K. Shivaram; ಸೋತರೆ ಬಿಜಾಪುರಕ್ಕೆ ಬರಲ್ಲ, ಖರ್ಗೆ ವಿರುದ್ಧ ಸ್ಪರ್ಧಿಸಲ್ಲ

ನಿವೃತ್ತ ಐಎಎಸ್ ಅಧಿಕಾರಿಗೂ ಬಸವನಾಡಿಗೂ ಇತ್ತು ಅವಿನಾಭಾವ ಸಂಬಂಧ

Team Udayavani, Feb 29, 2024, 7:42 PM IST

1——sadsdsad

ವಿಜಯಪುರ : ಅವಕಾಶಗಳಿದ್ದರೂ ಅಭಿವೃದ್ಧಿ ಹೀನವಾಗಿರುವ ಈ ನೆಲಕ್ಕೆ ಪ್ರಗತಿಯ ಬೆಳಕು ಚಲ್ಲುವ ನನ್ನ ಕನಸಿನೊಂದಿಗೆ ಬಂದಿದ್ದೇನೆ. ಒಂದೊಮ್ಮೆ ಬಸವನಾಡಿ ಜನರು ನನ್ನನ್ನು ತಿರಸ್ಕರಿಸಿದರೆ ಮತ್ತೆಂದೂ ವಿಜಯಪುರ ಜಿಲ್ಲೆಗೆ ಬರುವುದಿಲ್ಲ, ಜನರೇ ಬೇಡವೆಂದರೆ ಮತ್ತೇಕೆ ಇಲ್ಲಿಗೆ ಬರಲಿ…! ಒಂದೊಮ್ಮೆ ಗೆಲ್ಲಿಸಿ ಕೈ ಹಿಡಿದರೆ ಮತ್ತೆಂದೂ ಇಲ್ಲಿಂದ ಕಾಲು ಕೀಳುವುದಿಲ್ಲ…!!ಹೀಗಂತ ದಶಕದ ಹಿಂದೆ `ಉದಯವಾಣಿ’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದ ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಮತ್ತೆಂದೂ ಬಸವನಾಡಿಗೆ ಹಿಂದಿರುಗಿ ಬರಲೇ ಇಲ್ಲ.

ದಶಕದ ಹಿಂದೆ ಲೋಕಸಭೆ ಚುನಾವಣೆ ಹಂತದಲ್ಲಿ ವಿಜಯಪುರಕ್ಕೆ ಆಗಮಿಸಿದ್ದ ಅವರು, ಇದೀಗ ಲೋಕಸಭೆಗೆ ಚುನಾವಣೆ ಘೋಷಣೆ ಹಂತದಲ್ಲೇ ಕಾಕತಾಳೀಯ ಎಂಬಂತೆ ಕಾಲನ ಕರೆಗೆ ಓಗೊಟ್ಟಿದ್ದಾರೆ. ಆದರೆ ಜಿಲ್ಲೆಯ ಜನರು ಮಾತ್ರ ಶಿವರಾಂ ಅವರನ್ನು, ಅವರ ಸೇವೆ, ಸ್ನೇಹ ಬಾಂಧವ್ಯವನ್ನು ಇಂದಿಗೂ ಮರೆತಿಲ್ಲ.

2014 ರ ಲೋಕಸಭೆ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ವಿಜಯಪುರ ಕ್ಷೇತ್ರದಿಂದ ಕೊನೆ ಕ್ಷಣದಲ್ಲಿ ಬಂದು ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಏಪ್ರೀಲ್ 18 ಹಿಂದಿನ ದಿನವಷ್ಟೇ ಲೋಕಸಭೆ ಚುನಾವಣೆ ಕಾವು ಮುಗಿದಿತ್ತು.

ಮತ ಎಣಿಕೆ ಬಾಕಿ ಇರುವಂತೆ ಬೆಂಗಳೂರಿಗೆ ಮರಳು ಹಂತದಲ್ಲಿದ್ದಾಗ ತಮ್ಮ ಪರವಾಗಿ ಚುನಾವಣೆಯಲ್ಲಿ ಶ್ರಮಿಸಿದ ಜೆಡಿಎಸ್ ಪಕ್ಷದಲ್ಲಿದ್ದ ವಿಜುಗೌಡ ಪಾಟೀಲ ಅವರ ಮನೆಯಲ್ಲಿ ಉಪಹಾರಕ್ಕೆ ಸೇವಿಸಿ, ಅವರ ಕುಟುಂಬ ಸದಸ್ರ ಕುಶಲೋಪರಿ ವಿಚಾರಿ, ಕೃತಜ್ಞತೆ ಸಲ್ಲಿಸಿದ್ದರು.

