ʼಭಾರತದಲ್ಲಿ ಸರ್ವಾಧಿಕಾರʼ: ರಾಜಕೀಯವಾಗಿ ಸದ್ದು ಮಾಡಿದ ಯೂಟ್ಯೂಬರ್‌ ಧ್ರುವ್‌ ರಥೀ ವಿಡಿಯೋ


Team Udayavani, Feb 26, 2024, 4:55 PM IST

ʼಭಾರತದಲ್ಲಿ ಸರ್ವಾಧಿಕಾರʼ: ರಾಜಕೀಯವಾಗಿ ಸದ್ದು ಮಾಡಿದ ಯೂಟ್ಯೂಬರ್‌ ಧ್ರುವ್‌ ರಥೀ ವಿಡಿಯೋ

ಮುಂಬಯಿ: ಖ್ಯಾತ ಯೂಟ್ಯೂಬರ್‌ ಧ್ರುವ್‌ ರಥೀ ಇತ್ತೀಚೆಗೆ ಹಾಕಿರುವ ವಿಡಿಯೋ ರಾಜಕೀಯವಾಗಿ ಸಂಚಲನ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಅವರ ಮೇಲೆ ವೈಯಕ್ತಿಕ ದಾಳಿಗಳು ನಡೆಯುತ್ತಿದೆ ಧ್ರುವ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, ಸಂಪೂರ್ಣವಾಗಿ ವಿಡಿಯೋ ನೋಡಿ ಎಂದು ಮನವಿ ಮಾಡಿದ್ದಾರೆ.

ʼಭಾರತದಲ್ಲಿ ಸರ್ವಾಧಿಕಾರ ʼ ಎನ್ನುವ ಹೆಡ್ಡಿಂಗ್‌ ಕೊಟ್ಟಿರುವ ವಿಡಿಯೋ ಮೂರೇ ದಿನದಲ್ಲಿ 11 ಮಿಲಿಯನ್‌ ವೀಕ್ಷಣೆ ಕಂಡಿದೆ. ಕೇಂದ್ರ ಸರ್ಕಾರದ ವೈಫಲ್ಯ ಹಾಗೂ ಕೆಲವೊಂದಿಷ್ಟು ಅಂಶಗಳನ್ನು ವಿಡಿಯೋದಲ್ಲಿ ಹೇಳಲಾಗಿದೆ. ಇದೇ ಕಾರಣದಿಂದ ವಿಡಿಯೋ ವೈರಲ್‌ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡಿದೆ. ಹಲವು ರಾಜಕೀಯ ಮುಖಂಡರು ಇದನ್ನು ಹಂಚಿಕೊಂಡಿದ್ದಾರೆ. ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಿಯಾಗಿ ವರ್ತಿಸುತ್ತಿದ್ದಾರೆ ಎಂದು ಧ್ರುವ್‌ ರಥೀ ಕೆಲವೊಂದಿಷ್ಟು ಉದಾಹರಣೆಯನ್ನು ಕೊಟ್ಟು ವಿಡಿಯೋದಲ್ಲಿ ಹೇಳಿದ್ದಾರೆ. ಈ ವಿಡಿಯೋ ಬಿಜೆಪಿ ಬೆಂಬಲಿಗರ ಕೆಂಗಣ್ಣಿಗೆ ಗುರಿಯಾಗಿದೆ.

