Ranji quarterfinal: ಮುಶೀರ್‌ ಖಾನ್‌ ಅಜೇಯ ದ್ವಿಶತಕ


Team Udayavani, Feb 24, 2024, 11:41 PM IST

1-asdsdsad

ಮುಂಬಯಿ: ಮುಶೀರ್‌ ಖಾನ್‌ ಅವರ ಅಜೇಯ ದ್ವಿಶತಕದಿಂದಾಗಿ ಮುಂಬಯಿ ತಂಡವು ರಣಜಿ ಕ್ವಾರ್ಟರ್‌ಫೈನಲ್‌ ಪದ್ಯದಲ್ಲಿ ಬರೋಡ ವಿರುದ್ಧ 383 ರನ್‌ ಗಳಿಸಿ ಆಲೌಟಾಗಿದೆ.

ಇದಕ್ಕುತ್ತರವಾಗಿ ಬರೋಡ ತಂಡವು ಎರಡನೇ ದಿನದಾಟದ ಅಂತ್ಯಕ್ಕೆ ಎರಡು ವಿಕೆಟ್‌ ಕಳೆದುಕೊಂಡಿದ್ದು 127 ರನ್‌ ಗಳಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಲು ಬರೋಡ ಇನ್ನೂ 257 ರನ್‌ ಗಳಿಸಬೇಕಾಗಿದೆ.

ಐದು ವಿಕೆಟಿಗೆ 248 ರನ್ನುಗಳಿಂದ ದಿನದಾಟ ಆರಂಭಿಸಿದ ಮುಂಬಯಿ ತಂಡಕ್ಕೆ ಮುಶೀರ್‌ ಆಸರೆಯಾದರು. ಮುಂಬಯಿ ಆಟಗಾರರೆಲ್ಲ ಔಟಾಗುವವರಗೆ ಕ್ರೀಸ್‌ನಲ್ಲಿದ್ದ ಅವರು ದ್ವಿಶತಕ ಬಾರಿಸಿ 203 ರನ್ನುಗಳೊಂದಿಗೆ ಅಜೇಯರಾಗಿ ಉಳಿದರು. 357 ಎಸೆತ ಎದುರಿಸಿದ ಅವರು 18 ಬೌಂಡರಿ ಬಾರಿಸಿದ್ದರು. ಮೊದಲ ದಿನ ತಂಡ ಒಂದು ಹಂತದಲ್ಲಿ 99 ರನ್ನಿಗೆ 4 ವಿಕೆಟ್‌ ಕಳೆದುಕೊಂಡ ಸ್ಥಿತಿಯಲ್ಲಿತ್ತು.

ಬಿಗು ದಾಳಿ ಸಂಘಟಿಸಿದ ಭಾರ್ಗವ್‌ ಭಟ್‌ 112 ರನ್ನಿಗೆ 7 ವಿಕೆಟ್‌ ಕಿತ್ತು ಗಮನ ಸೆಳೆದರು.

ಕರ್ನಾಟಕ ವಿರುದ್ಧ ವಿದರ್ಭ ಸುಭದ್ರ
ನಾಗ್ಪುರ: ಕರ್ನಾಟಕದಿಂದಲೇ ವಲಸೆ ಹೋದ ಕರುಣ್‌ ನಾಯರ್‌ ಅವರ ಅಮೋಘ ಬ್ಯಾಟಿಂಗ್‌ ನೆರವಿನಿಂದ ರಣಜಿ ಕ್ವಾರ್ಟರ್‌ ಫೈನಲ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಆತಿಥೇಯ ವಿದರ್ಭ 460 ರನ್‌ಗಳ ಬೃಹತ್‌ ಮೊತ್ತ ಕಲೆ ಹಾಕಿದೆ. ಇದಕ್ಕೆ ಉತ್ತರವಾಗಿ ಕರ್ನಾಟಕ ದಿನದಾಟದ ಮುಕ್ತಾಯಕ್ಕೆ 2 ವಿಕೆಟಿಗೆ 98 ರನ್‌ ಗಳಿಸಿದೆ. ತಂಡ ಇನ್ನೂ 362 ರನ್‌ ಹಿನ್ನಡೆಯಲ್ಲಿದೆ.

