AAP; ‘ಗೃಹ ಲಕ್ಷ್ಮಿ’ ಮಾದರಿ ಮಹಿಳೆಯರಿಗೆ ದಿಲ್ಲಿಯಲ್ಲೂ 1,000 ರೂ.
Team Udayavani, Mar 5, 2024, 6:15 AM IST
ಹೊಸದಿಲ್ಲಿ: ಕರ್ನಾಟಕದ “ಗೃಹ ಲಕ್ಷ್ಮಿ’ ಯೋಜನೆಯಂತೆ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದಿಲ್ಲಿ ಸರಕಾರ 18 ವರ್ಷ ಮೇಲ್ಪಟ್ಟ ಎಲ್ಲ ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. ಸಹಾಯ ಧನ ನೀಡುವ ಯೋಜನೆಯನ್ನು ಸೋಮವಾರ ತನ್ನ ಬಜೆಟ್ನಲ್ಲಿ ಘೋಷಿಸಿದೆ.
“ಮುಖ್ಯಮಂತ್ರಿ ಸಮ್ಮಾನ್ ಯೋಜನೆ’ಯಡಿಯಲ್ಲಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಪ್ರತೀ ತಿಂಗಳು ಈ ಹಣ ಪಾವತಿಯಾಗಲಿದೆ ಎಂದು ಬಜೆಟ್ ಮಂಡಿಸಿದ ಆತಿಷಿ ಘೋಷಿಸಿದ್ದಾರೆ. ಈ ಬಗ್ಗೆ ಪ್ರತ್ರಿಕ್ರಿಯೆ ನೀಡಿದ ಕೇಜ್ರಿವಾಲ್ “ನಾವು ಮಹಿಳಾ ಸಶಕ್ತೀಕರಣ ಬಗ್ಗೆ ಮಾತನಾಡುತ್ತೇವೆ. ಆದರೆ ಅವರ ಬಳಿ ಹಣವಿದ್ದರೆ ಮಾತ್ರ ಇದು ಸಾಧ್ಯ. ನಾವು ಅವರಿಗೆ ಹಣ ನೀಡಿದರೆ, ಅವರು ತಾವು ಸಶಕ್ತರಾಗಿದ್ದೇವೆ ಎಂದು ಭಾವಿಸುತ್ತಾರೆ’ ಎಂದು ಹೇಳಿದರು.
ಹೈಕೋರ್ಟ್ ಜಮೀನು ಬಿಡಿ: ಆಪ್ಗೆ ಸುಪ್ರೀಂ
ಇಲ್ಲಿನ ರೋಸ್ ಅವೆನ್ಯೂನಲ್ಲಿ ದಿಲ್ಲಿ ಹೈಕೋರ್ಟ್ಗೆ ಸೇರಿದ ಜಾಗದಲ್ಲಿರುವ ಕಚೇರಿ ಯನ್ನು ಜೂ. 15ರೊಳಗೆ ತೆರವುಗೊಳಿಸು ವಂತೆ ಸುಪ್ರೀಂ ಕೋರ್ಟ್ ಆಪ್ಗೆ ನಿರ್ದೇಶನ ನೀಡಿದೆ.
ಮುಂಬರುವ ದಿನಗಳಲ್ಲಿ ಲೋಕಸಭಾ ಚುನಾವಣೆ ಇರುವುದನ್ನು ಗಮನದಲ್ಲಿಟ್ಟುಕೊಂಡು ಕಚೇರಿ ತೆರವು ಮಾಡುವ ಅವಧಿಯನ್ನು ಹೆಚ್ಚು ಮಾಡಲಾಗಿದೆ. ಮುಂದಿನ 4 ವಾರಗಳಲ್ಲಿ ಸಂಬಂಧಪಟ್ಟ ಇಲಾಖೆ ಅರ್ಜಿ ಸ್ವೀಕಾರ ಸಂಬಂಧಿ ಸಿದಂತೆ ಇತರ ದಾಖಲಾತಿ ಕೆಲಸಗಳನ್ನು ಪೂರ್ಣ ಗೊಳಿಸಬೇಕು ಎಂದು ಸಿಜೆಐ ಡಿ.ವೈ.ಚಂದ್ರಚೂಡ್, ನ್ಯಾ| ಮನೋಜ್ ಮಿಶ್ರಾ ಮತ್ತು ನ್ಯಾ| ಜೆ.ಬಿ. ಪದೀìವಾಲಾ ಅವರಿದ್ದ ಪೀಠ ಹೇಳಿದೆ.
ನೀವೇಕೆ ನ್ಯಾಯಾಂಗ ಪರವಿಲ್ಲ? ಸಿಂಘ್ವಿಗೆ ಸಿಜೆಐ ಪ್ರಶ್ನೆ?
ಪ್ರಕರಣದ ವಿಚಾರಣೆಯ ಸಮಯದಲ್ಲಿ ಆಪ್ ಪರ ವಾದಿಸಿದ ಅಭಿಷೇಕ್ ಮನು ಸಿಂಘ್ವಿ ಅವರನ್ನು ಉದ್ದೇಶಿಸಿ ಸಿಜೆಐ ಚಂದ್ರಚೂಡ್ ನೀವು ವಕೀಲರಾಗಿ ಯಾವಾಗಲೂ ಕೋರ್ಟ್ ಪರವಾಗಿ ನಿಲ್ಲಬೇಕು. ರಾಜಕೀಯ ಪಕ್ಷದ ಪರವಾಗಿ ಅಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.