“ವೀಡಿಯೊಗೆ 10 ಮಿಲಿಯನ್ ವೀಕ್ಷಣೆ ಆಗಿದೆ. ಎಲ್ಲಾ ಬಿಜೆಪಿ ಬೆಂಬಲಿಗರಿಗೆ ನನ್ನ ಏಕೈಕ ವಿನಂತಿ- ದಯವಿಟ್ಟು ಮುಕ್ತ ಮನಸ್ಸಿನಿಂದ ಪೂರ್ಣ ವೀಡಿಯೊವನ್ನು ಒಮ್ಮೆ ನೋಡಿ. ನನ್ನ ಮೇಲಿನ ವೈಯಕ್ತಿಕ ದಾಳಿಗಳು ದಿಕ್ಕು ತಪ್ಪಿಸುತ್ತಿವೆ. ನೀವು ನಿಜವಾಗಿಯೂ ರಾಷ್ಟ್ರದ ಬಗ್ಗೆ ಕಾಳಜಿ ವಹಿಸುತ್ತಿದ್ದರೆ ನಿಜವಾದ ಸಮಸ್ಯೆ ತುಂಬಾ ಗಂಭೀರವಾಗಿದೆ. . ಎದ್ದೇಳಿ! ಜೈ ಹಿಂದ್,” ಧ್ರುವ್‌ ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ವಿಡಿಯೋದಲ್ಲಿ ಹೇಳಿದ್ದೇನು?: ಯೂಟ್ಯೂಬರ್‌ ಧ್ರುವ್‌ ರಥೀ ತನ್ನ ವಿಡಿಯೋಗಳಿಂದಲೇ ಸುದ್ದಿಯಲ್ಲಿರುತ್ತಾರೆ. ಅವರ ಕೆಲವೊಂದು ವಿಡಿಯೋಗಳು ವಿವಾದವನ್ನು ಸೃಷ್ಟಿಸಿದ್ದುಂಟು. ಈ ವಿಡಿಯೋದಲ್ಲಿ ಮೋದಿ ಅವರ ಸರ್ಕಾರದ ಬಗ್ಗೆ ಹೇಳುತ್ತಾ,  ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಭಾರತ ಸರ್ಕಾರವನ್ನು ಸರ್ವಾಧಿಕಾರಿಯಂತೆ ಉತ್ತರ ಕೊರಿಯಾ ಸರ್ಕಾರದೊಂದಿಗೆ ಹೋಲಿಸಿದ್ದಾರೆ. ಭಾರತದಲ್ಲಿ ಪ್ರಜಾಪ್ರಭುತ್ವ ಕೊನೆಗೊಂಡಿದೆಯೇ ಎನ್ನುವ ಅಂಶದ ಬಗ್ಗೆ ವಿಡಿಯೋದಲ್ಲಿ ಅವರು ಮಾತನಾಡಿದ್ದಾರೆ. ದೇಶದ ತನಿಖಾ ಸಂಸ್ಥೆಗಳಾದ ಇಡಿ, ಸಿಬಿಐ ಕೇಂದ್ರದ ಕೈಗೊಂಬೆಯಂತಿದೆ. ಸರ್ಕಾರ ಅದನ್ನು ತನಗೆ ಬೇಕಾದಂತೆ ಇತರೆ ಪಕ್ಷದ ನಾಯಕರ ವಿರೋಧ ದಾಳಿ ನಡೆಸಲು ಬಳಸುತ್ತಿದೆ ಎನ್ನುವುದನ್ನು ಕೆಲ ಘಟನೆಯ ಉದಾಹರಣೆಯನ್ನು ಕೊಟ್ಟು ಹೇಳಿದ್ದಾರೆ. ಇನ್ನು ದೇಶದ ಚುನಾವಣೆ ಆಯೋಗದ ಬಗ್ಗೆಯೂ ಕೆಲವೊಂದು ವಿಚಾರಗಳನ್ನು ಮುಂದಿಟ್ಟಿದ್ದಾರೆ.

ರೈತರ ಪ್ರತಿಭಟನೆ ಹಾಗೂ ಚಂಡಿಗಢ ಮೇಯರ್‌ ಚುನಾವಣೆಯ ಬಗ್ಗೆಯೂ ವಿಡಿಯೋದಲ್ಲಿ ಹೇಳಲಾಗಿದೆ. ತಾನು ಯಾವುದೇ ಪಕ್ಷದ ಪರ ಅಥವಾ ವಿರೋಧವಾಗಿ ಮಾತನಾಡಿಲ್ಲ. ವಾಸ್ತವ ಸಂಗತಿಗಳನ್ನು ಮಾತ್ರ ಹೇಳಿದ್ದೇನೆ ಎಂದು ಧ್ರುವ್‌ ಹೇಳಿದ್ದಾರೆ.

ಸದ್ಯ ಧ್ರುವ್‌ ರಥೀ ಅವರ ಈ ವಿಡಿಯೋಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವರು ಧ್ರುವ್‌ ರಥೀ ಅಂತರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಪ್ರತಿಷ್ಠೆಗೆ ಧಕ್ಕೆ ತಂದಿದ್ದಾರೆ. ಈ ವಿಡಿಯೋವನ್ನು ತೆಗೆದು ಹಾಕಬೇಕೆಂದು ಕೇಂದ್ರಕ್ಕೆ ಆಗ್ರಹಿಸಿದ್ದಾರೆ. ಇನ್ನು ಕೆಲವರು ಕಾಂಗ್ರೆಸ್‌ ಸರ್ಕಾರದ ದಿನಗಳ ಪೋಸ್ಟ್‌ ಮಾಡಿ, ಧ್ರುವ್‌ ರಥೀ ವಿಡಿಯೋಗೆ ಮೆಚ್ಚುಗೆ ನೀಡಿದ್ದಾರೆ.

 

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

army

Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.