![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 3, 2024, 7:04 PM IST
ಮಂಡ್ಯ: ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ಶೇಕಡ ನೂರರಷ್ಟು ನನಗೆ ಸಿಗಲಿದೆ. ಕರ್ನಾಟಕದಲ್ಲಿ ಯಾವಾಗ ಅಭ್ಯರ್ಥಿ ಪಟ್ಟಿ ಬಿಡುಗಡೆಯಾಗಲಿದೆಯೋ, ಅಂದೇ ನನ್ನ ಹೆಸರು ಕೂಡ ಬರಲಿದೆ ಎಂದು ಸಂಸದೆ ಸುಮಲತಾ ಅಂಬರೀಷ್ ವಿಶ್ವಾಸ ವ್ಯಕ್ತಪಡಿಸಿದರು.
ನಾಗಮಂಗಲದ ಆದಿಚುಂಚನಗಿರಿಯಲ್ಲಿ ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಹಾಗೂ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮೈತ್ರಿ ಟಿಕೆಟ್ ನನಗೆ ಸಿಗಲಿದ್ದು ನೂರಕ್ಕೆ ನೂರರಷ್ಟು ವಿಶ್ವಾಸವಿದೆ ಎಂದು ತಿಳಿಸಿದರು.
ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ. ಬರಲು ಹೇಳಿದರೆ ಮಾತ್ರ ಹೋಗುತ್ತೇನೆ. ಆ ತರಹದ ಯೋಚನೆಯಂಥೂ ಸದ್ಯಕ್ಕಿಲ್ಲ. ಚುನಾವಣೆ ತಯಾರಿಗೆ ಯಾವುದೇ ನಿರ್ದಿಷ್ಟ ಯೋಜನೆ ಮಾಡಿಲ್ಲ. ಕಳೆದ ಬಾರಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ಯಾವುದೇ ಒಂದು ಅನುಭವ ಇಲ್ಲದೆ ಚುನಾವಣೆಗೆ ನಿಂತಿದ್ದೆ. ನನಗೆ ಬೇಕಾದವರು ನಿಮ್ಮ ಜತೆ ಇರುತ್ತೇವೆ ಎಂದು ಗಟ್ಟಿಯಾಗಿ ನಿಂತಿದ್ದರು. ಇವಾಗ ಸಂದರ್ಭ ಬೇರೆ ಇದೆ. ಪಕ್ಷದ ಚಿಹ್ನೆಯಿಂದ ಸ್ಪರ್ಧಿಸುತ್ತಿದ್ದು ಪಕ್ಷ, ಪಕ್ಷದ ನಾಯಕರು ಏನು ಹೇಳುತ್ತಾರೆ ನೋಡಬೇಕು. ಇದು ಬೇರೆ ರೀತಿಯಲ್ಲಿ ಚುನಾವಣೆ ನಡೆಯುತ್ತದೆ. ಹೋರಾಟ, ಪ್ರಚಾರದಲ್ಲಿ ವ್ಯತ್ಯಾಸ ಇರಲಿದೆ ಎಂದರು.
ನಟ ಯಶ್ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲ್ಲ. ರಾಜಕಾರಣ ಗಲೀಜು ಅಂತ ಹೇಳಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಸುಮಲತಾ, ರಾಜಕೀಯ ಟೀಕೆ ಬಗ್ಗೆ ತಿಳಿದುಕೊಂಡಿದ್ದಾರೆ. ಪ್ಯಾನ್ ಇಂಡಿಯಾ ನಟರಾಗಿದ್ದು ನಾನು ನಿರೀಕ್ಷೆ ಮಾಡುವುದು ಸರಿಯಲ್ಲ. ಯಶ್ ಬರುತ್ತೇನೆ ಎಂದರೆ ಸಂತೋಷಪಡುತ್ತೇನೆ ಎಂದರು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.