Brahmavara: ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ
Team Udayavani, Mar 3, 2024, 1:06 PM IST
ಬ್ರಹ್ಮಾವರ: ಬಾರಕೂರು ಹನೆಹಳ್ಳಿ ಬಾಳೆ ಹಿತ್ಲಿನಲ್ಲಿ ಕೃಷ್ಣ (37) ಅವರನ್ನು ಗುಂಡು ಹಾರಿಸಿ ಕೊಲೆ ಮಾಡಲಾಗಿದೆ.
ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ಕೃಷ್ಣ ವಿವಾಹಿತರಾಗಿದ್ದರೂ ಮನೆಯಲ್ಲಿ ಒಬ್ಬರೇ ವಾಸವಿದ್ದರು ಎಂದು ತಿಳಿದು ಬಂದಿದೆ. ಶನಿವಾರ ರಾತ್ರಿ 9.30ರ ಹೊತ್ತಿಗೆ ಗುಂಡಿನ ಶಬ್ದವಾದರೂ ನೆರೆಕರೆಯವರು ಅಷ್ಟೊಂದು ಗಮನ ಹರಿಸಿರಲಿಲ್ಲ. ರವಿವಾರ ಬೆಳಗ್ಗೆ ಕೃಷ್ಣ ಅವರ ಸ್ನೇಹಿತ ಮನೆಗೆ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯ ಜಗಲಿಯ ಮೇಲೆ ಮೃತದೇಹ ಕಂಡುಬಂದಿದ್ದು, ತಲೆಗೆ ಗುಂಡಿಕ್ಕಿ ಹತ್ಯೆಗೈಯಲಾಗಿದೆ. ಸ್ಥಳದಲ್ಲಿ ಗುಂಡಿನ 3 ಖಾಲಿ ಕವರ್ ದೊರಕಿದೆ.
ಹಾಗೇ ಉಳಿದ ಊಟ
ಕೃಷ್ಣ ಹೆಚ್ಚಿನ ದಿನ ರಾತ್ರಿ ಹೊಟೇಲ್ನಿಂದ ಊಟ ಪಾರ್ಸೆಲ್ ತರುತ್ತಿದ್ದು, ಶನಿವಾರ ಕೂಡ ತಂದಿದ್ದರು. ತಂದಿದ್ದ ಪಾರ್ಸೆಲ್ ಹಾಗೆಯೇ ಇತ್ತು. ಮೃತರು ಪತ್ನಿಯನ್ನು ಅಗಲಿದ್ದಾರೆ.
ಮೃದು ಸ್ವಭಾವದವರುಕೃಷ್ಣ ಅವರು ನೆರೆಕರೆ ಯವ ರೊಂದಿಗೆ ಸೌಹಾರ್ದದಿಂದ ಇದ್ದರು. ಯಾರೊಂದಿಗೂ ದ್ವೇಷ ಕಟ್ಟಿ ಕೊಂಡವ ರಲ್ಲ ಎಂದು ತಿಳಿದು ಬಂದಿದೆ. ಎಸ್ಪಿ ಡಾ| ಅರುಣ್ ಕೆ., ವೃತ್ತ ನಿರೀಕ್ಷಕ ದಿವಾಕರ್ ಪಿ.ಎಂ., ಠಾಣಾಧಿ ಕಾರಿ ಮಧು ಬಿ.ಇ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂರು ತಂಡ ರಚನೆ
ಪ್ರಕರಣದ ಹಿನ್ನೆಲೆಯಲ್ಲಿ ಮೂರು ಪ್ರತ್ಯೇಕ ತಂಡ ರಚಿಸಿ ಕಾರ್ಯಪ್ರವೃತ್ತರಾಗಿದ್ದೇವೆ. ಬೆರ ಳಚ್ಚು ತಜ್ಞರು, ಸ್ಥಳದಲ್ಲಿ ಪರಿ ಶೀಲನೆ, ಪೂರ್ವಾಪರ ಹಿನ್ನೆಲೆ ಸಹಿತ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ವೈಯಕ್ತಿಕ ವಿಚಾರದಲ್ಲಿ ಘಟನೆ ನಡೆ ದಿರುವ ಸಂಶಯವಿದೆ. ಆದಷ್ಟು ಶೀಘ್ರ ಪ್ರಕರಣ ಭೇದಿಸುತ್ತೇವೆ ಎಂದು ಎಸ್ಪಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ
Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.