ಪಂದ್ಯದ ಮೊದಲ ದಿನ ವಿದರ್ಭ 3 ವಿಕೆಟ್‌ಗೆ 261 ರನ್‌ ಗಳಿಸಿತ್ತು. ಅಥರ್ವ ತಾಯಿಡೆ (109) ಹಾಗೂ ಯಶ್‌ ರಾಥೋಡ್‌ (93) ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ಸದೃಢ ಸ್ಥಿತಿಗೆ ತಲುಪಿತ್ತು. 2ನೇ ದಿನ ಆಟ ಮುಂದುವರಿಸಿದ ವಿದರ್ಭ ಇನ್ನಿಂಗÕನ್ನು ಕರುಣ್‌ ಆಧರಿಸಿದರು. ಒಂದೆಡೆ ವಿಕೆಟ್‌ ಬೀಳುತ್ತಿದ್ದರೂ, ನಾಯರ್‌ ತಾಳ್ಮೆಯ ಆಟವಾಡಿದರು. ವಿದ್ವತ್‌ ಕಾವೇರಪ್ಪಗೆ ಬೌಲ್ಡಾಗುವ ಮುನ್ನ 90 ರನ್‌ ಗಳಿಸಿದ್ದೇ ಅಲ್ಲದೆ ತಂಡವನ್ನು ಬೃಹತ್‌ ಮೊತ್ತದತ್ತ ಕೊಂಡೊಯ್ದರು. ಬಾಲಂಗೋಚಿಗಳ ಉಪಯುಕ್ತ ಕಾಣಿಕೆಗಳ ನೆರವಿನಿಂದ ವಿದರ್ಭ 460 ರನ್‌ ಗಳಿಸಿತು. ಕರ್ನಾಟಕ ಪರ ಮಧ್ಯಮ ವೇಗಿ ವಿದ್ವತ್‌ ಕಾವೇರಪ್ಪ 4 ವಿಕೆಟ್‌ ಕಿತ್ತರು.

ಇದಕ್ಕೆ ಉತ್ತರವಾಗಿ ಕರ್ನಾಟಕ ಆರಂಭದಲ್ಲಿಯೇ ಆಘಾತ ಅನುಭವಿಸಿತು. ನಾಯಕ ಮಾಯಾಂಕ್‌ ಅಗರ್ವಾಲ್‌ 2ನೇ ಓವರಿನಲ್ಲೇ ನಿರ್ಗಮಿಸಿದರು. ಮಧ್ಯಮ ವೇಗಿ ಆದಿತ್ಯ ಠಾಕ್ರೆ ಎಸೆತವನ್ನು ಕೆಣಕಿ ಕೀಪರ್‌ಗೆ ಕ್ಯಾಚಿತ್ತು ಶೂನ್ಯಕ್ಕೆ ಔಟಾದರು. ಆರ್‌.ಸಮರ್ಥ್ ಅವರು ಕೆ.ವಿ.ಅನೀಶ್‌ ಜತೆಗೂಡಿ ಇನ್ನಿಂಗ್ಸ್‌ ಕಟ್ಟತೊಡಗಿದರು. 34 ರನ್‌ ಗಳಿಸಿ ಉತ್ತಮವಾಗಿ ಆಡುತ್ತಿದ್ದ ಅನೀಶ್‌ ವೇಗಿ ಯಶ್‌ ಠಾಕೂರ್‌ ಎಸೆತವೊಂದನ್ನು ಹೊಡೆಯುವ ಯತ್ನದಲ್ಲಿ ಕೀಪರ್‌ಗೆ ಕ್ಯಾಚ್‌ ಒಪ್ಪಿಸಿ ನಿರ್ಗಮಿಸಿದರು. 2ನೇ ದಿನದಂತ್ಯಕ್ಕೆ ಸಮರ್ಥ್ 43 ಹಾಗೂ ನಿಕಿನ್‌ ಜೋಸ್‌ 20 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದಿದ್ದರು.

ಸಂಕ್ಷಿಪ್ತ ಸ್ಕೋರ್‌: ವಿದರ್ಭ ಮೊದಲ ಇನ್ನಿಂಗ್ಸ್‌: 460 (ಅಥರ್ವ 109, ಯಶ್‌ 93, ಕರುಣ್‌ 90, ವಿದ್ವತ್‌ 99ಕ್ಕೆ 4) ಕರ್ನಾಟಕ 2 ವಿಕೆಟಿಗೆ 98 (ಸಮರ್ಥ್ 43 ಬ್ಯಾಟಿಂಗ್‌, ಅನೀಶ್‌ 34, ನಿಕಿನ್‌ ಜೋಸ್‌ 20 ಬ್ಯಾಟಿಂಗ್‌).

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.