Rameshwaram Cafe; ನಾವು ರಾಜಕೀಯ ಮಾಡುತ್ತಿಲ್ಲ: ವಿಜಯೇಂದ್ರ
Team Udayavani, Mar 3, 2024, 12:02 AM IST
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿಲ್ಲ. ಜವಾಬ್ದಾರಿಯುತ ವಿಪಕ್ಷವಾಗಿ ಕರ್ತವ್ಯ ನಿರ್ವಹಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್ ಸಚಿವರ ಹೇಳಿಕೆಗಳನ್ನು ನೋಡಿದರೆ ಸರಕಾರದ ಮೇಲೆ ಜನರಿಗೆ ನಂಬಿಕೆ ಇಲ್ಲ ಎಂಬುದು ಸ್ಪಷ್ಟವಾಗುತ್ತಿದೆ. ಹೀಗಾಗಿ ಬಿಜೆಪಿಯ ಮೇಲೆ ವೃಥಾ ಆರೋಪ ಮಾಡಲಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.
ಪಾಕ್ ಪರ ಘೋಷಣೆ ಪ್ರಕರಣದಲ್ಲಿ ಸಚಿವರ ಹೇಳಿಕೆಗಳು ಯಾವ ರೀತಿ ಇದ್ದವು? ಘಟನೆ ನಡೆದು ನಾಲ್ಕೈದು ದಿನವಾದರೂ ಎಫ್ಎಸ್ಎಲ್ ವರದಿ ಬಂದಿಲ್ಲ ಎನ್ನುತ್ತಿದ್ದಾರೆ. ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಇದೇ ರೀತಿ ಹೇಳಿದ್ದಾರೆ. ಆದರೆ ನಮಗೆ ಬಂದ ಮಾಹಿತಿ ಪ್ರಕಾರ ವರದಿ ಸರಕಾರದ ಕೈ ಸೇರಿದೆ. ಆದರೆ ಅದನ್ನು ಮುಚ್ಚಿ ಮತ್ತೂಂದು ಬೋಗಸ್ ವರದಿ ತಯಾರಿಸಲು ಸರಕಾರ ಮುಂದಾಗಿದೆ ಎಂದು ಆರೋಪಿಸಿದರು.
ವರದಿಯಲ್ಲಿ ಪಾಕ್ ಪರ ಘೋಷಣೆ ಕೂಗಿರೋದು ದೃಢಪಟ್ಟಿದೆ. ವರದಿ ಬಿಡುಗಡೆ ಮಾಡದೆ ಸರಕಾರ ದೇಶದ್ರೋಹಿಗಳನ್ನು ರಕ್ಷಿಸುತ್ತಿದೆ. ಸರಕಾರದ ಈ ನಡವಳಿಕೆ ಹಾಗೂ ಮಂತ್ರಿಗಳ ಹೇಳಿಕೆಗಳು ಸರಿಯಲ್ಲ. ಬಾಂಬ್ ಸ್ಫೋಟ ಹಾಗೂ ಪಾಕ್ ಪರ ಘೋಷಣೆ ಪ್ರಕರಣ ಸಂಬಂಧ ಸರಕಾರದ ನಡವಳಿಕೆ ರಾಜ್ಯದ ಸುರಕ್ಷೆಗೆ ಧಕ್ಕೆ ತರಲಿದೆ. ರಾಜ್ಯದಲ್ಲಿ ಅಶಾಂತಿ ಸೃಷ್ಟಿಯಾಗುವ ಆತಂಕ ಇದೆ. ಇಂಥ ಘಟನೆಗಳನ್ನು ಲಘುವಾಗಿ ಪರಿಗಣಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಾಕ್ ಪರ ಘೋಷಣೆ ಕೂಗಿದವರ ಇನ್ನೂ ಬಂಧಿಸಿಲ್ಲ. ಬಂಧನ ಮಾಡಿದರೆ ಅಲ್ಪಸಂಖ್ಯಾತರ ಭಾವನೆಗಳಿಗೆ ಧಕ್ಕೆ ಬರುವ ಭಯ ಕಾಂಗ್ರೆಸ್ನವರನ್ನು ಕಾಡುತ್ತಿದೆ. ಏನೂ ಆಗಿಯೇ ಇಲ್ಲವೆಂದು ಸಚಿವರು ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.