Cafe blast; ಸರಕಾರ ಮತ್ತು ಪೊಲೀಸ್ ಗುಪ್ತಚರ ವೈಫಲ್ಯ ಸ್ಪಷ್ಟವಾಗಿದೆ: ಬಿಜೆಪಿ

ಭದ್ರತೆಯ 'ಗ್ಯಾರಂಟಿ' ಖಾತ್ರಿಪಡಿಸಿ... ಯಕ್ಷ ಪ್ರಶ್ನೆ ಹುಟ್ಟು ಹಾಕಿದ 'ಮೈ ಬ್ರದರ್' ಪಾಲಿಸಿ

Team Udayavani, Mar 1, 2024, 9:13 PM IST

1-qweqeqwe

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟ ಘಟನೆ ನಡೆದಿರುವುದು ಸರಕಾರ ಮತ್ತು ಪೊಲೀಸ್ ಗುಪ್ತಚರ ವೈಫಲ್ಯವು ಸ್ಪಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಈ ಸರ್ಕಾರವು ರಾಜ್ಯವನ್ನು ಅವ್ಯವಸ್ಥೆಗೆ ತಳ್ಳುತ್ತಿದೆ, ಇದು ಸಮಾಜವಿರೋಧಿಗಳಿಗೆ ಸುರಕ್ಷಿತ ಸ್ವರ್ಗವಾಗಿದೆ. ಅಪರಾಧಗಳನ್ನು ಹೆಚ್ಚಿಸುತ್ತಿದೆ. ಇಂದು ನಡೆದ ಸ್ಫೋಟ ಘಟನೆ ವಿಧಾನಸೌಧದಲ್ಲಿ ಪಾಕಿಸ್ಥಾನ ಜಿಂದಾಬಾದ್ ಹೇಳಿಕೆ ನೀಡಿದುದರ ಮುಂದುವರಿದ ಭಾಗವಾಗಿದೆ. ಅಲ್ಪಸಂಖ್ಯಾತರನ್ನು ಓಲೈಸುವ, ತುಷ್ಟೀಕರಣ ನೀತಿ ರಾಜ್ಯಕ್ಕೆ ಗಂಡಾಂತರ ತಂದಿಟ್ಟಿದೆ’ ಎಂದು ಆರೋಪಿಸಿದರು.

ಎಫ್ ಎಸ್ ಎಲ್ ವರದಿಯಲ್ಲಿ ‘ಪಾಕಿಸ್ಥಾನ್ ಜಿಂದಾಬಾದ್’ ಎಂದು ಹೇಳಿರುವ ಬಗ್ಗೆ ಖಚಿತವಾದ ವರದಿ ಬಂದರೂ ಅದನ್ನು ಬೋಗಸ್ ಮಾಡಿ ಮತ್ತೊಂದು ರಿಪೋರ್ಟ್ ಕೊಡುವಂತಹ ಕೆಲಸ ಸರಕಾರ ಮಾಡುವ ಅನುಮಾನ ನಮಗಿದೆ ಎಂದರು.

‘ಶಿವಮೊಗ್ಗದಲ್ಲಿ ಟಿಪ್ಪು ಜಯಂತಿಯ ಮುಖೇನ ಹಿಂದೂಗಳ ಮನೆಗಳಿಗೆ ನುಗ್ಗಿ ದಾಂಧಲೆ ನಡೆಸಲಾಗಿದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದಲ್ಲಿ ಭಾಗಿಯಾದ ಅಪರಾಧಿಗಳನ್ನು ಕಾಂಗ್ರೆಸ್ ಶಾಸಕರೇ ನಿರಪರಾಧಿಗಳು, ಅಮಾಯಕರು ಅವರ ವಿರುದ್ಧ ಕೇಸ್ ಹಿಂಪಡಿಯಿರಿ ಎಂದು ಗೃಹ ಸಚಿವರಿಗೆ ಪತ್ರ ಬರೆದಿದ್ದರು’ಎಂದರು.

ಕಾಂಗ್ರೆಸ್ ಸಂಸದನ ಹಿಂಬಾಲಕರು ಪಾಕ್ ಪರ ಘೋಷಣೆ ಕೂಗಿ ಇಡೀ ದೇಶಕ್ಕೆ ಆತಂಕ ಪಡುವ ಕೆಲಸ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ‘ಮೈ ಬ್ರದರ್ ಪಾಲಿಸಿ’ಯು ರಾಜ್ಯದ ಜನರ ರಕ್ಷಣೆ ವಿಚಾರದಲ್ಲಿ ದೊಡ್ಡ ಯಕ್ಷ ಪ್ರಶ್ನೆ ಹುಟ್ಟು ಹಾಕಿದೆ ಎಂದರು.

“ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೆ ಸಮಗ್ರ ತನಿಖೆಯನ್ನು ನಡೆಸಿ ಈ ಅಂಶಗಳನ್ನು ಮೂಲದಿಂದ ನಿರ್ಮೂಲನೆ ಮಾಡುವಂತೆ ನಾವು ಪೊಲೀಸರನ್ನು ಬಲವಾಗಿ ಒತ್ತಾಯಿಸುತ್ತೇವೆ” ಎಂದರು.

ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಮತ್ತೊಂದು ಜ್ವಲಂತ ಉದಾಹರಣೆಯಾಗಿದೆ ಎಂದರು.

“ಕಾಂಗ್ರೆಸ್ ಎಲ್ಲಿ ಅಧಿಕಾರಕ್ಕೆ ಬಂದರೂ, ಭಯೋತ್ಪಾದಕರು ಮತ್ತು ದೇಶವಿರೋಧಿಗಳು ಅದರ ನಿರ್ಲಜ್ಜ ಮತ್ತು ಕಡಿವಾಣವಿಲ್ಲದ ಓಲೈಕೆಯ ನೀತಿಯಿಂದಾಗಿ ಧೈರ್ಯಶಾಲಿಯಾಗುತ್ತಾರೆ. ಸರ್ಕಾರವು ಮೊದಲು ಕರ್ನಾಟಕದ ಜನರಿಗೆ ಸುರಕ್ಷತೆ ಮತ್ತು ಭದ್ರತೆಯ ‘ಗ್ಯಾರಂಟಿ’ಯನ್ನು ಖಾತ್ರಿಪಡಿಸಬೇಕು” ಎಂದರು.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಘಟನೆಯ ಬಗ್ಗೆ ತನಿಖೆ ನಡೆಸಲು ಮತ್ತು ಬೆಂಗಳೂರಿನ ಜನರಿಗೆ ಸ್ಪಷ್ಟ ಉತ್ತರವನ್ನು ನೀಡಲು ಪೊಲೀಸರು ಮತ್ತು ತನಿಖಾ ಸಂಸ್ಥೆಗಳಿಗೆ ಮುಕ್ತ ಹಸ್ತವನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.