Three arrested ; ಬಿಜೆಪಿಯ ನಿರಂತರ ಹೋರಾಟದ ಫಲ: ವಿಜಯೇಂದ್ರ
ಎಲ್ಲ ದೇಶದ್ರೋಹಿಗಳನ್ನೂ ಬಂಧಿಸಬೇಕು... ಇವರ ಹಿನ್ನೆಲೆ ಏನು?
Team Udayavani, Mar 4, 2024, 8:28 PM IST
ಬೆಳಗಾವಿ: ಬಿಜೆಪಿಯ ನಿರಂತರ ಹೋರಾಟದ ಫಲವಾಗಿ ಸರಕಾರ ಈಗ ವಿಧಾನಸೌಧದಲ್ಲಿ ಪಾಕಿಸ್ಥಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಮೂವರನ್ನು ಬಂಧಿಸಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ’ ಪಾಕಿಸ್ಥಾನ ಜಿಂದಾಬಾದ್ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು. ಘೋಷಣೆ ಕೂಗಿದವರನ್ನು ಬಂಧಿಸಿದ ತತ್ ಕ್ಷಣ ನ್ಯಾಯ ಸಿಕ್ಕಿದಂತಲ್ಲ. ಇದರಲ್ಲಿ ಭಾಗಿಯಾಗಿರುವ ಎಲ್ಲ ದೇಶದ್ರೋಹಿಗಳನ್ನೂ ಬಂಧಿಸಬೇಕು. ಇವರ ಹಿನ್ನೆಲೆ ಏನು? ವಿಧಾನಸೌಧದ ಒಳಗೆ ಘೋಷಣೆ ಕೂಗಲು ಪ್ರಚೋದನೆ ಕೊಟ್ಟವರು ಯಾರು? ಇವರ ಜತೆ ಯಾರೆಲ್ಲ ಸಂಪರ್ಕದಲ್ಲಿ ಇದ್ದಾರೆ ಎಂಬುದನ್ನು ಮುಖ್ಯಮಂತ್ರಿ ಮತ್ತು ರಾಜ್ಯ ಸರಕಾರವು ರಾಜ್ಯದ ಜನತೆಗೆ ತಿಳಿಸಬೇಕು’ ಎಂದು ಒತ್ತಾಯಿಸಿದರು.
‘ವಿಪಕ್ಷಗಳ ಒತ್ತಾಯಕ್ಕೆ ಮಣಿದು ಮೂವರನ್ನು ಬಂಧಿಸಿದ ಮಾಹಿತಿ ಲಭಿಸಿದೆ. ಖಾಸಗಿ ಎಫ್ಎಸ್ಎಲ್ ವರದಿ ಮೂರು ದಿನಗಳಿಂದ ಹರಿದಾಡುತ್ತಿದೆ. ಅಧಿಕೃತ ಎಫ್ಎಸ್ಎಲ್ ವರದಿ ಲಭಿಸಿದ್ದರೂ ಕೂಡ ಅದನ್ನು ಬಹಿರಂಗಪಡಿಸದೆ ವಿಳಂಬ ಮಾಡಿರುವುದು ಸರಕಾರದ ಮೇಲೆ ಅನುಮಾನ ಬರುವಂತೆ ಮಾಡಿದೆ.ಇವರನ್ನು ಕೇವಲ ನಾಮಕಾವಾಸ್ತೆ ಬಂಧಿಸಿ ಒಳಗೆ ರಾಜಾತಿಥ್ಯ ಕೊಡುವ ಬದಲು ಸತ್ಯ ಏನೆಂದು ಸರಕಾರ ಬಹಿರಂಗಪಡಿಸಬೇಕು’ ಎಂದು ಒತ್ತಾಯಿಸಿದರು.
‘ಈಗ ಸಚಿವ ಸಂಪುಟದ ನಿಮ್ಮ ಸದಸ್ಯರು ಹಾಗೂ ಶಾಸಕರು ಪಾಕಿಸ್ಥಾನ ಜಿಂದಾಬಾದ್ ಎಂದು ಕೂಗಿದವರು ಅಮಾಯಕರು ಎಂದು ಒತ್ತಾಯ ತರಬಹುದು. ಆದ್ದರಿಂದ ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅಂಥ ದೇಶದ್ರೋಹಿಗಳಿಗೆ ತಕ್ಕ ಪಾಠ ಕಲಿಸಬೇಕು’ ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ: ಬಂಧನವಾಗಿ ನೂರು ದಿನ ಕಳೆಯಿತು!
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ: ಬಂಧನವಾಗಿ ನೂರು ದಿನ ಕಳೆಯಿತು!
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.