Snake bites: ಹಾವು ಕಡಿದರೆ ಇನ್ನು ಹೆದರಬೇಕಾದ ಅವಶ್ಯಕತೆ ಇಲ್ಲ


Team Udayavani, Mar 3, 2024, 11:38 AM IST

Snake bites: ಹಾವು ಕಡಿದರೆ ಇನ್ನು ಹೆದರಬೇಕಾದ ಅವಶ್ಯಕತೆ ಇಲ್ಲ

ಬೆಂಗಳೂರು: ಭಾರತದಲ್ಲಿ ಹಾವು ಕಡಿತದಿಂದ ವರ್ಷಕ್ಕೆ ಸಾವಿರಾರು ಮಂದಿ ಪ್ರಾಣ ಕಳೆದುಕೊಳ್ಳುತ್ತಾರೆ. ಇವುಗಳಲ್ಲಿ ನಾಗರಹಾವು, ಕಟ್ಟು ಹಾವುಗಳ ಕಡಿತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚು. ಈ ಹಾವುಗಳೊಂದಿಗೆ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸಹ ಪಶ್ಚಿಮ ಘಟ್ಟ, ಹಿಮಾಲಯ ತಪ್ಪಲಿನ ಪ್ರದೇಶದ ಜನರಲ್ಲಿ ವಿಷಾತಂಕ ಮೂಡಿ ಸುತ್ತವೆ. ಇದೀಗ ಭಾರತೀಯ ವಿಜ್ಞಾನ ಸಂಸ್ಥೆ (ಐಐ ಎಸ್‌ಸಿ)ಯ ವಿಜ್ಞಾನಿಗಳು ಭಾರತದಲ್ಲಿ ಪ್ರಚಲಿತ ವಿರುವ ಈ ಮೂರು ಹಾವುಗಳ ವಿರುದ್ಧ ಪರಿಣಾಮ ಕಾರಿಯಾಗಿ ಹೋರಾಡುವ ಕೃತಕ ಪ್ರತಿ ಕಾಯಗಳನ್ನು ಸೃಷ್ಟಿಸಿ ವಿಷ ವಿಜ್ಞಾನದಲ್ಲಿ ಹೊಸ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ.

ಐಐಎಸ್‌ಸಿಯ ಪರಿಸರ ವಿಜ್ಞಾನಗಳ ಕೇಂದ್ರ ಮತ್ತು ಸ್ಕ್ರಿಪ್ಸ್‌ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು  ನಾಗರಹಾವು, ಕಾಳಿಂಗ ಸರ್ಪ, ಕಟ್ಟುಹಾವು ಮತ್ತು ಆಫ್ರಿಕಾದ ಸಹರಾ ಮರುಭೂಮಿ ಪ್ರದೇಶದ ಬ್ಲ್ಯಾಕ್‌ ಮಾಂಬಾಗಳ ಪ್ರಾಣಾಂತಕ ಪ್ರಬಲ ನ್ಯೂರೋ ಟಾಕ್ಸಿನ್‌ನ ವಿರುದ್ಧ ಹೋರಾಡಿ ಅವುಗಳನ್ನು ತಟಸ್ಥಗೊಳಿಸುವ ಸಂಶ್ಲೇಷಿತ ಮಾನವ ಪ್ರತಿಕಾಯವನ್ನು ಅಭಿವೃದ್ಧಿ ಪಡಿಸಿದ್ದಾರೆ.

ಪ್ರಚಲಿತ ಇರುವ ಕ್ರಮದಲ್ಲಿ ಕುದುರೆಗಳು, ಹೇಸರ ಗತ್ತೆಗಳಿಗೆ ಚುಚ್ಚುಮದ್ದಿನ ಮೂಲಕ ವಿಷ ವನ್ನು ನೀಡಿ ಅವುಗಳು ಉತ್ಪಾದಿಸುವ ಪ್ರತಿಕಾಯ ಗಳನ್ನು ಸಂಗ್ರಹಿಸಿ ವಿಷದ ಹಾವು ಕಡಿತಕ್ಕೆ ಈಡಾದವನಿಗೆ ನೀಡಲಾಗುತ್ತದೆ. ಈ ಪ್ರಾಣಿಗಳು ತಮ್ಮ ಜೀವಿತಾವಧಿಯಲ್ಲಿ ವಿವಿಧ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳ ದಾಳಿಯನ್ನು ಎದುರಿಸಲು ಪ್ರತಿ ಕಾಯಗಳನ್ನು ಸೃಷ್ಟಿಸಿರುತ್ತದೆ. ಈ ಪ್ರತಿಕಾಯಗಳು ಸಹ ಪ್ರತಿ ವಿಷಗಳಲ್ಲಿ ಸೇರಿಕೊಳ್ಳುವುದರಿಂದ ಹಾವಿನ ಕಡಿತದ ವಿರುದ್ಧದ ಪ್ರತಿಕಾಯಗಳ ಪ್ರಮಾಣವನ್ನು ಔಷಧಿಯಲ್ಲಿ ಕುಗ್ಗಿಸಿ ಅದರ ಪ್ರಭಾವವನ್ನು ಕುಂಠಿತಗೊಳಿಸುತ್ತವೆ.

