ಅಧ್ಯಯನ ವರದಿ ಅಧಿಕೃತವಾಗಿ ಬಿಡುಗಡೆಯಾದ ಮೇಲೆ ಚರ್ಚಿಸುವುದು ಸೂಕ್ತ: ಕೆ.ಜಯಪ್ರಕಾಶ್‌ ಹೆಗ್ಡೆ

ಏನಾದರು ತಪ್ಪುಗಳಾಗಿದ್ದರೆ ಅದನ್ನು ಸರಿಪಡಿಸಲು ಅವಕಾಶವಿದೆ ...

Team Udayavani, Mar 4, 2024, 1:59 PM IST

ಅಧ್ಯಯನ ವರದಿ ಅಧಿಕೃತವಾಗಿ ಬಿಡುಗಡೆಯಾದ ಮೇಲೆ ಚರ್ಚಿಸುವುದು ಸೂಕ್ತ: ಕೆ.ಜಯಪ್ರಕಾಶ್‌ ಹೆಗ್ಡೆ

ಉಡುಪಿ: ರಾಜ್ಯ ಸರ್ಕಾರದ ಸೂಚನೆಯಂತೆ ಕಾಂತರಾಜು ಅವರು ಅಧ್ಯಕ್ಷರಾಗಿದ್ದಾಗ ಸಂಗ್ರಹಿಸಿದ್ದ ದತ್ತಾಂಶದ ಆಧಾರದ ಮೇಲೆ ಹಿಂದುಗಳಿದ ಜಾತಿಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಿದ್ದೇವೆ. ಸರ್ಕಾರ ವರದಿಯನ್ನು ಸಚಿವ ಸಂಪುಟದ ಮುಂದೆ ಇಟ್ಟು, ಅನುಮೋದನೆ ಪಡೆದು, ಸಾರ್ವಜನಿಕವಾಗಿ ಬಿಡುಗಡೆ ಮಾಡಿದಾಗ ಚರ್ಚೆ ಮಾಡಲು ಅವಕಾಶ ಇದೆ ಎಂದು ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್‌ ಹೆಗ್ಡೆ ಹೇಳಿದರು.

ಇದನ್ನೂ ಓದಿ:Rajinikanth: ಮನೆ ಕೆಲಸದಾಕೆಯನ್ನು ಅವಮಾನ ಮಾಡಿದ ರಜಿನಿಕಾಂತ್?‌ ವಿಡಿಯೋ ವೈರಲ್

ಅವರು ಸೋಮವಾರ (ಮಾರ್ಚ್‌ 04) ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದರು.

ಅಧ್ಯಯನದ ವೇಳೆ 1.30 ಕೋಟಿ ಮನೆಗಳಿಗೆ ಭೇಟಿ ನೀಡಿದ್ದು, 5.98 ಕೋಟಿ ಜನರ ಮಾಹಿತಿ ಸಂಗ್ರಹಿಸಲಾಗಿದೆ. ಅಧ್ಯಯನ ವರದಿಯನ್ನು ಸರ್ಕಾರ ಒಪ್ಪುವವರೆಗೆ ನಾವು ಸಾರ್ವಜನಿಕವಾಗಿ ಚರ್ಚೆ ಮಾಡುವ ಹಾಗಿಲ್ಲ. ಸರ್ಕಾರ ಅಧಿಕೃತವಾಗಿ ಸಾರ್ವಜನಿಕವಾಗಿ ಬಿಡುಗಡೆಗೊಳಿಸಿದರೆ, ಆಗ ಚರ್ಚೆ ನಡೆಸಬಹುದು, ಏನಾದರು ತಪ್ಪುಗಳಾಗಿದ್ದರೆ ಅದನ್ನು ಸರಿಪಡಿಸಲು ಅವಕಾಶವಿದೆ ಎಂದರು.

ಒಂದು ಕುಟುಂಬಕ್ಕೆ 54 ಪ್ರಶ್ನೆಗಳಿದ್ದು, ಅದರಲ್ಲಿ ಜಾತಿ ಕೂಡಾ ಒಂದು. ನಾವು ಜಾತಿಗಣತಿ ನಡೆಸಿಲ್ಲ. ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಿದ್ವೇವೆ. ವರದಿ ವೈಜ್ಞಾನಿಕವಾಗಿಲ್ಲ ಎಂದು ಆರೋಪಿಸಬೇಕಾದರೆ, ಮೊದಲು ವರದಿ ಓದಬೇಕು. ಓದಿದ ನಂತರ ಚರ್ಚೆ ಮಾಡಿದರೆ ಉತ್ತಮ ಎಂದು ಜಯಪ್ರಕಾಶ್‌ ಹೆಗ್ಡೆ ಹೇಳಿದರು.

ಸಮಾಜದಲ್ಲಿ ಸಮಾನತೆ ತರಲು ಮೀಸಲಾತಿ ತರಲಾಗಿದೆ. ಅಧ್ಯಯನ ವರದಿಯಲ್ಲಿ 1,300ಕ್ಕೂ ಅಧಿಕ ಜಾತಿಗಳನ್ನು ಗುರುತಿಸಲಾಗಿದೆ. ಸಣ್ಣ, ಸಣ್ಣ ಜಾತಿಯ ಅಂಶಗಳನ್ನು ಸೇರಿಸಲಾಗಿದೆ. ನಾವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬಗ್ಗೆ ಯಾವುದೇ ಮಾಹಿತಿ ಸಂಗ್ರಹಿಸಿಲ್ಲ. ಅದಕ್ಕೆ ಬೇರೆಯೇ ಆಯೋಗ ಇದೆ. ಸುಮ್ಮನೆ ಕುಳಿತು ವರದಿ ತಯಾರಿಸಿಲ್ಲ. ಅಧ್ಯಯನ ನಡೆಸಿ ಮಾಹಿತಿ ಸಂಗ್ರಹಿಸಿದ್ದೇವೆ.

ಸ್ಪರ್ಧೆ ಬಗ್ಗೆ ಚರ್ಚಿಸಿ ತೀರ್ಮಾನ:

ನಾನೀಗ ಯಾವ ಪಕ್ಷದ ಸದಸ್ಯನೂ ಅಲ್ಲ. ಆದರೆ ಮಾಧ್ಯಮಗಳಲ್ಲಿ ಊಹಾಪೋಹಗಳು ಹರಿದಾಡುವ ಮೂಲಕ ಚಾಲ್ತಿಯಲ್ಲಿದ್ದೇನೆ. ಚುನಾವಣೆ ವಿಚಾರದಲ್ಲಿ ನಾನು ಯಾರನ್ನೂ ಸಂಪರ್ಕಿಸಿಲ್ಲ, ಬೇರೆ ಪಕ್ಷದವರು ಸಂಪರ್ಕಿಸಿಲ್ಲ. ನಾನು ಚುನಾವಣೆಯಲ್ಲಿ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ತೀರ್ಮಾನ ಮಾಡಿದ ನಂತರ ಪಕ್ಷದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಜಯಪ್ರಕಾಶ್‌ ಹೆಗ್ಡೆ ಚುನಾವಣೆ ಸ್ಪರ್ಧೆ ಕುರಿತು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.

 

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.