World’s largest ಧಾನ್ಯ ಸಂಗ್ರಹ ಯೋಜನೆಗೆ ಮೋದಿ ಚಾಲನೆ : 1.25 ಲಕ್ಷ ಕೋಟಿ ರೂ. ಹೂಡಿಕೆ

ಐದು ವರ್ಷಗಳಲ್ಲಿ 7 ಕೋಟಿ ಟನ್‌ ಧಾನ್ಯ ಸಂಗ್ರಹ ಗುರಿ

Team Udayavani, Feb 25, 2024, 1:03 AM IST

1-wewqewq

ಹೊಸದಿಲ್ಲಿ: ವಿಶ್ವದ ಬೃಹತ್‌ ಧಾನ್ಯ ಸಂಗ್ರಹಾಗಾರ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ಮುಂದಿನ ಐದು ವರ್ಷಗಳಲ್ಲಿ 7 ಕೋಟಿ ಟನ್‌ ಧಾನ್ಯ ಸಂಗ್ರಹ ಮಾಡಲು ಸಾಧ್ಯವಾಗುವಂತೆ ಗೋದಾಮುಗಳು, ಸಂಗ್ರಹಾಗಾರ ನಿರ್ಮಿಸುವುದು ಯೋಜನೆಯ ಗುರಿ. ಈ ಹಿನ್ನೆಲೆಯಲ್ಲಿ ದೇಶದ 11 ರಾಜ್ಯಗಳ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳಲ್ಲಿ (ಪ್ಯಾಕ್ಸ್‌) 11 ಗೋದಾಮುಗಳನ್ನು ಸಾಂಕೇತಿಕ ವಾಗಿ ಉದ್ಘಾಟಿಸಲಾಯಿತು.

ಸಹಕಾರಿ ಕ್ಷೇತ್ರದಲ್ಲಿ ಸಂಘಗಳನ್ನು ಬಲ ಪಡಿಸುವುದರ ಜತೆಗೆ ರೈತರ ಧಾನ್ಯಗಳ ದಾಸ್ತಾನಿಗೆ ಅಗತ್ಯ ವ್ಯವಸ್ಥೆ ಮಾಡಿಕೊಡಲು ಕೇಂದ್ರ ಸರಕಾರವು 1.25 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಿದೆ. ಕಾರ್ಯಕ್ರಮದಲ್ಲಿ ಮೋದಿಯವರು 500 ಇತರ ಪ್ಯಾಕ್ಸ್‌ ಗಳಲ್ಲಿ ಗೋದಾಮುಗಳು, ಇತರ ಕೃಷಿ ಸೌಲಭ್ಯಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಮೋದಿ ಹೇಳಿದ್ದೇನು?
ಯೋಜನೆ ಉದ್ಘಾಟಿಸಿ ಮಾತನಾಡಿದ ಮೋದಿ, ಇವತ್ತು ನಾವು ವಿಶ್ವದ ಬೃಹತ್‌ ಧಾನ್ಯ ಸಂಗ್ರಹ ಯೋಜನೆಗೆ ಚಾಲನೆ ನೀಡಿದ್ದೇವೆ. ಈ ಬೃಹತ್‌ ಯೋಜನೆ ಮೂಲಕ, ಮುಂದಿನ ಐದು ವರ್ಷಗಳಲ್ಲಿ 7 ಕೋಟಿ ಟನ್‌ ಸಂಗ್ರಹ ಸಾಮರ್ಥ್ಯವನ್ನು ನಿರ್ಮಿಸ ಲಾಗುವುದು. ಇದಕ್ಕಾಗಿ 1.25 ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡಲಾಗುವುದು’ ಎಂದು ಹೇಳಿದ್ದಾರೆ.

ನಾವು ವಿಶ್ವದ ಬೃಹತ್‌ ಧಾನ್ಯ ಸಂಗ್ರಹ ಯೋಜನೆಗೆ ಚಾಲನೆ ನೀಡಿದ್ದೇವೆ. ಇದರ ಮೂಲಕ ದೇಶಾದ್ಯಂತ ಸಾವಿರಾರು ಸಂಗ್ರಹಾಗಾರಗಳು, ಗೋದಾಮುಗಳನ್ನು ನಿರ್ಮಿಸಲಾಗು ವುದು. ಹಿಂದಿನ ಸರಕಾರಗಳು ಈ ವಿಚಾರಕ್ಕೆ ಆದ್ಯತೆಯನ್ನೇ ನೀಡಿರಲಿಲ್ಲ. ಇವತ್ತು ಸಹಕಾರಿ ಸಂಘಗಳ ಮೂಲಕ ಈ ಸಮಸ್ಯೆಗೆ ಉತ್ತರ ನೀಡಿದ್ದೇವೆ.

ಗೋದಾಮುಗಳಿಂದ ಲಾಭಗಳೇನು?
ಈ ಸಂಗ್ರಹಾಗಾರಗಳಲ್ಲಿ ರೈತರು ಧಾನ್ಯ ಸಂಗ್ರಹಿಸಿಡಬಹುದು. ಸೂಕ್ತ ಬೆಲೆ ಬಂದಾಗ ಮಾರಬಹುದು. ಇಲ್ಲಿ ಧಾನ್ಯಗಳನ್ನು ಇರಿಸಿ ಸಾಲವನ್ನೂ ಪಡೆಯಬಹುದು.

2 ಲಕ್ಷ ಪ್ಯಾಕ್ಸ್‌ ಸ್ಥಾಪನೆ ಗುರಿ
ದೇಶಾದ್ಯಂತ ಕೃಷಿ ಸಹಕಾರಿ ಸಂಘ (ಪ್ಯಾಕ್ಸ್‌)ಗಳನ್ನು 2 ಲಕ್ಷಕ್ಕೇರಿಸುವ ಗುರಿಯನ್ನು ಮೋದಿ ಸರಕಾರ ಹೊಂದಿದೆ. ಒಟ್ಟು ಕೃಷಿ ಉತ್ಪಾದಕ ಸಂಘಗಳನ್ನು (ಎಫ್ಪಿಒ) 10 ಸಾವಿರಕ್ಕೆ ಏರಿಸುವ ಗುರಿಯಿದೆ. ಈಗಾಗಲೇ 8 ಸಾವಿರ ಎಫ್ಪಿಒಗಳನ್ನು ಸ್ಥಾಪಿಸಲಾಗಿದೆ ಎಂದೂ ಮೋದಿ ಹೇಳಿದ್ದಾರೆ.

 

 

ಟಾಪ್ ನ್ಯೂಸ್

Rain-M

Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ

1—dsdsadas

Doctors ಭೇಟಿ ಬಿಟ್ಟು ವಾಂಖೇಡೆಗೆ ಬಂದ ರೋಹಿತ್‌ ತಾಯಿ; Video Viral

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

suicide

Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Rain-M

Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ

1—dsdsadas

Doctors ಭೇಟಿ ಬಿಟ್ಟು ವಾಂಖೇಡೆಗೆ ಬಂದ ರೋಹಿತ್‌ ತಾಯಿ; Video Viral

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.