Lok Sabha: ಸುಮಲತಾ ಪರ ಮತ್ತೆ ಪ್ರಚಾರಕ್ಕೆ ಇಳಿಯುತ್ತಾರ ಜೋಡೆತ್ತು; ಸಂಸದೆ ಹೇಳಿದ್ದೇನು?


Team Udayavani, Mar 4, 2024, 12:54 PM IST

Lok Sabha: ಸುಮಲತಾ ಪರ ಮತ್ತೆ ಪ್ರಚಾರಕ್ಕೆ ಇಳಿಯುತ್ತಾರ ಜೋಡೆತ್ತು; ಸಂಸದೆ ಹೇಳಿದ್ದೇನು?

ಬೆಂಗಳೂರು: ಲೋಕಸಭಾ ಚುನಾವಣೆಯ ಕಾವು ದಿನ ಕಳೆದಂತೆ ಹೆಚ್ಚಾಗುತ್ತಿದೆ. ಇತ್ತ ಮಂಡ್ಯದಲ್ಲಿ ಟಿಕೆಟ್‌ ಗಾಗಿ ತೆರೆಮರೆಯಲ್ಲಿ ಪೈಪೋಟಿ ಶುರುವಾಗಿದೆ. ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿಯಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಆದರೆ ಅವರ ಟಿಕೆಟ್‌ ನಿರೀಕ್ಷೆ ಈ ಬಾರಿ ಅಷ್ಟು ಸುಲಭವಾಗಿಲ್ಲ. ಅದಕ್ಕೆ ಕಾರಣ ಜೆಡಿಎಸ್‌ – ಬಿಜೆಪಿ ಮೈತ್ರಿ.

ಈ ಹಿಂದೆ ಸುಮಲತಾ ಅವರು ಮಂಡ್ಯದಿಂದ ಸ್ಪರ್ಧಿಸಿ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಜಯಭೇರಿಗಳಿಸಿದ್ದರು. ಕಳೆದ ಬಾರಿ ಸುಮಲತಾ ಅವರ ಪರವಾಗಿ ಮತ ಪ್ರಚಾರಕ್ಕೆ ಸ್ಟಾರ್‌ ನಟರಾದ ಯಶ್‌ ಹಾಗೂ ದರ್ಶನ್‌ ಅವರು ಬಂದಿದ್ದರು. ಜನ ಚುನಾವಣಾ ಪ್ರಚಾರಕ್ಕೆ ಬಂದ ಯಶ್‌ ಹಾಗೂ ದರ್ಶನ್‌ ಅವರನ್ನು ನೋಡಲು ಹರಿದು ಬಂದಿದ್ದರು.

ಈ ಬಾರಿ ಸುಮಲತಾ ಅವರು ಮಂಡ್ಯದಿಂದ ಸ್ಪರ್ಧಿಸುತ್ತಾರಾ, ಸ್ಪರ್ಧಿಸಿದ್ದರೆ ಈ ಬಾರಿಯೂ ಯಶ್‌ ಹಾಗೂ ದರ್ಶನ್‌ ಪ್ರಚಾರಕ್ಕೆ ಬರುತ್ತಾರಾ? ಎನ್ನುವ ಮಾತುಗಳು ಮಂಡ್ಯ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಮದರ್ ಇಂಡಿಯಾ ಎಲ್ಲೇ ಸ್ಪರ್ಧಿಸಿದರೂ ಬೆಂಬಲ ಇರುತ್ತದೆ ಎಂದು ದರ್ಶನ್‌ ಇತ್ತೀಚೆಗೆ ಸಂಸದೆ ಸುಮಲತಾ ಅಂಬರೀಶ್ ಮನೆಯಲ್ಲಿ ನಡೆದ ಸಭೆಯಲ್ಲಿ ಭಾಗಿಯಾಗಿ ಹೇಳಿದ್ದರು.

ಮಾಧ್ಯಮದವರು ಸಂಸದೆ ಸುಮಲತಾ ಅವರ ಬಳಿ ಈ ಬಾರಿ ಯಶ್‌ ಚುನಾವಣಾ ಪ್ರಚಾರಕ್ಕೆ ಬರುತ್ತಾರಾ? ಎನ್ನುವ ಪ್ರಶ್ನೆಯನ್ನು ಕೇಳಿದ್ದಾರೆ.

“ಕಳೆದ ಚುನಾವಣೆ ಬಳಿಕ ಯಶ್‌ ಜೊತೆ ಸಾಕಷ್ಟು ಬಾರಿ ಮಾತನಾಡಿದ್ದೇನೆ. ರಾಜಕಾರಣ ಎಂದರೆ ಇಷ್ಟು ಕಹಿ ಇರುತ್ತದೆಯೇ, ಇಷ್ಟೊಂದು ಟೀಕೆ ಇರುತ್ತದೆಯೇ ಎಂದು ಬೇಸರ ಮಾಡಿಕೊಂಡಿದ್ದರು. ನಿಮ್ಮ ಚುನಾವಣೆಯಲ್ಲಿ ಆ ಬಗ್ಗೆ ಗೊತ್ತಾಯ್ತು ಎಂದಿದ್ದರು. ಅವರು ಪ್ಯಾನ್ ಇಂಡಿಯಾ ಸ್ಟಾರ್. ಅವರು ಬ್ಯುಸಿ ಆಗಿದ್ದಾರೆ. ಅವರಿಂದ ಮತ್ತೆ ಇದನ್ನು ನಿರೀಕ್ಷಿಸೋಕೆ ನನ್ನ ಮನಸ್ಸು ಒಪ್ಪುತ್ತಿಲ್ಲ ಎಂದು ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ.

