ರಾಮನಗರ: 4ವರ್ಷದಲ್ಲಿ 60 ನವಜಾತ ಶಿಶುಗಳ ಸಾವು


Team Udayavani, Mar 1, 2024, 6:06 PM IST

ರಾಮನಗರ: 4 ವರ್ಷದಲ್ಲಿ 60 ನವಜಾತ ಶಿಶುಗಳ ಸಾವು

ಉದಯವಾಣಿ ಸಮಾಚಾರ
ರಾಮನಗರ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಮನಗರ ಜಿಲ್ಲೆಯಲ್ಲಿ 60 ನವಜಾತ ಶಿಶುಗಳು ಸಾವಿಗೀಡಾಗಿವೆ.
ಹೌದು.., ಜಿಲ್ಲೆಯಲ್ಲಿ ಸಾವಿಗೀಡಾಗಿರುವ ನವಜಾತ ಶಿಶುಗಳ ಕುರಿತು ಸದನದಲ್ಲಿ ಆರೋಗ್ಯ ಸಚಿವರು ನೀಡಿರುವ ಮಾಹಿತಿಯಲ್ಲೇ ಈ ಸಂಗತಿ ಬಹಿರಂಗಗೊಂಡಿದ್ದು, ನವಜಾತ ಶಿಶುಗಳ ಸಾವಿನ ಪ್ರಮಾಣ ತಗ್ಗಿಸಲು ಆರೋಗ್ಯ ಇಲಾಖೆ ಸಾಕಷ್ಟು ಕ್ರಮ ಕೈಗೊಳ್ಳುತ್ತಿರುವ ನಡುಗೆಯೂ ನವಜಾತ ಶಿಶುಗಳ ಸಾವು ಸಂಭವಿಸುತ್ತಲೇ ಇರುವುದು ಆತಂಕಕಾರಿ ಸಂಗತಿಯೇ ಸರಿ.

ಸಾವಿಗೆ ಕಾರಣವೇನು?:ಅವಧಿ ಪೂರ್ವ ಜನನ, ತಾಯಿ ಅಪೌಷ್ಟಿಕತೆಯಿಂದ ಬಳಲುತ್ತಿರುವುದು, ಅತಿಸಾರ ಭೇದಿ, ಮಗು ಕಡಿಮೆ ತೂಕ ಹೊಂದಿರುವುದು, ಜನನದ ಸಮಯಲ್ಲಿ ಉಸಿರುಗಟ್ಟುವುದು, ನಿಮೋನಿಯಾ, ಸೆಪ್ಪೀಸ್‌ ಮತ್ತು ನವಜಾತ ಶಿಶುಗಳ ಕಾಮಾಲೆ ಹುಟ್ಟುವ ಸಮಯದಲ್ಲಿ ಮಕ್ಕಳು ಸಾವಿಗೀಡಾಗುವುದುಕ್ಕೆ ಕಾರಣವಾಗಿದೆ. ತೀವ್ರತಮ ಕಾಯಿಲೆಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ದೊರೆಯದೇ ಇರುವುದು ನವಜಾತ ಶಿಶುಗಳ ಸಾವಿಗೆ ಕಾರಣವಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಮಾಹಿತಿ ನೀಡುತ್ತವೆ.

ಮೌಡ್ಯವೂ ಕಾರಣ: ವೈದ್ಯರ ಮಾಹಿತಿಯ ಪ್ರಕಾರ ಕೆಲ ನವಜಾತ ಶಿಶುವಿನ ಸಾವಿನ ಪ್ರಕರಣದಲ್ಲಿ ಕುಟುಂಬದವರ ಮೌಡ್ಯವೂ ಕಾರಣ ವಾಗಿದ್ದು, ಬಾಣಂತಿ ಮಗು ಇರುವ ಮನೆಯಲ್ಲಿ ಸ್ವಚ್ಛತೆಯನ್ನು ಕಾಪಾಡದೆ ಇರುವುದು. ಇನ್ನು ಮಕ್ಕಳಿಗೆ ಹಾಲು ಕುಡಿಸಿದ ಬಳಿಕ ಸರಿಯಾಗಿ ತೇಗಿಸಿ ಮಲಗಿಸದೇ ಇರುವು ದರಿಂದ ಮಕ್ಕಳು ಉಸಿರು ಕಟ್ಟಿಸಾವಿಗೀಡಾಗಿರುವ ಪ್ರಕರಣಗಳು ಇವೆ ಎಂಬುದು ಆರೋಗ್ಯ ಇಲಾಖೆ  ಸಿಬ್ಬಂದಿಯ ಮಾಹಿತಿಯಾಗಿದೆ.

