Purushothamana Prasanga Review; ಏಳುಬೀಳಿನ ಹಾದಿಯಲ್ಲಿ ಪುರುಷೋತ್ತಮ ವಿಜಯ!


Team Udayavani, Mar 2, 2024, 2:28 PM IST

purushothamana prasanga review

ಆತ ಮಧ್ಯಮ ವರ್ಗದ ಹುಡುಗ. ಆತನಿಗೊಂದು ಕನಸಿದೆ. ಆ ಕನಸು ದುಬೈಗೆ ಹೋಗಬೇಕೆಂಬುದು. ಆದರೆ, ಕನಸಿನ ಜೊತೆಗೆ ಹೆಗಲ ಮೇಲೆ ಒಂದಿಷ್ಟು ಜವಾಬ್ದಾರಿ, ಎದೆಯಲ್ಲೊಂದು ಪ್ರೀತಿಯಿದೆ… ಇಂತಹ ಸಂದಿಗ್ಧತೆಯಲ್ಲೇ ಆತ ಒಂದು ನಿರ್ಧಾರಕ್ಕೆ ಬರುತ್ತಾನೆ. ಅದೇನು ಎಂಬ ಕುತೂಹಲ ನಿಮಗಿದ್ದರೆ ನೀವು “ಪುರುಷೋತ್ತಮನ ಪ್ರಸಂಗ’ ಸಿನಿಮಾ ನೋಡಬಹುದು.

“ಪುರುಷೋತ್ತಮ ಪ್ರಸಂಗ’ ಹೆಸರಿಗೆ ತಕ್ಕಂತೆ ಪುರುಷೋತ್ತಮನ ಜೀವನದ ಸುತ್ತ ಸಾಗುವ ಕಥೆ. ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಆತ ಹೇಗೆಲ್ಲಾ ಅಗ್ನಿಪರೀಕ್ಷೆಗೆ ಒಳಗಾಗುತ್ತಾನೆ ಎಂಬುದು ಸಿನಿಮಾ ಹೈಲೈಟ್‌. ನಿರ್ದೇಶಕ ದೇವದಾಸ್‌ ಕಾಪಿಕಾಡ್‌ ಇಡೀ ಸಿನಿಮಾದುದ್ದಕ್ಕೂ ಕಾಮಿಡಿ ಅಂಶದ ಜೊತೆಗೆ ಸೆಂಟಿಮೆಂಟ್‌ ಫೀಲ್‌ ಉಳಿಸಿಕೊಂಡು ಬಂದಿದ್ದಾರೆ. ಮುಖ್ಯವಾಗಿ ಮಿಡಲ್‌ ಕ್ಲಾಸ್‌ ಫ್ಯಾಮಿಲಿಯ ಕಷ್ಟ, ಅವರ ಕನಸು, ಈ ನಡುವಿನ ಒದ್ದಾಟವನ್ನು ಬಿಂಬಿಸುವ ಹಲವು ದೃಶ್ಯಗಳು ಮನಮುಟ್ಟುವಂತೆ ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಇದರ ಜೊತೆಗೆ ಇಡೀ ಸಿನಿಮಾ ಮಂಗಳೂರು ಹಿನ್ನೆಲೆಯಲ್ಲಿ ಸಾಗುತ್ತದೆ. ಮಂಗಳೂರು ಕನ್ನಡ, ಅಲ್ಲಿನ ಪರಿಸರ ಎಲ್ಲವೂ ಸಿನಿಮಾದ ಚೆಂದ ಹೆಚ್ಚಿಸಿದೆ. ಚಿತ್ರದಲ್ಲಿ ತುಳು ಸಿನಿಮಾ, ರಂಗಭೂಮಿಯ ಅನೇಕ ಹಾಸ್ಯ ಕಲಾವಿದರು ನಟಿಸಿದ್ದಾರೆ. ಸನ್ನಿವೇಶಕ್ಕನುಗುಣವಾಗಿ ಕಾಮಿಡಿ ಟ್ರ್ಯಾಕ್‌ ತೆರೆದುಕೊಳ್ಳುವ ಮೂಲಕ ಕಥೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ.

ಮುಖ್ಯವಾಗಿ ನಾಯಕ ಅಜಯ್‌ ಮೊದಲ ಚಿತ್ರದಲ್ಲೇ ಈ ತರಹದ ಒಪ್ಪಿಕೊಂಡು ಭವಿಷ್ಯದ ಭರವಸೆ ಮೂಡಿಸಿದ್ದಾರೆ. ಯಾವುದೇ ಬಿಲ್ಡಪ್‌ ಇಲ್ಲದ, ಅತಿಯಾದ ಕಮರ್ಷಿಯಲ್‌ ಅಂಶಗಳಿಂದ ಮುಕ್ತವಾಗಿರುವ ಪಾತ್ರದಲ್ಲಿ ನಟಿಸಿ ಕಲಾವಿದನಾಗುವ ಕನಸು ಕಂಡಿದ್ದಾರೆ. ಪಾತ್ರ ಹಾಗೂ ಮಂಗಳೂರು ಕನ್ನಡಕ್ಕೆ ಅಜಯ್‌ ಒಗ್ಗಿಕೊಂಡಿದ್ದಾರೆ. ನಾಯಕಿ ರಿಷಿಕಾ ನಾಯಕ್‌ ಸಾದಾಸೀದಾ ಹುಡುಗಿಯಾಗಿ ಇಷ್ಟವಾಗುತ್ತಾರೆ.

ಉಳಿದಂತೆ ಅರವಿಂದ್‌ ಬೋಳಾರ್‌, ಭೋಜರಾಜ ವಾಮಂಜೂರು, ನವೀನ್‌ ಡಿ ಪಡೀಲ್‌ ಸೇರಿದಂತೆ ಇತರರು ಪಾತ್ರಕ್ಕೆ ಹೊಂದಿಕೊಂಡಿದ್ದಾರೆ. ಒಂದು ಫ್ಯಾಮಿಲಿ ಡ್ರಾಮಾವಾಗಿ ಪುರುಷೋತ್ತಮ ರಂಜಿಸುವಲ್ಲಿ ಹಿಂದೆ ಬಿದ್ದಿಲ್ಲ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Martin movie review

Martin Movie Review: ಆ್ಯಕ್ಷನ್‌ ಅಬ್ಬರದಲ್ಲಿ ಮಾರ್ಟಿನ್‌ ಮಿಂಚು

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

Gopilola Movie Review

Gopilola Movie Review: ಹೆಣ್ಣು ಮಣ್ಣಿನ ಮಧ್ಯೆ ಗೋಪಿ ಆಟ

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.