![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 4, 2024, 9:38 AM IST
ಮಹಾರಾಷ್ಟ್ರ: ಇತ್ತೀಚಿನ ದಿನಗಳಲ್ಲಿ ಆಹಾರ ಅರಸಿ ಕಾಡು ಪ್ರಾಣಿಗಳು ನಾಡಿಗೆ ಬರುತ್ತಿರುವುದು ಸಾಮಾನ್ಯವಾಗಿದೆ ಅದೇ ರೀತಿ ಇಲ್ಲೊಂದು ಚಿರತೆ ಆಹಾರ ಅರಸಿಕೊಂಡು ಬಂದು ಲೋಹದ ಮಡಕೆಯೊಳಗೆ ತಲೆ ಹಾಕಿ ತೆಗೆಯಲು ಬಾರದೆ ಒದ್ದಾಡಿದ ಘಟನೆಯೊಂದು ಮಹಾರಾಷ್ಟ್ರದ ಧುಲೆ ಜಿಲ್ಲೆಯ ಹಳ್ಳಿಯೊಂದರಲ್ಲಿ ಬೆಳಕಿಗೆ ಬಂದಿದೆ.
ಏನಿದು ಘಟನೆ:
ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿರುವ ಹಳ್ಳಿಯೊಂದಕ್ಕೆ ಗಂಡು ಚಿರತೆಯೊಂದು ಆಹಾರ ಅರಸಿಕೊಂಡು ಬಂದಿದೆ ಈ ವೇಳೆ ಅಲ್ಲಿದ್ದ ಮನೆಯೊಂದರ ಹೊರಭಾಗದಲ್ಲಿ ಇದ್ದ ಲೋಹದ ಮಡಕೆಯೊಳಗೆ ಏನೋ ಆಹಾರ ಇದೆ ಎಂದು ತಲೆ ಹಾಕಿದೆ ಇದಾದ ಬಳಿಕ ಚಿರತೆಯ ತಲೆ ಲೋಹದ ಮಡಕೆಯೊಳಗೆ ಸಿಕ್ಕಿಬಿದ್ದಿದೆ ಎಷ್ಟೇ ಪ್ರಯತ್ನ ಪಟ್ಟರೂ ತಲೆಯನ್ನು ಮಡಕೆ ಒಳಗಿಂದ ತೆಗೆಯಲು ಸಾಧ್ಯವಾಗಲಿಲ್ಲ ಈ ವೇಳೆ ಮನೆ ಮಂದಿ ಏನೋ ಸದ್ದು ಆಗುತ್ತಿದೆ ಎಂದು ಬಂದು ನೋಡಿದಾಗ ಚಿರತೆ ಮಡಕೆಯೊಳಗೆ ತಲೆ ಹಾಕಿ ಒದ್ದಾಡುತ್ತಿರುವುದು ಕಂಡುಬಂದಿದೆ. ಗಾಬರಿಗೊಂಡ ಮನೆಮಂದಿ ಅಕ್ಕಪಕ್ಕದ ಜನರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಗ್ರಾಮಸ್ಥರು ಮನೆಯ ಬಳಿ ಸೇರಿದ್ದು ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಅರವಳಿಕೆ ಮದ್ದು ನೀಡಿ ಕೆಲ ಗಂಟೆಗಳ ಕಾರ್ಯಾಚರಣೆ ಬಳಿಕ ಮಡಕೆಯಿಂದ ಚಿರತೆಯ ತಲೆಯನ್ನು ಹೊರತೆಗೆಯಲಾಯಿತು.
ಅರಣ್ಯ ಇಲಾಖೆ ಚಿರತೆಯನ್ನು ಸೆರೆ ಹಿಡಿದು ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ, ಇದರಿಂದ ಸುಮಾರು ಐದು ಗಂಟೆಗಳ ಕಾಲ ಮಡಕೆಯೊಳಗೆ ತಲೆ ಹಾಕಿ ಸಿಕ್ಕಿಬಿದ್ದು ಒದ್ದಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ರಕ್ಷಣೆ ಮಾಡಿದ್ದಾರೆ.
#WATCH | Maharashtra: A male leopard spent five hours with its head stuck in a metal vessel in a village in Dhule district was later rescued by the Forest Department: RFO Savita Sonawane
(Video Source: Forest Department) pic.twitter.com/PojOWOCoRd
— ANI (@ANI) March 3, 2024
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…
Jamui: ಸಾಲ ರಿಕವರಿಗೆ ಬಂದ ಏಜೆಂಟ್ ನನ್ನೇ ಮದುವೆಯಾದ ವಿವಾಹಿತ ಮಹಿಳೆ!
Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ
Malaysia; ಭಾರತ ಮೂಲದ ಮಹಿಳೆಯಿಂದ ಕೆಲಸಕ್ಕಾಗಿ ಪ್ರತಿದಿನ 700 ಕಿ.ಮೀ. ವಿಮಾನ ಯಾನ!
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.