ಅಪೌಷ್ಟಿಕತೆ ಸೇರಿದಂತೆ ಆರೋಗ್ಯ ಗಂಡಾಂತರ ಗಳನ್ನು ಎದುರಿಸುತ್ತಿರುವ ನವಜಾತ ಶಿಶುಗಳ ಆರೈಕೆಗೆ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಪೌಷ್ಟಿಕ ಪುನಶ್ಚೇತನ ಘಟಕಗಳನ್ನು ಆರೋಗ್ಯ ಇಲಾಖೆ ಸ್ಥಾಪಿಸಿದೆಯಾದರೂ, ಇದನ್ನು ಬಳಕೆ ಮಾಡಿಕೊಳ್ಳಲು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗದೆ ಮೌಡ್ಯಕ್ಕೆ ಶರಣಾಗುತ್ತಿರುವುದು ಮಕ್ಕಳ ಸಾವಿನ ಪ್ರಕರಣ ಮರುಕಳಿಸಲು ಮುಖ್ಯಕಾರಣವಾಗಿದೆ.

ಜಾಗೃತಿ ಮೂಡಿಸುವ ಕೆಲಸವಾಗಲಿ: ನವಜಾತ ಶಿಶುವಿನ ಸಾವಿನ ಪ್ರಮಾಣ ಗ್ರಾಮೀಣ ಪ್ರದೇಶ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಸಂಭವಿಸುತ್ತಿದ್ದು, ಆರೋಗ್ಯ ಇಲಾಖೆ ಗ್ರಾಮೀಣ ಭಾಗದಲ್ಲಿ ಇಂತಹ ಕುಟುಂಬಗಳಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕಿದೆ. ಮಗುವಿನ ಸುರಕ್ಷಿತ ಜನನಕ್ಕಾಗಿ ಬಡ ಕುಟುಂಬಗಳ
ಗರ್ಭಿಣಿಯರನ್ನು ಗುರುತಿಸಿ ಅವರಿಗೆ ಸೇವೆ ಆರೋಗ್ಯ ಸೇವೆ ನೀಡುವ ಕೆಲಸವನ್ನು ಮಾಡಬೇಕಿದ್ದು, ಆರ್ಥಿಕವಾಗಿ ಅಶಕ್ತರಾಗಿರುವ ಕುಟುಂಬಗಳು ವೈದ್ಯಕೀಯ ಸೇವೆಯನ್ನು ಪಡೆದುಕೊಳ್ಳಲು ಸಾಧ್ಯ ವಿಲ್ಲದ ಕಾರಣ ಜನನದ ವೇಳೆ ಮಕ್ಕಳು ಸಾವಿಗೀಡಾಗುತ್ತಿವೆ.

ಮಕ್ಕಳ ವೈದ್ಯರ ಕೊರತೆಯೂ ಕಾರಣ;

