರು, ಮೈಸೂರು, ಮಂಗಳೂರು, ಕಲಬುರಗಿ, ಹುಬ್ಬಳ್ಳಿ ನಗರಗಳಲ್ಲಿ ನಡೆದಿದೆ. ಎಲ್ಲ ಕಡೆ ವಿರೋಧ ವ್ಯಕ್ತವಾಗಿದೆ. ಗ್ರಾಹಕರ ಅಭಿಪ್ರಾಯಕ್ಕೆ ಆಯೋಗವೂ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದೆ ಎನ್ನಲಾಗಿದೆ.

ಈ ಮಧ್ಯೆಯೂ ಕೆಪಿಟಿಸಿಎಲ್‌ ತನ್ನ ಪ್ರಯತ್ನ ಕೈಬಿಟ್ಟಿಲ್ಲ. ರಾಜ್ಯ ಸರಕಾರ ಒಟ್ಟು 3,357.22 ಕೋಟಿ ರೂ.ಗಳನ್ನು ಗ್ರಾಹಕರ ಮೇಲೆ ವರ್ಗಾಯಿಸಲು ತೀರ್ಮಾನಿಸಿದೆ. ಇದನ್ನು 3 ವರ್ಷಗಳು ಕಂತುಗಳಾಗಿ ಪಡೆಯಲು ಹೇಳಿದೆ. ಅದರಂತೆ ಪ್ರತಿ ವರ್ಷ 1,117.765 ಕೋಟಿ ರೂ.ಗಳನ್ನು ಗ್ರಾಹಕರಿಂದ ಹೆಚ್ಚುವರಿಯಾಗಿ ಪಡೆಯಬೇಕು. ಕೆಪಿಟಿಸಿಎಲ್‌ ಇತರ ವೆಚ್ಚ ಸೇರಿ 1,616.34 ಕೋಟಿ ರೂ.ಗಳನ್ನು ಕೇಳಿದೆ.

ಸರಕಾರ ಮಾತ್ರ ಈಗಿನ ಆರ್ಥಿಕ ಸ್ಥಿತಿಯಲ್ಲಿ ತನ್ನ ಭಾರವನ್ನು ಕಡಿಮೆ ಮಾಡಿಕೊಳ್ಳಲು ಮುಂದಾಗಿದೆ. 5 ಗ್ಯಾರಂಟಿಗಳಿಗೆ ಹಣ ಒದಗಿಸುವುದೇ ಕಷ್ಟವಾಗಿದೆ. ಹೀಗಾಗಿ ತನ್ನ ಹಿಂದಿನ ವೆಚ್ಚದ ಬಾಬ¤ನ್ನು ಕಡಿಮೆ ಮಾಡಿಕೊಳ್ಳಲು ಹೊರಟಿದೆ.

ಆದರೆ, ಈ ವಿಷಯಕ್ಕೆ ಸಂಬಂಧಿಸಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫೆRಸಿಸಿಐ) ಹೈಕೋಟ್‌ನಿಂದ ತಡೆಯಾಜ್ಞೆ ತಂದಿದ್ದು, ಅದನ್ನು ತೆರವುಗೊಳಿಸುವಂತೆ ಸರಕಾರ ಹಾಗೂ ಕೆಪಿಟಸಿಎಲ್‌ ಕಸರತ್ತು ನಡೆಸಿದೆ. ಯಾಕೆಂದರೆ, ಇದು ತೆರವಾಗದೆ ಕೆಇಆರ್‌ಸಿ ಒಪ್ಪುವುದಿಲ್ಲ. ಇನ್ನು ಗ್ರಾಹಕರು ಪ್ರತಿ ವರ್ಷ ಸಿಬಂದಿ ವೆಚ್ಚವನ್ನು ಭರಿಸುತ್ತಿದ್ದಾರೆ.

ಸರಕಾರ-ಆಯೋಗದ ಹಗ್ಗ ಜಗ್ಗಾಟ
ರಾಜ್ಯ ಸರಕಾರ 2022ರಿಂದ ಎಲ್ಲವನ್ನೂ ಗ್ರಾಹಕರಿಂದಲೇ ಸಂಗ್ರಹಿಸಲು ಆದೇಶಿಸಿದೆ. ಇದಕ್ಕೆ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ ಒಪ್ಪಿಲ್ಲ. ಸರಕಾರ ತನ್ನದೇ ಕಾಯ್ದೆಯ ನಿಯಮಗಳಂತೆ ಕೆಪಿಟಿಸಿಎಲ್‌ ನೌಕರರ ಪಿಂಚಿಣಿ ಸವಲತ್ತು ಭರಿಸಲು ಒಪ್ಪಿಕೊಂಡಿತ್ತು. ಈಗ ಅದನ್ನು ಗ್ರಾಹಕರ ಮೇಲೆ ವರ್ಗಾಯಿಸಲು ಬರುವುದಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ. ಆದರೂ ಸರಕಾರ- ಕೆಇಆರ್‌ಸಿ ನಡುವೆ ಹಗ್ಗ ಜಗ್ಗಾಟ ಮುಂದುವರಿದಿದೆ.

ಪಿಂಚಣಿ ಭರಿಸಲು ಸಾಧ್ಯವಿಲ್ಲ
1999ರಲ್ಲಿ ಕೆಇಬಿ ಇದ್ದದ್ದು ಕೆಪಿಟಿಸಿಎಲ್‌ ಆಯಿತು. 2000ರಲ್ಲಿ ಸರಕಾರ – ಕೆಪಿಟಿಸಿಎಲ್‌- ನೌಕರರ ಸಂಘದ ನಡುವೆ ಒಪ್ಪಂದವಾಯಿತು. ಸರಕಾರ ನೌಕರರ ಪಿಂಚಣಿ ಹಣವನ್ನು ತಾನೇ ಪಾವತಿಸಲು ಒಪ್ಪಿತು. ನೌಕರರು ಆಗ ಎಸ್ಕಾಂಗಳ ರಚನೆಯನ್ನು ವಿರೋಧಿಸಿದ್ದರು. ಆಗ ಸರಕಾರ ಅವರ ಎಲ್ಲ ಸವಲತ್ತುಗಳಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿತ್ತು. ಅದರಂತೆ ಎಸ್ಕಾಂಗಳ ಎಲ್ಲ ಎಂಜಿನಿಯರ್‌ಗಳು ಕೆಪಿಟಿಸಿಎಲ್‌ ನೌಕರರಾಗಿಯೇ ಉಳಿದರು. ಈಗ ಸರಕಾರ ನೌಕರರ ಪಿಂಚಣಿ ಹಣವನ್ನು ಭರಿಸಲು ಸಾಧ್ಯವಿಲ್ಲ ಎನ್ನುತ್ತಿದೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.