ಮೊದಲು ವಿಷವನ್ನು ನೀಡಿ ಆ ಬಳಿಕ ತಕ್ಷಣವೇ ಪ್ರತಿವಿಷ ನೀಡಿದ್ದು ಸೇರಿದಂತೆ ವಿಷ ಪ್ರಯೋಗ ನಡೆದು 10 ನಿಮಿಷ, 20 ನಿಮಿಷಗಳ ಮೇಲೆಯೂ ಪ್ರತಿವಿಷ ನೀಡಿದಾಗಲೂ  ಇಲಿಗಳನ್ನು ಬದುಕಿಸಲು ಪ್ರತಿಕಾಯಗಳು ಯಶಸ್ವಿಯಾಗಿದೆ. ಸಾಂಪ್ರದಾಯಿಕ ವಿಷ ಮದ್ದುಗಳು ಇಲಿಗೆ ವಿಷ ಪ್ರಯೋಗ ನಡೆದ ತಕ್ಷಣ ನೀಡಿದಾಗ ಮಾತ್ರ ಇಲಿಯನ್ನು ಬದುಕಿಸಲು ಸಫ‌ಲವಾಗಿದ್ದವು ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಹಾಗೆಯೇ ಮಾನವನ ದೇಹದ ಸ್ನಾಯು, ನರಕೋಶಗಳ ಗ್ರಾಹಿಗಳ ಜೊತೆ ವಿಷ ಅಂಟಿಕೊಳ್ಳುವ ಮಾದರಿಯಲ್ಲಿಯೇ ಪ್ರತಿಕಾಯ ಸಹ ಅಂಟಿಕೊಳ್ಳುತ್ತದೆ. ಆದ್ದರಿಂದ ವಿಷವು ಗ್ರಾಹಿಗಳ ಬದಲು ಪ್ರತಿಕಾಯಗಳಿಗೆಯೇ ಅಂಟಿಕೊಳ್ಳುತ್ತದೆ. ಇದರ ಜೊತೆಗೆ ಮಾನವನ ಜೀವಕೋಶಗಳ ಮೇಲೆಯೇ ನೇರ ಪ್ರಯೋಗ ನಡೆಸಿ ಪ್ರತಿಕಾಯ ಸೃಷ್ಟಿಸಬಹುದಾಗಿದೆ. ಮಾನವ ಜೀವಕೋಶಗಳ ಮೇಲೆ ಪ್ರಯೋಗ ನಡೆದಾಗ ಯಾವುದೇ ಅಲರ್ಜಿ ವರದಿಯಾಗಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಈ ಪ್ರಯೋಗದ ವರದಿ ಸೈನ್ಸ್‌ ಟ್ರಾನ್ಸ್‌ಲೇಷನಲ್‌ ಮೆಡಿಸಿನ್‌ ಜರ್ನಲ್‌ನಲ್ಲಿ ಪ್ರಕಟವಾಗಿದೆ. ಐಐಎಸ್‌ಸಿಯ ಪರಿಸರ ವಿಜ್ಞಾನ ಕೇಂದ್ರದ ಅಸೋಸಿಯೇಟ್‌ ಪ್ರೊಫೆಸರ್‌ ಕಾರ್ತಿಕ್‌ ಸುನಗರ್‌ ಪ್ರಯೋಗದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಎಚ್‌ಐವಿ, ಕೋವಿಡ್‌-19ರ ವಿರುದ್ಧ ಪ್ರತಿಕಾಯಗಳನ್ನು ಸೃಷ್ಟಿಸಲು ಬಳಸಿದ ತಂತ್ರವನ್ನು ಮೊದಲ ಬಾರಿಗೆ ಹಾವಿನ ವಿಷಕ್ಕೆ ಪ್ರತಿವಿಷ ಸೃಷ್ಟಿಸಲು ಬಳಸಲಾಗಿದೆ. ಮೊದಲ ಬಾರಿಗೆ ಪ್ರತಿ ವಿಷ ಸೃಷ್ಟಿಗೆ ನಿರ್ದಿಷ್ಟ ಮಾದರಿಯೊಂದನ್ನು ಅನುಸರಿಸಿದ್ದೇವೆ. ನಮ್ಮ ಪ್ರಯೋಗವು ಸಾರ್ವತ್ರಿಕ ಪ್ರತಿ ವಿಷ ಸೃಷ್ಟಿಸುವ ಸಾಧ್ಯತೆಯನ್ನು ಸಾಕಾರಗೊಳಿಸುವಲ್ಲಿ ಇಟ್ಟಿರುವ ಮಹತ್ವದ ಹೆಜ್ಜೆ.-ಸೆಂಜಿ ಲಕ್ಷ್ಮೀ, ಸಂಶೋಧನಾ ವಿದ್ಯಾರ್ಥಿ 

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.