ರಾಮನಗರ ಜಿಲ್ಲೆಯಲ್ಲಿ ಮಕ್ಕಳ ವೈದ್ಯರ ಕೊರತೆ ಕಾಡುತ್ತಿರುವುದು ನವಜಾತ ಶಿಶುಗಳಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ಸಾವಿಗೀಡಾಗುವುದಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ 12 ವರ್ಷ ದೊಳಗಿನ ಮಕ್ಕಳ ಸಂಖ್ಯೆ 2 ಲಕ್ಷದಷ್ಟಿದ್ದು, ಜಿಲ್ಲೆಯ 5 ತಾಲೂಕಿನಲ್ಲಿ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಕ್ಕಳ ವೈದ್ಯರ ಸಂಖ್ಯೆ 13 ಮಾತ್ರ. ಇಷ್ಟೋಂದು ಮಕ್ಕಳಿಗೆ ಬೆರಳೇಣಿಕೆ ವೈದ್ಯರು ಚಿಕಿತ್ಸೆ ನೀಡು ವುದು ಸವಾಲಿನ ಕೆಲಸವಾಗಿದೆ. ಬಹುತೇಕ ಮಕ್ಕಳ ವೈದ್ಯರು ನಿಗದಿತ ಅವಧಿಯಲ್ಲಿ ಮಾತ್ರ ಲಭ್ಯವಿದ್ದು, ತುರ್ತು ಸಂದರ್ಭದಲ್ಲಿ ಮಕ್ಕಳ ವೈದ್ಯರ ಕೊರತೆ ಸಾಕಷ್ಟಿದೆ.

ನವಜಾತ ಶಿಶುಗಳ ಆರೋಗ್ಯದ ಬಗ್ಗೆ ನಮ್ಮ ಇಲಾಖೆ ಸಾಕಷ್ಟು ನಿಗಾ ವಹಿಸಿದೆ. ಪೋಷಕರ ಮೌಡ್ಯದಿಂದ ಕೆಲವೊಂದು ಪ್ರಕರಣಗಳು ಸಂಭವಿಸಿವೆ. ಒಂದು ವರ್ಷದ ಒಳಗಿನ ಮಕ್ಕಳ ಆರೋಗ್ಯದ ಬಗ್ಗೆ ಇಲಾಖೆ ವಿಶೇಷ ಕಾಳಜಿ ವಹಿಸುತ್ತದೆ. ಯಾವುದೇ ನವಜಾತ ಶಿಶುಗಳ ಆರೋಗ್ಯದಲ್ಲಿ ಸಮಸ್ಯೆ ಉಂಟಾದಲ್ಲಿ ಸ್ಥಳೀಯವಾಗಿ ಆಶಾಕಾರ್ಯ ಕರ್ತೆಯರು, ಇಲ್ಲಾ ಸಮೀಪದ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿದರೆ, ನಮ್ಮ ಇಲಾಖೆಯಿಂದಲೇ ಉಚಿತ ಆ್ಯಂಬುಲೆನ್ಸ್‌, ಸಿಬ್ಬಂದಿಯನ್ನು ಕಳುಹಿಸಿ ಉನ್ನತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರು ಈ ಸೇವೆಯನ್ನು ಸದ್ಬಳಕೆ
ಮಾಡಿಕೊಳ್ಳಬೇಕು.
●ಡಾ.ರಾಜು,
ತಾ.ಆರೋಗ್ಯಾಧಿಕಾರಿ,ಚನ್ನಪಟ್ಟಣ

*ಸು.ನಾ.ನಂದಕುಮಾರ್

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Nikhil

Political: ಎಚ್‌.ಡಿ.ಕುಮಾರಸ್ವಾಮಿ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುವರು: ನಿಖಿಲ್‌

CM-Siid

By Election: ಚನ್ನಪಟ್ಟಣ ಮುಖಂಡರ ಜತೆ ಸಿಎಂ ಸಿದ್ದರಾಮಯ್ಯ ಸಭೆ

Chennapatana

Teachers Village: ಚನ್ನಪಟ್ಟಣದ ಚಕ್ಕೆರೆಯಲ್ಲಿ ಮನೆಗೊಬ್ಬ ಶಿಕ್ಷಕರು!

Donkey milk: ಬೊಂಬೆನಗರಿಯಲ್ಲಿ ಕತ್ತೆ ಹಾಲಿಗೆ ಬೇಡಿಕೆ!

Donkey milk: ಬೊಂಬೆನಗರಿಯಲ್ಲಿ ಕತ್ತೆ ಹಾಲಿಗೆ ಬೇಡಿಕೆ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.