Farmers: ಕೊಬ್ಬರಿ; ನೋಂದಣಿಗಾಗಿ ರೈತರ ಜಾಗರಣೆ!


Team Udayavani, Mar 5, 2024, 10:24 AM IST

Farmers: ಕೊಬ್ಬರಿ; ನೋಂದಣಿಗಾಗಿ ರೈತರ ಜಾಗರಣೆ!

ತಿಪಟೂರು: ಸರ್ಕಾರ ಮರು ಕೊಬ್ಬರಿ ನೋಂದಣಿ ಯನ್ನು ಸೋಮವಾರದಿಂದ ಪ್ರಾರಂಭಿಸಿದ್ದು ರೈತರು ಹಾಗೂ ಮಹಿಳೆಯರು, ವಯೋವೃದ್ಧರು, ಅಂಗವಿಕಲರು ಎಪಿಎಂಸಿ ಆವರಣದಲ್ಲಿ ಭಾನುವಾರ ಸಂಜೆಯಿಂದಲೇ ಜಮಾಯಿಸಿದ್ದರು.

ಮುಗಿಬಿದ್ದರು: ಆಯಾ ಹೋಬಳಿ ರೈತರಿಗೆ ಅನುಕೂಲವಾಗಲು ತಿಪಟೂರು ಎಪಿಎಂಸಿ ವ್ಯಾಪ್ತಿಯಲ್ಲಿ ಒಟ್ಟು 7ಖರೀದಿ ಕೇಂದ್ರ ತೆರೆಯಲಾಗಿದೆ. ತಿಪಟೂರು ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ 4 ಕೇಂದ್ರ ತೆರೆಯಲಾಗಿದ್ದು, ಒಂದು ಕೇಂದ್ರವನ್ನು ಮಹಿಳೆಯರಿಗಾಗಿ ಮೀಸಲಿರಿಸಲಾಗಿದೆ. ಕರಡಾಳು, ಕೊನೇಹಳ್ಳಿ, ಕೆ.ಬಿ.ಕ್ರಾಸ್‌ ಉಪ ಎಪಿಎಂಸಿ ಮಾರುಕಟ್ಟೆಗಳಲ್ಲಿ ತಲಾ ಒಂದೊಂದು ಕೇಂದ್ರ ತೆರೆಯಲಾಗಿದೆ.

ನೋಂದಣೆ ವಿಷಯ ಮೊದಲೇ ತಮ್ಮ ಗಮನಕ್ಕೆ ಬಂದಿದ್ದರಿಂದ ರೈತರು ಭಾನುವಾರ ಸಂಜೆಯಿಂದಲೇ ಸಂಬಂಧಪಟ್ಟ ಎಪಿಎಂಸಿ ಆವರಣದಲ್ಲಿ ತಮ್ಮ ಪಾದರಕ್ಷೆಗಳನ್ನು ಸರದಿ ಸಾಲಿನಲ್ಲಿ ಬಿಟ್ಟು ಕಾಯುತ್ತಿದ್ದರು. ದೂರದ ಊರುಗಳಿಂದ ಬಂದಿದ್ದವರು ಚಾಪೆ, ಹೊದಿಕೆ ತಂದು ರಾತ್ರಿಪೂರ್ತಿ ಆವರಣದಲ್ಲಿಯೇ ಮಲಗಿದ್ದು, ಸೋಮವಾರ ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಹೆಸರು ನೋಂದಾಯಿಸಲು ಮುಗಿಬಿದ್ದರು.

ರೈತರಿಗೆ ನೆರಳು, ಕುಡಿವ ನೀರು, ನೋಂದಣೆಗೆ ಅವಶ್ಯವಿರುವ ಇಂಟರ್‌ನೆಟ್‌, ನುರಿತ ಕಂಪ್ಯೂಟರ್‌ ಆಪರೇಟರ್‌ ವ್ಯವಸ್ಥೆ ಮಾಡಲಾಗಿದೆ. ಉದ್ದುದ್ದ ಸಾಲುಗಳಲ್ಲಿ ವಯೋವೃದ್ಧರು, ಅಂಗವಿಕಲರು, ಮಹಿಳೆಯರಂತೂ ನಿಂತು ಸುಸ್ತಾಗಿ ಬಿರು ಬಿಸಿಲಿನಲ್ಲಿ ಊಟವಿಲ್ಲದೆ ಯಾತನೆ ಅನುಭವಿಸಿದರು.

