Lok Sabha Elections 2024: ಕಾಂಗ್ರೆಸ್‌ಗೂ ಜೈ, ಬಿಜೆಪಿಗೂ ಸೈ ಎಂದ ದಾವಣಗೆರೆ!

ಸದಾ ಬೀಗರ ಕಾಳಗಕ್ಕೆ ಅಖಾಡವಾದ ಮಧ್ಯ ಕರ್ನಾಟಕದ ಕ್ಷೇತ್ರ

Team Udayavani, Mar 5, 2024, 7:00 AM IST

ದಾವಣಗೆರೆ: ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಲೋಕಸಭೆ ಕ್ಷೇತ್ರ ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಸಮಾನವಾಗಿ ಒಲಿದಿದೆ. ಕಾಂಗ್ರೆಸ್‌ ಭದ್ರ ಕೋಟೆಯಾಗಿದ್ದ ಈ ಕ್ಷೇತ್ರ ಈಗ ಬಿಜೆಪಿಯ ವಶದಲ್ಲಿದೆ. ಶಾಮನೂರು ಹಾಗೂ ಸಿದ್ದೇಶ್ವರ ಕುಟುಂಬದ “ಬೀಗರ ಕಾಳಗ’ಕ್ಕೂ ಅಖಾಡವಾಗಿದೆ.

ಸಾಮಾನ್ಯವಾಗಿ ರಾಜ್ಯ ರಾಜಕಾರಣದ ಕಹಳೆ ಮೊಳಗುವುದೇ ಇಲ್ಲಿ. ದಾವಣಗೆರೆಯಲ್ಲಿ ಚುನಾವಣ ಪ್ರಚಾರ ಆರಂಭಿಸಿದರೆ ರಾಜ್ಯದಲ್ಲಿ ಗೆಲುವು ಖಂಡಿತಾ ಎನ್ನುವ ನಂಬಿಕೆ ಹೊಂದಿರುವ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ, ಈವರೆಗೆ ನಡೆದ ಎಲ್ಲ ಚುನಾವಣೆಗಳಲ್ಲೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆಯೇ ನೇರ ಹಣಾಹಣಿ ನಡೆದಿದೆ. ಈ ಬಾರಿಯೂ ಅದೇ ಪರಿಸ್ಥಿತಿ ಇದೆ.

ಈವರೆಗೆ 12 ಚುನಾವಣೆಗಳು ನಡೆದಿದ್ದು, ಕಾಂಗ್ರೆಸ್‌ ಹಾಗೂ ಬಿಜೆಪಿ ತಲಾ ಆರು ಬಾರಿ ಗೆದ್ದು ಸಮಬಲವಾಗಿವೆ. ಕಾಂಗ್ರೆಸ್‌ 1977ರಿಂದ 1991ರ ವರೆಗೆ ನಿರಂತರ ಗೆಲುವು ಸಾಧಿಸಿದೆ. ಬಳಿಕ ಒಮ್ಮೆ ಬಿಜೆಪಿ (1996), ಇನ್ನೊಮ್ಮೆ ಕಾಂಗ್ರೆಸ್‌ (1998) ಗೆದ್ದಿದೆ. 1999ರಿಂದ 2019ರ ವರೆಗೆ ನಿರಂತರವಾಗಿ ಬಿಜೆಪಿ ವಿಜಯಪತಾಕೆ ಹಾರಿಸಿದೆ. ಹಾಲಿ ಸಂಸದ ಬಿಜೆಪಿಯ ಜಿ.ಎಂ. ಸಿದ್ದೇಶ್ವರ ಸತತ ನಾಲ್ಕು ಬಾರಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನಲ್ಲಿ ಚನ್ನಯ್ಯ ಒಡೆಯರ್‌ (1984-1991) ನಿರಂತರವಾಗಿ ಮೂರು ಬಾರಿ ಆಯ್ಕೆಯಾಗಿದ್ದರು. ಜಿ. ಮಲ್ಲಿಕಾರ್ಜುನ್‌ (ಬಿಜೆಪಿ), ಶಾಮನೂರು ಶಿವಶಂಕರಪ್ಪ, ಟಿ.ವಿ. ಚಂದ್ರಶೇಖರಪ್ಪ, ಕೊಂಡಜ್ಜಿ ಬಸಪ್ಪ (ಕಾಂಗ್ರೆಸ್‌) ತಲಾ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಕ್ಷೇತ್ರದಲ್ಲಿ ಲಿಂಗಾಯತರ ಪ್ರಾಬಲ್ಯ ಹೆಚ್ಚಾಗಿದ್ದು, ಚುನಾವಣ ಕಣದಲ್ಲಿ ಲಿಂಗಾಯತ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿರುವುದು ಮಾಮೂಲು. ಕಾಂಗ್ರೆಸ್‌ನಿಂದ 3 ಬಾರಿ ಆಯ್ಕೆಯಾದ ಚನ್ನಯ್ಯ ಒಡೆಯರ್‌ ಹೊರತುಪಡಿಸಿದರೆ, ಆಯ್ಕೆಯಾದ ಉಳಿದವರೆಲ್ಲ ಲಿಂಗಾಯತರೇ ಆಗಿದ್ದಾರೆ. ಅದರಲ್ಲೂ ಸಾಧು ಲಿಂಗಾಯತರದ್ದೇ ಇಲ್ಲಿ ಪಾರುಪತ್ಯ. ಲಿಂಗಾಯತ ಸಮುದಾಯ ಆರಂಭದ ಚುನಾವಣೆಗಳಲ್ಲಿ ಕಾಂಗ್ರೆಸ್‌ ಬೆಂಬಲಿಸಿದರೆ, ಕಳೆದ ಐದು ಚುನಾವಣೆಗಳಿಂದ ಬಿಜೆಪಿಯನ್ನು ಬೆಂಬಲಿಸುವ ಜತೆಗೆ ಒಂದೇ ಕುಟುಂಬದವರ (ಜಿ.ಮಲ್ಲಿಕಾರ್ಜುನ್‌ ಹಾಗೂ ಪುತ್ರ ಜಿ.ಎಂ.ಸಿದ್ದೇಶ್ವರ) ಕೈಹಿಡಿಯುತ್ತ ಬಂದಿರುವುದು ಗಮನಾರ್ಹ.

