ಅಪಘಾತದಲ್ಲಿ ಸಾವು ಎಂಬ ಸುದ್ದಿ ವೈರಲ್: ವಿಡಿಯೋ ಮಾಡಿ “ನಾನು ಜೀವಂತವಾಗಿದ್ದೇನೆ..” ಎಂದ ನಟಿ


Team Udayavani, Feb 28, 2024, 3:29 PM IST

ಅಪಘಾತದಲ್ಲಿ ಸಾವು ಎಂಬ ಸುದ್ದಿ ವೈರಲ್: ವಿಡಿಯೋ ಮಾಡಿ “ನಾನು ಜೀವಂತವಾಗಿದ್ದೇನೆ..” ಎಂದ ನಟಿ

ಮುಂಬಯಿ: ಇತ್ತೀಚೆಗೆ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ನಟ – ನಟಿಯರು ಸೇರಿದಂತೆ 9 ಮಂದಿ ಮೃತಪಟ್ಟಿದ್ದರು ಎನ್ನುವ ಸುದ್ದಿಯೊಂದು ಹೊರಬಿದ್ದಿತ್ತು. ಈ ಘಟನೆಯಲ್ಲಿ ʼ ಪಂಚಾಯತ್ 2ʼ ವಿನ ನಟಿ ಆಂಚಲ್ ತಿವಾರಿ ಕೂಡ ಸಾವನ್ನಪಿದ್ದಾರೆ ಎಂದು ವರದಿ ಆಗಿತ್ತು.

ಬಿಹಾರದ ಕೈಮೂರ್ನ್ ದೇವಕಲಿದಲ್ಲಿ ಭಾನುವಾರ(ಫೆ.25 ರಂದು) ಕಾರು ಹಾಗೂ ಬೈಕ್‌ ಗಳ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಇದರಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದರು. ಇದರಲ್ಲಿ ಭೋಜ್‌ ಪುರಿಯ ನಟ – ನಟಿ ಹಾಗೂ ಗಾಯಕರು ಕೂಡ ಇದ್ದರು ಎಂದು ವರದಿಯಾಗಿತ್ತು.

ʼಪಂಚಾಯತ್ 2ʼ ಮೂಲಕ ಖ್ಯಾತರಾಗಿದ್ದ ನಟಿ ಆಂಚಲ್ ತಿವಾರಿ ಮತ್ತು ಗಾಯಕ ಛೋಟು ಪಾಂಡೆ ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಫೋಟೋ ಸಮೇತ ಸುದ್ದಿ ಹರಿದಾಡಿತ್ತು.

ಈ ಘಟನೆಯ ಬಗ್ಗೆ ವಿಚಾರ ಹೊರಬೀಳುತ್ತಿದ್ದಂತೆ ಆಂಚಲ್, ಅಪಘಾತದಲ್ಲಿ ತಾನು ಸಾವನ್ನಪ್ಪಿಲ್ಲ. ತನಗೇನು ಆಗಿಲ್ಲ ಎಂದು ವಿಡಿಯೋವೊಂದನ್ನು ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಆಂಚಲ್ ಹೆಸರಿನ ಭೋಜ್‌ಪುರಿ ನಟಿ ಸಾವನ್ನಪ್ಪಿದ್ದು, ಅವಳ ಫೋಟೋ ಬದಲು ಸುದ್ದಿ ಮಾಧ್ಯಮಗಳು ʼಪಂಚಾಯತ್‌ -2ʼ ನಟಿಯ ಫೋಟೋವನ್ನು ಬಳಸಿಕೊಂಡು ಸುದ್ದಿಯನ್ನು ಬಿತ್ತರಿಸಿದೆ ಎಂದು ಅಂಚಲ್‌ ಹೇಳಿದ್ದಾರೆ.

“ಇದೊಂದು ಸುಳ್ಳು ಸುದ್ದಿ. ಅಪಘಾತದಲ್ಲಿ ಮೃತಪಟ್ಟಿದ್ದು ಭೋಜ್‌ ಪುರಿ ನಟಿ ಅಂಚಲ್‌.  ನಿಜವಾದ ಆಂಚಲ್‌ ನಿಮ್ಮ ಮುಂದೆ ಸುರಕ್ಷಿತವಾಗಿದ್ದಾರೆ. ನಾನು ಹಿಂದಿ ಸಿನಿಮಾದ ನಟಿಯಾಗಿದ್ದೇನೆ. ಭೋಜ್‌ ಪುರಿಯಿಂದ ನನಗೆ ಯಾವ ಸಂಪರ್ಕವೂ ಇಲ್ಲ. ಮಾಧ್ಯಮದವರು ಸುದ್ದಿಯನ್ನು ಬಿತ್ತರಿಸುವ ಮುನ್ನ ದಯವಿಟ್ಟು ಪರಿಶೀಲನೆ ಮಾಡಿಕೊಳ್ಳಿ. ನಿಮ್ಮಿಂದ ನನ್ನ ಸ್ನೇಹಿತರು ಹಾಗೂ ಪೋಷಕರಿಗೆ ಬಹಳ ತೊಂದರೆ ಆಗಿದೆ. ಆದಷ್ಟು ಬೇಗ ಇದನ್ನು ಸರಿ ಮಾಡಿ” ಎಂದು ನಟಿ ವಿಡಿಯೋ ಮೂಲಕ ಹೇಳಿದ್ದಾರೆ.

“ಜನರು ತನ್ನನ್ನು ಪೂನಂ ಪಾಂಡೆಗೆ ಹೋಲಿಸುತ್ತಿದ್ದಾರೆ. ನಾನು ಪಬ್ಲಿಕ್‌ ಸ್ಟಂಟ್‌ ಮಾಡುತ್ತಿದ್ದೇನೆ ಹೇಳುತ್ತಿದ್ದಾರೆ. ಇದೆಲ್ಲಾ ಮಾಡಿರುವುದು ಮೀಡಿಯಾದವರು ನನ್ನಲ್ಲ” ಎಂದು ಅವರು ಹೇಳಿದ್ದಾರೆ.

ʼಪಂಚಾಯತ್ 2‌ʼರಲ್ಲಿ ಪರಮೇಶ್ವರ್ ಅವರ ಮಗಳು ರವೀನಾ ಪಾತ್ರದಲ್ಲಿ ಆಂಚಲ್ ನಟಿಸಿದ್ದರು.

 

View this post on Instagram

 

A post shared by Anchal Tiwari (@anchalt555)

ಟಾಪ್ ನ್ಯೂಸ್

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.