Kapu: ಅಂಗಡಿ ಸೇಲ್ಸ್ಮೆನ್ನ ಪರ್ಸ್ ಎಗರಿಸಿ ಲಕ್ಷಾಂತರ ರೂ. ದರೋಡೆ
Team Udayavani, Mar 4, 2024, 1:04 AM IST
ಕಾಪು: ಬೈಕ್ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ದಿನಸಿ ಸೇಲ್ಸ್ ಮೆನ್ ವೃತ್ತಿ ಮಾಡುತ್ತಿದ್ದ ವ್ಯಕ್ತಿಯಲ್ಲಿದ್ದ ಲಕ್ಷಾಂತರ ರೂ. ನಗದನ್ನು ದೋಚಿ ಪರಾರಿಯಾದ ಘಟನೆ ಕಾಪು ಫ್ಲೈ ಓವರ್ ಅಡಿಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಉಡುಪಿಯ ಉಮೇಶ್ ಪರ್ಸ್ ಮತ್ತು ಲಕ್ಷಾಂತರ ರೂ. ಕಳೆದುಕೊಂಡಿರುವ ವ್ಯಕ್ತಿ.ಉಮೇಶ್ ಅವರು ನಿಟ್ಟೂರಿನ ಟ್ರೇಡರ್ಸ್ವೊಂದರಲ್ಲಿ ಸೇಲ್ಸ್ಮೆನ್ ಆಗಿ ಕೆಲಸ ಮಾಡಿಕೊಂಡಿದ್ದು ವಾಹನದಲ್ಲಿ ಸಾಮಾಗ್ರಿಗಳನ್ನು ನಿಟ್ಟೂರಿನಿಂದ ಬೈಕಂಪಾಡಿವರೆಗೆ ಅಂಗಡಿಗಳಿಗೆ ಸರಬರಾಜು ಮಾಡುತ್ತಿದ್ದರು. ಶನಿವಾರ ಬೆಳಗ್ಗೆ ಸಾಮಗ್ರಿಗಳನ್ನು ತುಂಬಿಸಿಕೊಂಡು ವಿವಿಧ ಕಡೆಗಳಲ್ಲಿ ಲೈನ್ ಸೇಲ್ ಮಾಡಿ ಹಣ ಸಂಗ್ರಹಿಸಿಕೊಂಡು ಮರಳಿ ನಿಟ್ಟೂರಿನ ಕಡೆ ಹೋಗುತ್ತಿರುವಾಗ ಕಾಪು ಹೊಸ ಮಾರಿಗುಡಿ ಮುಂಭಾಗದ ಅಂಡರ್ಪಾಸ್ನಲ್ಲಿ ಈ ಘಟನೆ ಸಂಭವಿಸಿದೆ.
ಕಾಪುವಿನ ಜನರಲ್ ಸ್ಟೋರ್ನ ಮಾಲಕರೊಬ್ಬರು ಕರೆ ಮಾಡಿ ಗೋಧಿ ಕಡಿ ಬೇಕು ಎಂದು ತಿಳಿಸಿದ್ದು, ಅದರಂತೆ ರಾತ್ರಿ 8.45ಕ್ಕೆ ಅಂಗಡಿಗೆ ನೀಡಿ ಹಣವನ್ನು ಪಡೆದು ಅಂಡರ್ಪಾಸ್ ಕೆಳಕಡೆ ತಲುಪುವಾಗ ಅಪರಿಚಿತ ಬೈಕ್ ಸವಾರನೋರ್ವ ಉಮೇಶ್ ಬಳಿ ಬೈಕನ್ನು ನಿಲ್ಲಿಸಿ ಅವರಲ್ಲಿದ್ದ ಬ್ಯಾಗನ್ನು ಕಸಿದು ಪರಾರಿಯಾಗಿದ್ದಾನೆ.
ಬ್ಯಾಗಿನಲ್ಲಿ ಲಕ್ಷಾಂತರ ರೂ. ಇತ್ತು ಎಂದು ಉಮೇಶ್ ನೀಡಿದ ದೂರಿನಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Eid: ಈದ್ ಮಿಲಾದ್ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ
Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್ ಮಿಲಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.