ಅವಕಾಶ: ಬೆಂಬಲ ಬೆಲೆಯಡಿ ರೈತರಿಂದ ಉಂಡೆ ಕೊಬ್ಬರಿ ಖರೀದಿಗೆ ಹೆಸರು ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು ರೈತರು ಯಾವ ಕೇಂದ್ರದಲ್ಲಿ ತಮ್ಮ ಹೆಸರು ನೋಂದಾಯಿಸಿರುತ್ತಾರೋ ಅದೇ ಕೇಂದ್ರಕ್ಕೆ ಎಫ್ಎಕ್ಯೂ ಗುಣಮಟ್ಟದ ಕೊಬ್ಬರಿ ಜತೆಗೆ ತಮ್ಮ ಆಧಾರ್‌ ಕಾರ್ಡ್‌ ಪ್ರತಿ, ಫ್ರೂಟ್‌ ಐಡಿಯೊಂದಿಗೆ ಕೊಬ್ಬರಿ ಖರೀದಿಸುವ ದಿನಾಂಕ ತಿಳಿಸಿದಾಗ ತಂದು ಮಾರಾಟ ಮಾಡಬೇಕು. ಪ್ರತಿ ಎಕರೆಗೆ 6 ಕ್ವಿಂಟಲ್‌, ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್‌ ಕೊಬ್ಬರಿ ಖರೀದಿಗೆ ಅವಕಾಶ ನೀಡಲಾಗಿದೆ ಎಂದು ಎಪಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.

ಮುನ್ನೆಚ್ಚರಿಗೆ ಕ್ರಮವಾಗಿ ಬಿಗಿ ಪೊಲೀಸ್‌ ಭದ್ರತೆ : ಕೊಬ್ಬರಿ ಬೆಲೆ ಕಳೆದ 2-3 ವರ್ಷಗಳಿಂದ ನಿರಂತರವಾಗಿ ಇಳಿಕೆಯಾಗುತ್ತಿದ್ದು ಈಗ ನಫೆಡ್‌ ಮೂಲಕವಾದರೂ ಕ್ವಿಂಟಲ್‌ ಕೊಬ್ಬರಿಗೆ 13,500 ರೂ.ಗಳಾದರೂ ಸಿಗಲಿದೆ ಎಂಬ ಆಸೆಯಿಂದ ರೈತರು ನೋಂದಣೆಗೆ ಮುಗಿ ಬೀಳುತ್ತಿದ್ದು ಸರದಿ ಸಾಲಿನಲ್ಲಿ ಗಲಾಟೆ, ಘರ್ಷಣೆಗಳಾಗದಂತೆ ಪೊಲೀಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದಿನ 45 ದಿನಗಳವರೆಗೆ ಕೊಬ್ಬರಿ ನೋಂದಣಿ ಪ್ರಕ್ರಿಯೆ ಹಾಗೂ ಖರೀದಿಗೆ ಅವಕಾಶವಿದ್ದು ಈ ರೀತಿ ಬಂದು ಕಾಯಬೇಡಿ ಎಂದು ಅಧಿಕಾರಿಗಳು ತಿಳಿಸಿದರೂ ರೈತರು ಜಾಗ ಬಿಟ್ಟು ಹೋಗುತ್ತಿಲ್ಲ. ಕಳೆದ ಬಾರಿಯಂತೆ ಎಲ್ಲಿ ನೋಂದಣಿ ಬೇಗ ಮುಗಿಯುತ್ತದೆಯೋ ಎಂಬ ಆತಂಕದಿಂದ ರೈತರು ನೋಂದಣಿ ಮಾಡಿಸಿಕೊಂಡೇ ಹೋಗೋಣ ಎಂದು ಕಾದು ಕುಳಿತಿದ್ದಾರೆ.

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.