ಗದಗ: ಇಳುವರಿ ಕುಂಠಿತ- ಬಹುಪಯೋಗಿ ನಿಂಬೆ ಬಲು ದುಬಾರಿ


Team Udayavani, Mar 5, 2024, 2:52 PM IST

ಗದಗ: ಇಳುವರಿ ಕುಂಠಿತ- ಬಹುಪಯೋಗಿ ನಿಂಬೆ ಬಲು ದುಬಾರಿ

ಉದಯವಾಣಿ ಸಮಾಚಾರ
ಗದಗ: ಬೇಸಿಗೆ ಸಮೀಪಿಸುತ್ತಿರುವ ಬೆನ್ನಲ್ಲೇ ನಿಂಬೆಹಣ್ಣಿನ ದರದಲ್ಲೂ ದಿಢೀರ್‌ ಏರಿಕೆ ಕಂಡಿದೆ. ನಿಂಬೆಹಣ್ಣಿನ ಇಳುವರಿ ಕುಂಠಿತ ಹಾಗೂ ಆಮದು ಪ್ರಮಾಣದಲ್ಲಿ ಇಳಿಕೆಯಾಗಿದ್ದರ ಪರಿಣಾಮ ನಿಂಬೆಹಣ್ಣಿನ ದರದಲ್ಲಿ ವ್ಯತ್ಯಾಸ ಕಂಡು ಬಂದಿದೆ.

ಕಳೆದ ಕೆಲ ದಿನಗಳ ಹಿಂದೆ ಗದಗನಕ್ಕೇರಿದ್ದ ಬೆಳ್ಳುಳ್ಳಿ ಬೆಲೆ ನಂತರ ಸುಧಾರಣೆ ಕಂಡಿತ್ತು. ಆದರೆ ನಿಂಬೆಹಣ್ಣಿನ ದರದಲ್ಲಿ ಎರಡು ಪಟ್ಟು ಹೆಚ್ಚಾಗಿದ್ದು, ಬೇಸಿಗೆ ಮುಗಿಯುವವರೆಗೆ ದರದಲ್ಲಿ ಇನ್ನೂ ಏರಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಮೊದಲೆಲ್ಲ 100 ನಿಂಬೆಹಣ್ಣಿಗೆ 250ರಿಂದ 300 ರೂ., ಪ್ರತಿ ನಿಂಬೆಹಣ್ಣಿಗೆ 3ರಿಂದ 5ರೂ.ಗೆ ಸಿಗುತ್ತಿದ್ದ ನಿಂಬೆಹಣ್ಣು ಸದ್ಯ ಮಾರುಕಟ್ಟೆಯಲ್ಲಿ ಸಗಟು ದರವು 100 ನಿಂಬೆಹಣ್ಣಿಗೆ 600 ರಿಂದ 650 ರೂ., ಚಿಲ್ಲರೆ ದರದಲ್ಲಿ ಪ್ರತಿ ನಿಂಬೆಹಣ್ಣಿಗೆ 7 ರಿಂದ 10 ರೂ. ನಿಗದಿಯಾಗಿದೆ. ಅಂದರೆ ದರದಲ್ಲಿ ಎರಡು ಪಟ್ಟು ಏರಿಕೆಯಾದಂತಾಗಿದೆ. ಅವಧಿ ಗೂ ಮುನ್ನವೇ ತಾಪಮಾನ ಏರಿಕೆಯಾಗಿದೆ.

ಎಲ್ಲೆಡೆ ವಿಪರೀತ ಬಿಸಿಲು, ಬಿಸಿ ಹವೆಯಿಂದ ಸಾರ್ವಜನಿಕರು ತಲ್ಲಣಗೊಂಡಿದ್ದಾರೆ. ಇದರ ಬೆನ್ನಲ್ಲೇ ನಿಂಬೆಹಣ್ಣಿನ ದರ ಹೆಚ್ಚಳವಾದಂತಾಗಿದೆ. ಬಿಸಿಲಿನ ಝಳದಿಂದ ದಾಹ ತೀರಿಸಲು ಜನರು ನಿಂಬೆ ಪಾನಕ ಕುಡಿಯುವುದು ಸಾಮಾನ್ಯ. ಆದರೆ ಈ ಬಾರಿ ಇಳುವರಿ ಹಾಗೂ ಪೂರೈಕೆ ಕೊರತೆಯಿಂದ ನಿಂಬೆಹಣ್ಣಿನ ಬೆಲೆ ಏರಿಕೆಯಾಗಿದೆ.