6ರಿಂದ 7ಕ್ಕೇರಿದ ಕಾಂಗ್ರೆಸ್‌ ಬಲ!
ಪ್ರಸ್ತುತ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಏಳು, ಬಿಜೆಪಿಯ ಓರ್ವ ಶಾಸಕರಿದ್ದಾರೆ. ದಾವಣಗೆರೆ ಉತ್ತರ, ದಾವಣಗೆರೆ ದಕ್ಷಿಣ, ಜಗಳೂರು, ಚನ್ನಗಿರಿ, ಹೊನ್ನಾಳಿ, ಮಾಯಕೊಂಡದಲ್ಲಿ 6 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಹರಪನಹಳ್ಳಿ ಕ್ಷೇತ್ರದಲ್ಲಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್‌ ಪಕ್ಷೇತರರಾಗಿ ಗೆದ್ದಿದ್ದು, ಅವರು ಪ್ರಸ್ತುತ ಕಾಂಗ್ರೆಸ್‌ ಅನ್ನು ಬೆಂಬಲಿಸುತ್ತಿರುವ ಕಾರಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರ ಸಂಖ್ಯೆ ಪರೋಕ್ಷವಾಗಿ ಏಳಕ್ಕೇರಿದೆ. ಹರಿಹರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಆರು ಶಾಸಕರನ್ನು ಹಾಗೂ ಕಾಂಗ್ರೆಸ್‌ ಇಬ್ಬರು ಶಾಸಕರನ್ನು ಹೊಂದಿತ್ತು.

ಪ್ರತಿ ಬಾರಿಯೂ ಇಲ್ಲಿ ಬಿಜೆಪಿಯಲ್ಲಿ ಸಿದ್ದೇಶ್ವರ ಕುಟುಂಬ ಹಾಗೂ ಕಾಂಗ್ರೆಸ್‌ನಲ್ಲಿ ಶಾಮನೂರು ಕುಟುಂಬವೇ ಆಯಾಯ ಪಕ್ಷದಲ್ಲಿ ನಿರ್ಣಾಯಕವಾಗಿರುವುದು ಸಾಮಾನ್ಯ. ಈ ಬಾರಿ ಬಿಜೆಪಿಯಲ್ಲಿ ಸಿದ್ದೇಶ್ವರ ಕುಟುಂಬದವರನ್ನು ಹೊರತುಪಡಿಸಿ ಬೇರೆಯವರಿಗೆ ಟಿಕೆಟ್‌ ಕೊಡಬೇಕೆಂಬ ಆಗ್ರಹ ಬಲವಾಗಿದೆ.
ಒಂದೊಮ್ಮೆ ಈ ಬಾರಿಯೂ ಸಿದ್ದೇಶ್ವರ ಅಥವಾ ಅವರ ಕುಟುಂಬದವರಿಗೇ ಟಿಕೆಟ್‌ ಸಿಕ್ಕಿದರೆ ಆಕಾಂಕ್ಷಿ ಬಣದ ನಡೆ ಯಾವ ರೀತಿ ಇರಬಹುದು ಎಂಬುದು ಕುತೂಹಲ ಕೆರಳಿಸಿದೆ.

ಕಾಂಗ್ರೆಸ್‌ನಲ್ಲಿ “ಸ್ಥಳೀಯ ಹೈಕಮಾಂಡ್‌’ ಎನಿಸಿರುವ ಶಾಮನೂರು ಕುಟುಂಬ ಈ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದ್ದು, ಕಾಂಗ್ರೆಸ್‌ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್‌ ಹೆಸರು ತೇಲಿಬರುತ್ತಿದೆ. ಇದಕ್ಕೆ ಪೂರಕವಾಗಿ ಪ್ರಭಾ ಅವರು ತಮ್ಮ ಎಸ್‌.ಎಸ್‌. ಕೇರ್‌ ಟ್ರಸ್ಟ್‌ ಮೂಲಕ ಕ್ಷೇತ್ರಾದ್ಯಂತ ಆರೋಗ್ಯ ಶಿಬಿರ ನಡೆಸಿ ರಾಜಕಾರಣ ಪ್ರವೇಶಿಸುವ ತಾಲೀಮು ನಡೆಸುತ್ತಿದ್ದಾರೆ. 1998ರಿಂದಲೂ ಬೀಗರ ಹಣಾಹಣಿ ಕಂಡಿದ್ದ ಈ ಕ್ಷೇತ್ರದಲ್ಲಿ 2019ರ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಎಚ್‌.ಬಿ.ಮಂಜಪ್ಪ ಕಣಕ್ಕಿಳಿಯುವುದರೊಂದಿಗೆ ಆ ಪರಿಪಾಠ ಮುರಿದಿತ್ತು.

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.