Kannada Movie: ಮೆಹಬೂಬಾ ಪ್ರೇಮಪುರಾಣ!
Team Udayavani, Feb 27, 2024, 6:06 PM IST
ಶಶಿ ಹಾಗೂ ಪಾವನಾ ಮುಖ್ಯಭೂಮಿಕೆಯಲ್ಲಿರುವ “ಮೆಹಬೂಬಾ’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಚಿತ್ರ ಮಾ.15ರಂದು ತೆರೆಗೆ ಬರಲಿದೆ. ಅನೂಪ್ ಆಂಟೋನಿ ಈ ಸಿನಿಮಾದ ನಿರ್ದೇಶಕರು.
ಚಿತ್ರದ ಬಗ್ಗೆ ಮಾತನಾಡುವ ಅವರು, “ಮೆಹಬೂಬಾ ನಮ್ಮ ಇಡೀ ತಂಡಕ್ಕೆ ಒಳ್ಳೆ ಜರ್ನಿ. ಹೀರೋ ಆಗಿ ಶಶಿ ಅವರು ಲಾಂಚ್ ಆಗುತ್ತಿದ್ದಾರೆ. ಅದು ಅಲ್ಲದೇ ನಿರ್ಮಾಪಕರು ಕೂಡ ಆಗಿದ್ದಾರೆ. ನಿರ್ದೇಶಕ ಆಗಿ ಹೊಸಬರ ಜೊತೆ ಕೆಲಸ ಮಾಡಲು ಟೆನÒನ್ ಇರುತ್ತದೆ. ಆದರೆ ಮೊದಲ ದಿನವೇ ನನ್ನ ಇಂಪ್ರಸ್ ಮಾಡಿದರು. ಇದು ಅವರ ಮೊದಲ ಸಿನಿಮಾ ಎಂದು ಹೇಳುವುದಿಕ್ಕೆ ಆಗಲ್ಲ. ಈಗಾಗಲೇ ಪಾವನ ತಾವು ಎಂಥ ನಟಿ ಅನ್ನೋದನ್ನು ಸಾಬೀತುಪಡಿಸಿದ್ದಾರೆ. ಈ ಚಿತ್ರದಲ್ಲಿ ಅವರು ತುಂಬಾ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದೊಡ್ಡ ತಾರಾಗಣವಿರುವ ಸಿನಿಮಾವಿದು’ ಎಂದರು.
ಬಿಗ್ಬಾಸ್ ವಿನ್ನರ್ ಶಶಿ ಅವರು ಟೀಸರ್ ಇವೆಂಟ್ನಲ್ಲಿ ಕಣ್ಣೀರು ಹಾಕಿದ್ದಾರೆ. “ಇದು ಪಬ್ಲಿಸಿಟಿ ಗಿಮಿಕ್ ಅಲ್ಲ. ಈ ಸಿನಿಮಾ ಬಗ್ಗೆ ಮಾತಾನಾಡಬೇಕು ಅಂದಾಗ ನೋವಾಗುತ್ತದೆ. ಬಿಗ್ಬಾಸ್ ನಿಂದ ಆಚೆ ಬಂದಾಗ ಎಲ್ಲರೂ ನನ್ನನ್ನು, “ನೀನು ಯಾವ ಸೀಮೆ ರೈತ’ ಅಂದರು. “ರೈತ ಅಂತಿಯಾ, ಈ ರೀತಿ ಬಟ್ಟೆ ಹಾಕ್ತಿಯಾ ಅಂತ’ ಕೇಳಿದ್ದರು. ನಾನು ಯಾವತ್ತು ಸೋಲನ್ನು ಒಪ್ಪಿಕೊಂಡವನಲ್ಲ. ನಾನು ರೈತನ ಮಗ ಅಲ್ಲ, ನಾನೇ ರೈತ. ನಾನು 40 ಪ್ರಾಡಕ್ಟ್ ಗಳನ್ನು ಡೆವಲಪ್ ಮಾಡಿದ್ದೀನಿ. ನಾನು ಶೋಕಿಗಾಗಿ ನಿರ್ಮಾಪಕ ಆದವನಲ್ಲ. ಕಳೆದ ಒಂದು ತಿಂಗಳಿನಿಂದ ನಾನು ನಿದ್ದೆ ಮಾಡ್ತಿಲ್ಲ. ನಾನು ಇಡೀ ತಂಡದ ಜೊತೆ ಕಿತ್ತಾಡಿದ್ದೀನಿ. ಮೆಹಬೂಬಾ ರಾಮಮಂದಿರ ಬಾಬ್ರಿ ಮಸೀದಿ ಕತೆಯಲ್ಲ. ಕಾರ್ತಿಕ್ ಗೌಡ-ನಸ್ರಿಯಾ ಪ್ರೀತಿಯ ಕಥೆ’ ಎಂದರು.
“ಟೀಸರ್ ರಿಲೀಸ್ ಆಗಿದೆ. ಚಿತ್ರದ ಕಿರುಪರಿಚಯ ಇದು. ಟ್ರೇಲರ್ ಬಾಕಿ ಇದೆ. ಇದಕ್ಕೆ ತುಂಬಾ ಕಾಣಿಸಿಕೊಳ್ಳದ ಶಕ್ತಿಗಳು ಕೆಲಸ ಮಾಡಿವೆ. ನನಗೆ ನನ್ನ ತಂಡದ ಬಗ್ಗೆ ಹೆಮ್ಮೆ ಇದೆ. ಮಾರ್ಚ್ 15ಕ್ಕೆ ಬರುತ್ತಿದ್ದೇವೆ’ ಎನ್ನುವುದು ನಾಯಕಿ ಪಾವನಾ ಮಾತು.
ಚಿತ್ರಕ್ಕೆ ಮ್ಯಾಥ್ಯೂಸ್ ಮನು ಅವರು “ಮೆಹಬೂಬಾ’ಗೆ ಸಂಗೀತ ನೀಡಿದ್ದಾರೆ. ಕಿರಣ್ ಹಂಪಾಪುರ ಅವರ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಅವರ ಸಂಕಲನ ಈ ಸಿನಿಮಾಗಿದೆ. ಮಾಸ್ ಮಾದ ಅವರ ಸಾಹಸ ನಿರ್ದೇಶನ, ಕಲೈ ಮಾಸ್ಟರ್ ಅವರ ನೃತ್ಯ ನಿರ್ದೇಶನ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.