ಗದಗ ಜಿಲ್ಲೆಗೆ ವಿಜಯಪುರ ಸೇರಿದಂತೆ ಆಂಧ್ರ, ತೆಲಂಗಾಣ ರಾಜ್ಯಗಳಿಂದ ಮಾರುಕಟ್ಟೆಗೆ ನಿಂಬೆ ಬರುತ್ತಿದೆಯಾದರೂ ಬೇಡಿಕೆಗೆ ಅನುಗುಣವಾಗಿ ನಿಂಬೆಹಣ್ಣು ಪೂರೈಕೆಯಾಗುತ್ತಿಲ್ಲವಾಗಿದೆ.

ಅಸಲು ಬಂದರೆ ಸಾಕು: ನಿಂಬೆಹಣ್ಣಿಗೆ ವರ್ಷ ಪೂರ್ತಿ ಬೇಡಿಕೆ ಇರುತ್ತದೆ. ಹಾಗಂತ ವರ್ಷ ಪೂರ್ತಿ ಬೆಲೆ ಹೆಚ್ಚಿರಲ್ಲ. ಬೇಸಿಗೆ ಬಂದಾಗಲಷ್ಟೇ ನಮಗೂ ಸ್ವಲ್ಪ ವ್ಯಾಪಾರ. ಮಾರುಕಟ್ಟೆಯಿಂದ ತರುವಾಗ ನಮಗೆ ಆರಿಸಿಕೊಳ್ಳಲು ಅವಕಾಶವಿಲ್ಲ.ಆದರೆ ಕೊಳ್ಳುವವರು ಹಣ್ಣು ಸಣ್ಣದಿದ್ದರೆ ನಾಲ್ಕು ಕೊಳ್ಳುವ ಕಡೆಗೆ 7-8 ಕೊಡುವಂತೆ ಕೇಳುತ್ತಾರೆ. ಇಲ್ಲವೆ ದೊಡ್ಡದ್ದನ್ನೇ ಹುಡುಕುತ್ತಾರೆ. ಇನ್ನು ಬೇಸಿಗೆಯಲ್ಲಿ ಹೆಚ್ಚು ದಿನ ಹಣ್ಣನ್ನು ಇಡಲು ಆಗದು. ಹೀಗಾಗಿ ಒಮ್ಮೊಮ್ಮೆ ಅಸಲು ಬಂದರೆ ಸಾಕು ಎನ್ನುವಂತಾಗುತ್ತದೆ ಎನ್ನುತ್ತಾರೆ ಚಿಲ್ಲರೆ ವ್ಯಾಪಾರಿ ಲಕ್ಷ್ಮವ್ವ ಭಜಂತ್ರಿ. ಪ್ರತಿ ಬೇಸಿಗೆಯಲ್ಲಿ ನಿಂಬೆ ಹಣ್ಣಿನ ಬೇಡಿಕೆ ಮತ್ತು ಬೆಲೆ ಹೆಚ್ಚಾಗುವುದು ಸಹಜ. ಆದರೆ ಕಳೆದ ರಾಜ್ಯಾದ್ಯಂತ ಬರ ಆವರಿಸಿದ್ದರ ಪರಿಣಾಮ ಈ ಬಾರಿ ಇಳುವರಿಯೂ ಕಡಿಮೆಯಾಗಿದೆ. ಇದರಿಂದಾಗಿ ನಿಂಬೆ ಜ್ಯೂಸ್‌ಗೆ 15-15ರೂ., ನಿಂಬು ಸೋಡಾ 20-25 ರೂ. ಆಗಿದೆ. 10 ರೂ. ಇದ್ದ ಬೀದಿ ಬದಿ ಮಾರುವ ಗೋಲಿ ಸೋಡಾ ಈಗ 25 ರೂ. ಗೆ ಏರಿದೆ.