“ಯಶ್ ಪ್ರಚಾರಕ್ಕೆ ಬರ್ತೀನಿ ಅಂದ್ರೆ ನನ್ನಷ್ಟು ಸಂತೋಷಪಡುವವರು ಯಾರು ಇಲ್ಲ. ಬರೋಕ್ಕಾಗಲ್ಲ ಅಂದ್ರು ಏನು ಮಾಡೋಕ್ಕಾಗಲ್ಲ. ಕಳೆದ ಬಾರಿ ಕೂಡ ನಾನು ಯಾರನ್ನು ಕೇಳಿ ಬರಲಿಲ್ಲ. ಮನೆ ಮಕ್ಕಳಾಗಿ ಅಂಬರೀಶ್ ಮೇಲಿನ ಅಭಿಮಾನ, ನಮ್ಮ ಕುಟುಂಬದ ಜೊತೆಗಿನ ನಂಟಿನಿಂದ ಅವರೇ ಬಂದ್ರು. ನಾವು ಜೊತೆಗಿರ್ತೀವಿ ಅಂದ್ರು. ಈಗಲೂ ಅಷ್ಟೆ. ಅವ್ರು ಒಪ್ಪಿಗೆ ನನಗೆ ಸಂತೋಷ. ಇಲ್ಲ ಅಂದ್ರು ಪರವಾಗಿಲ್ಲ” ಎಂದಿದ್ದಾರೆ

“ಯಶ್ ಪ್ರಚಾರಕ್ಕೆ ಬರ್ತೀನಿ ಅಂದ್ರೆ ನನ್ನಷ್ಟು ಸಂತೋಷಪಡುವವರು ಯಾರು ಇಲ್ಲ. ಬರೋಕ್ಕಾಗಲ್ಲ ಅಂದ್ರು ಏನು ಮಾಡೋಕ್ಕಾಗಲ್ಲ. ಕಳೆದ ಬಾರಿ ಕೂಡ ನಾನು ಯಾರನ್ನು ಕೇಳಿ ಬರಲಿಲ್ಲ. ಮನೆ ಮಕ್ಕಳಾಗಿ ಅಂಬರೀಶ್ ಮೇಲಿನ ಅಭಿಮಾನ, ನಮ್ಮ ಕುಟುಂಬದ ಜೊತೆಗಿನ ನಂಟಿನಿಂದ ಅವರೇ ಬಂದ್ರು. ನಾವು ಜೊತೆಗಿರ್ತೀವಿ ಅಂದ್ರು. ಈಗಲೂ ಅಷ್ಟೆ. ಅವ್ರು ಒಪ್ಪಿಗೆ ನನಗೆ ಸಂತೋಷ. ಇಲ್ಲ ಅಂದ್ರು ಪರವಾಗಿಲ್ಲ” ಎಂದಿದ್ದಾರೆ

“ಕಳೆದ ಚುನಾವಣೆಯಲ್ಲಿ ಜೊತೆಗಿದ್ದವರು ಈ ಬಾರಿಯೂ ಜೊತೆಗಿದ್ದಾರೆ. ಕಳೆದ ಬಾರಿ ಅವರದ್ದು ಬರೀ ಬೆಂಬಲ ಅಲ್ಲ ತ್ಯಾಗ ನನಗೋಸ್ಕರ. 20-25 ದಿವಸ ಇದ್ದರು. ದಕ್ಷಿಣ ಭಾರತದ ಇಬ್ಬರೂ ಸ್ಟಾರ್ಸ್ ಒಬ್ಬ ಅಭ್ಯರ್ಥಿ ನಿಂತಿದ್ದು ಸಾಹಸ. ಪದೇ ಪದೆ ಬನ್ನಿ ಎನ್ನುವುದು ಸರೀನಾ ನೀವೇ ಹೇಳಿ. ಯಶ್, ದರ್ಶನ್ ಸಿನಿಮಾ ಮಾಡುವಾಗ ಎಷ್ಟು ಜನ ಅದರ ಮೇಲೆ ಅವಲಂಬಿತರಾಗಿರುತ್ತಾರೆ. ಹತ್ತಿಪ್ಪತ್ತು ದಿನಕ್ಕೆ ಎಷ್ಟು ಸಂಭಾವನೆ ಪಡೆಯುತ್ತಾರೆ ನಿಮಗೆ ಗೊತ್ತು. ಅದನ್ನೆಲ್ಲಾ ಬಿಟ್ಟು ಬನ್ನಿ ಎನ್ನುವುದು ಸರಿಯಲ್ಲ. ಬಂದರೆ ನನಗೆ ಬಲ” ಎಂದು ಸುಮಲತಾ ಹೇಳಿದ್ದಾರೆ.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.