Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Team Udayavani, Feb 26, 2024, 9:41 PM IST
ಪಿಕಪ್ ಢಿಕ್ಕಿ: ಹೊಸಂಗಡಿ ರೈಲ್ವೇ ಗೇಟ್ಗೆ ಹಾನಿ
ಮಂಜೇಶ್ವರ: ಮರ ಮತ್ತಿತರ ವಸ್ತುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮವಾಗಿ ಹೊಸಂಗಡಿ ರೈಲ್ವೇ ಗೇಟ್ ಮುರಿದು ಬಿದ್ದಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಸೋಮವಾರ ಬೆಳಗ್ಗೆ ರೈಲು ಹಾದು ಹೋಗಲು ಗೇಟ್ ಮುಚ್ಚುತ್ತಿದ್ದಂತೆ ಹೊಸಂಗಡಿ ಭಾಗಕ್ಕೆ ತೆರಳುತ್ತಿದ್ದ ಪಿಕಪ್ ವಾಹನ ಗೇಟ್ಗೆ ಬಡಿಯಿತು. ಇದರಿಂದ ಗೇಟ್ ಮುರಿದು ಬಿತ್ತು. ಪರಿಣಾಮವಾಗಿ ಈ ದಾರಿಯಲ್ಲಿ ಸಾಗಬೇಕಾದ ವಾಹನಗಳು ಬೇರೆ ರಸ್ತೆಯಲ್ಲಿ ಸಂಚರಿಸಿದವು. ಸ್ಥಳಕ್ಕೆ ರೈಲ್ವೇ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ರೈಲು ಬೋಗಿಗಳಿಂದ ಹೊದಿಕೆ ಕಳವು: ಬಂಧನ
ಕಾಸರಗೋಡು: ರೈಲುಗಳ ಹವಾನಿಯಂತ್ರಿತ ಬೋಗಿಗಳಿಂದ ಹೊದಿಕೆ ಹಾಗು ದಿಂಬುಗಳನ್ನು ಕದಿಯುತ್ತಿದ್ದ ಆರೋಪದಲ್ಲಿ ಓರ್ವನನ್ನು ರೈಲ್ವೇ ಸಿಬಂದಿ ಬಂಧಿಸಿದ್ದು, ಈತನ ಮಾಹಿತಿಗಳನ್ನು ಬಹಿರಂಗಪಡಿಸಿಲ್ಲ.
ತಿರುವನಂತಪುರ-ಮಂಗಳೂರು ಮಲಬಾರ್ ಎಕ್ಸ್ಪ್ರೆಸ್ ರೈಲಿನಲ್ಲಿ ಈತನನ್ನು ಬಂಧಿಸಲಾಗಿದೆ. ಈತ ಬ್ಯಾಗ್ಗಳಲ್ಲಿ ತುಂಬಿಸಿದ್ದ ನಾಲ್ಕು ಹೊದಿಕೆ ಹಾಗೂ ಎರಡು ದಿಂಬುಗಳನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಯಿತು. ಒಂದು ತಿಂಗಳ ಅವಧಿಯಲ್ಲಿ ಐದು ರೈಲುಗಳಿಂದ ಒಟ್ಟು 60 ಹೊದಿಕೆಗಳನ್ನು ಹಾಗು 30ಕ್ಕೂ ಅಧಿಕ ದಿಂಬುಗಳನ್ನು ಕಳವು ಮಾಡಲಾಗಿತ್ತು.
ಪಾನ್ ಮಸಾಲ ವಶಕ್ಕೆ
ಉಪ್ಪಳ: ನಿಷೇಧಿತ 116 ಪ್ಯಾಕೆಟ್ ಪಾನ್ ಮಸಾಲ ಸಹಿತ ವರ್ಕಾಡಿ ಧರ್ಮನಗರ ನಿವಾಸಿ ಉಮ್ಮರ್ ಫಾರೂಕ್ (39)ನನ್ನು ಮಂಜೇಶ್ವರ ಪೊಲೀಸರು ಮಜಿರ್ಪಳ್ಳದಿಂದ ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hiriyur: ಹೆದ್ದಾರಿಗೆ ಮಣ್ಣು ಕುಸಿದು ಹತ್ತು ಕಿ.ಮೀ ಟ್ರಾಫಿಕ್ ಜಾಮ್
Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?
Bengaluru: ಬಿಡಿಎಗೆ ವಂಚನೆ: 19 ಮಂದಿ ವಿರುದ್ಧ ಕೇಸ್
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.