ಧಾರ್ಮಿಕ ಕಾರ್ಯಗಳಿಗೆ ಬಳಕೆ:
ನಿಂಬೆಹಣ್ಣನ್ನು ವಿವಿಧ ಧಾರ್ಮಿಕ ಕಾರ್ಯಗಳಿಗೆ ಬಳಕೆ ಮಾಡಲಾಗುತ್ತದೆ. ಅಮಾವಾಸ್ಯೆ, ಹುಣ್ಣಿಮೆ, ಶುಕ್ರವಾರ, ಮಂಗಳವಾರ ಹಾಗೂ ಭಾನುವಾರ ಹೀಗೆ ವಿವಿಧ ಸಮಯಗಳಲ್ಲಿ ಪೂಜೆಗೆಂದು ನಿಂಬೆ ಹಣ್ಣನ್ನು ಬಳಸಲಾಗುತ್ತದೆ. ಹೀಗಾಗಿ ದೇವಸ್ಥಾನಗಳ ಸುತ್ತಮುತ್ತಲಿನ ಕೆಲ ವ್ಯಾಪಾರಿಗಳು ಈ ದಿನಗಳಂದು ನಿಂಬೆಹಣ್ಣಿನ ಬೆಲೆಯನ್ನು ಮತ್ತಷ್ಟು ಹೆಚ್ಚಿಸುತ್ತಾರೆ.

ನಿಂಬೆ ದರ
ಸಗಟು ದರ: 100 ಹಣ್ಣಿಗೆ 600 ರಿಂದ 650 ರೂ.
ಚಿಲ್ಲರೆ ದರ: ಪ್ರತಿ ಹಣ್ಣಿಗೆ 7 ರಿಂದ 10 ರೂ.

ಬಾಯಾರಿಕೆಯಾದಾಗ ನಿಂಬೆ ಪಾನೀಯ ಕುಡಿದರೆ ಬಾಯಾರಿಕೆ ಕಡಿಮೆಯಾಗುವುದು. ದೇಹಕ್ಕೂ ಚೈತನ್ಯ ತುಂಬುತ್ತದೆ. ದೇಹ ತಂಪಾಗಿಡುತ್ತದೆ. ಸಾಮಾನ್ಯವಾಗಿ ಬೇಸಿಗೆ ದಿನಗಳಲ್ಲಿ ದೇಹ ನಿರ್ಜಲೀಕರಣದಿಂದ ತಪ್ಪಿಸಲು ನಿಂಬೆ ಹಣ್ಣನ್ನು ಬಹಳವಾಗಿ ಬಳಸುತ್ತೇವೆ. ಇದು ದೇಹವನ್ನು ತಂಪಾಗಿ ಇಡುವಲ್ಲಿಯೂ ಸಹಕಾರಿ. ದೇಹಕ್ಕೂ ಚೈತನ್ಯ ನೀಡುತ್ತದೆ.
ಡಾ|ಮಹೇಶ ಹಿರೇಮಠ, ವೈದ್ಯ

ಪ್ರಸಕ್ತ ಬೇಸಿಗೆಯಲ್ಲಿ ನಿಂಬೆಹಣ್ಣಿನ ಇಳುವರಿ ಹಾಗೂ ಪೂರೈಕೆ ಕುಂಠಿತಗೊಂಡಿದ್ದರಿಂದ ನಿಂಬೆಹಣ್ಣಿನ ದರದಲ್ಲಿ ಏರಿಕೆ ಕಂಡು ಬಂದಿದ್ದು, ಮಳೆಗಾಲ ಆರಂಭವಾಗುವವರೆಗೂ ನಿಂಬೆಹಣ್ಣಿನ ದರದಲ್ಲಿ ಇಳಿಕೆಯಾಗುವುದು ಕಷ್ಟ.
ನಿಂಗಪ್ಪ ಬಟ್ಟೂರ, ನಿಂಬೆಹಣ್ಣಿನ ವ್ಯಾಪಾರಿ.

*ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

Gadag; ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

Gadag; ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Gadag; ಹಬ್ಬದ ಖರೀದಿಗೆಂದು ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Mundargi: Bike rider went to Kochi without overbridge; Protest by villagers

Mundargi: ನೀರಿನಲ್ಲಿ ಕೊಚ್ಚಿ ಹೋದ ಬೈಕ್; ಓರ್ವ ಸಾವು

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.