ಈ ಹಂತದಲ್ಲಿ `ಉದಯವಾಣಿ’ ಜತೆ ತಮ್ಮ ಮನದಾಳದ ಮಾತು ಹಂಚಿಕೊಂಡಿದ್ದ ಅವರು, ಬಿಜಾಪುರ (ಆಗಿನ್ನು ವಿಜಯಪುರ ಮರು ನಾಮಕರಣ ಆಗಿರಲಿಲ್ಲ) ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಸೋಲಾದರೆ ಅದು ನನ್ನ ಸೋಲಲ್ಲ, ವಿಜಾಪುರದ ದೌರ್ಭಾಗ್ಯ ಎಂದು ಭಾವಿಸುತ್ತೇನೆ. ನನ್ನ ಸೇವೆ ಬೇಡ ಎಂದು ಇಲ್ಲಿನ ಜನ ತಿರಸ್ಕರಿಸುವುದಿಲ್ಲ ಎಂಬ ಆಶಾಭಾವನೆಯಿಂದ ತವರಿಗೆ ಮರಳುತ್ತಿದ್ದೇನೆ ಎಂದರು.

ಬಿಜಾಪುರದ ಜನತೆ ನನ್ನನ್ನು ಸೋಲಿಸಿದರೆ ಮತ್ತೆ ಎಂದಿಗೂ ಇಲ್ಲಿಗೆ ಮರಳಿ ಬರಲಾರೆ ಎಂದು ಖಚಿತ ಧ್ವನಿಯಲ್ಲಿ ಹೇಳಿದ್ದರು. ಅಭಿವೃದ್ಧಿ ಹೀನ ನೆಲದಲ್ಲಿ ಅಭಿವೃದ್ಧಿಪರ ಚಿಂತನೆಯ ಕನಸುಗಳೊಂದಿಗೆ ಇಲ್ಲಿಗೆ ಬಂದಿರುವ ನನ್ನನ್ನು ಜನರೇ ಬೇಡ ಎಂದು ತಿರಸ್ಕರಿಸಿದರೆ ಮತ್ತೆ ಇಲ್ಲಿಗೆ ಬಂದು ಸ್ಪರ್ಧಿಸಲಾರೆ ಎಂದು ಹೇಳಿದ್ದರು.

ಒಂದೊಮ್ಮೆ ಬಿಜಾಪುರದಲ್ಲಿ ಸೋಲಾದರೆ ಮತ್ತೆಂದೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಹಸ ಮಾಡುವುದಿಲ್ಲ. ವಿಜಯಪುರ ಮಾತ್ರವಲ್ಲ ಪರಿಶಿಷ್ಟ ಜಾತಿಗೆ ಮೀಸಲಿರುವ ಚಾಮರಾಜನಗರ, ಚಿತ್ರದುರ್ಗ, ಕಲಬುರ್ಗಿ ಎಲ್ಲಿಂದಲೂ ಭವಿಷ್ಯದಲ್ಲಿ ಇನ್ನೆಂದೂ ಲೋಕಸಭೆ ಚುನಾವಣೆಗೆ ಸ್ಪರ್ಧಿದಿರಲು ನಿರ್ಧರಿಸಿದ್ದೇನೆ ಎಂದಿದ್ದರು.

ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ಸಮುದಾಯದ ಆಸ್ತಿಯಂತಿರುವ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧವಂತೂ ನಾನು ಸ್ಪರ್ಧಿಸುವುದನ್ನು ಕನಸಿನಲ್ಲೂ ಯೋಚಿಸುವುದಿಲ್ಲ ಎನ್ನುವ ಮೂಲಕ ಖರ್ಗೆ ಅವರ ಬಗ್ಗೆ ತಮಗಿರುವ ಗೌರವವನ್ನು ಹೊರಹಾಕಿದ್ದರು.

ವಿಜಾಪುರ ಚುನಾವಣೆಯ ಬಳಿಕ ಲೋಕಸಭೆ ಚುನಾವಣೆಗೆ ನನಗೆ ಸೂಕ್ತವಲ್ಲ ಎಂಬುದು ಖಚಿತವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿಗೆ ಮೀಸಲಿರುವ ವಿಧಾನಸಭೆ ಕ್ಷೇತ್ರಗಳಿದ್ದು, ಅಲ್ಲಿಂದ ಸ್ಪರ್ಧಿಸುತ್ತೇನೆ ಎಂದಿದ್ದರು.

ಜಿ.ಎಸ್.ಕಮತರ

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ

Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ

Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್‌ ಸೂಚನೆ

Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್‌ ಸೂಚನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.