Rameshwaram Cafe ಬಾಂಬ್ ಸ್ಫೋಟ: ಶಂಕಿತ ವ್ಯಕ್ತಿ ಬಳಸಿರುವುದು ನಕಲಿ ಮೊಬೈಲ್!
ಪೊಲೀಸರ ಹಾದಿ ತಪ್ಪಿಸಲು ನಿರಂತರ ಯತ್ನ ; ತಾಂತ್ರಿಕ ತನಿಖೆಯಲ್ಲಿ ಪತ್ತೆ
Team Udayavani, Mar 5, 2024, 10:26 PM IST
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಐಇಡಿ ಸ್ಫೋಟ ಪ್ರಕರಣದ ಶಂಕಿತ ವ್ಯಕ್ತಿ ಹೊಟೇಲ್ನಲ್ಲಿದ್ದ ವೇಳೆ ನಕಲಿ ಮೊಬೈಲ್ ಬಳಸಿರುವುದು ತನಿಖಾ ಸಂಸ್ಥೆಗಳ ತಾಂತ್ರಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಮಾ. 1ರಂದು 11.40ರ ಸುಮಾರಿಗೆ ಹೊಟೇಲ್ಗೆ ಬಂದ ಶಂಕಿತ ಕೇವಲ 10 ನಿಮಿಷದಲ್ಲೇ ತಿಂಡಿ ತಿಂದು ಐಇಡಿ ಇರುವ ಬ್ಯಾಗ್ ಅನ್ನು ಕೈತೊಳೆಯುವ ಸ್ಥಳದಲ್ಲಿಟ್ಟು ತೆರಳಿದ್ದಾನೆ. ಈ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ತಲೆಗೆ ಕ್ಯಾಪ್, ಕನ್ನಡಕ ಮತ್ತು ಮಾಸ್ಕ್ ಧರಿಸಿದ್ದು ನಾಲ್ಕೈದು ಬಾರಿ ಮೊಬೈಲ್ ತೆಗೆದು ಮಾತಾಡಿದಂತೆ ನಟಿಸಿರುವುದು ಪತ್ತೆಯಾಗಿದೆ. ಹೀಗಾಗಿ ಆರೋಪಿಯ ಮೊಬೈಲ್ ಜಾಡು ಪತ್ತೆಗಾಗಿ ಹೊಟೇಲ್ ಆವರಣ ಹಾಗೂ ಅಕ್ಕ-ಪಕ್ಕದ ಎಲ್ಲ ಮೊಬೈಲ್ ನೆಟ್ವರ್ಕ್ನ ಟವರ್ ಡಂಪ್ ಡೇಟಾ ಸಂಗ್ರಹಿಸಿ ಪರಿಶೀಲಿಸಿ
ದಾಗ ಶಂಕಿತ ನಕಲಿ ಮೊಬೈಲ್ ಬಳಸಿರುವುದು ಪತ್ತೆ ಯಾಗಿದೆ.
ಮತ್ತೂಂದೆಡೆ ಆರೋಪಿ ಹೊಟೇಲ್ನಲ್ಲಿದ್ದ ಸಂದರ್ಭದಲ್ಲಿ ಮೊಬೈಲ್ ಬಳಕೆ ಮಾಡಿರುವ ಸಿಸಿ ಕೆಮರಾ ದೃಶ್ಯಗಳನ್ನು ಗಮನಿಸಿದಾಗ ಆತ ಬಳಸಿದ ಮೊಬೈಲ್ನ ಹಿಂಭಾಗದಲ್ಲಿ ಲೈಟ್ ಆನ್ ಆಗಿತ್ತು. ಆದರೆ ಮತ್ತೂಂದು ಭಾಗದ ಸಿಸಿ ಕೆಮರಾ ದೃಶ್ಯದಲ್ಲಿ ಆತನ ಮೊಬೈಲ್ ಪರದೆ ಪ್ಲಾಸ್ಟಿಕ್ ಪದರದಿಂದ ಇರುವಂತೆ ಕಂಡು ಬಂದಿದೆ. ಹೀಗಾಗಿ ಪೊಲೀಸರ ದಿಕ್ಕು ತಪ್ಪಿಸುವ ಉದ್ದೇಶದಿಂದಲೇ ಮೊಬೈಲ್ ತೆಗೆದು ಮಾತನಾಡುವಂತೆ ನಾಟಕವಾಡಿದ್ದಾನೆ.
ಹೊಟೇಲ್ ಆವರಣದಲ್ಲಿ ಮಾತ್ರವಲ್ಲದೆ, ಆತ ರಸ್ತೆಯಲ್ಲಿ ನಡೆದು ಹೋಗುವಾಗಲೂ ನಕಲಿ ಮೊಬೈಲ್ ಬಳಕೆ ಮಾಡಿದ್ದಾನೆ ಎಂಬುದು ಗೊತ್ತಾಗಿದೆ. ಆದರೆ, ಆತನ ಪ್ಯಾಂಟ್ ಜೇಬಿನಲ್ಲಿ ಮೊಬೈಲ್ ಮಾದರಿಯ ವಸ್ತು ಕಂಡು ಬಂದಿದ್ದು. ಅದನ್ನು ಆತ ಸ್ವಿಚ್x ಆಫ್ ಮಾಡಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಬಸ್ ನಿಲ್ದಾಣದಲ್ಲೇ ಟೈಮ್ ಫಿಕ್ಸ್
ಹೊಟೇಲ್ಗಿಂತ ಹಿಂದೆ 2 ಕಿ.ಮೀ. ದೂರದಲ್ಲೇ ಬಸ್ ಹತ್ತಿರುವ ಶಂಕಿತ ಕುಂದಲಹಳ್ಳಿ ಬಸ್ ನಿಲ್ದಾಣದಲ್ಲಿ ಇಳಿದು, ನಿಲ್ದಾಣದಲ್ಲೇ ಬ್ಯಾಗ್ನಲ್ಲಿದ್ದ ಐಇಡಿಗೆ ಟೈಮ್ ಫಿಕ್ಸ್ ಮಾಡಿರುವ ಸಾಧ್ಯತೆಯಿದೆ. ಏಕೆಂದರೆ, ಬಸ್ ನಿಲ್ದಾಣದಲ್ಲಿ ಬ್ಯಾಗ್ ಪರಿಶೀಲಿಸುವ ದೃಶ್ಯ ಸ್ಥಳೀಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಅಲ್ಲಿಂದ ನೇರವಾಗಿ ಹೊಟೇಲ್ಗೆ ಬಂದು ಇಡ್ಲಿ ತಿಂದು, ತೈತೊಳೆಯುವ ಜಾಗದಲ್ಲೇ ಬ್ಯಾಗ್ ಇಟ್ಟು ಪರಾರಿಯಾಗಿದ್ದಾನೆ. ಆಬಳಿಕ ಮಧ್ಯಾಹ್ನ 12.56ಕ್ಕೆ ಬಾಂಬ್ ಸ್ಫೋಟಗೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.