ಜೋಯಿಡಾ: ಸೇತುವೆ ಕಾರ್ಯ ಪೂರ್ಣಗೊಂಡರೂ ಇಲ್ಲ ಬಸ್‌!


Team Udayavani, Mar 6, 2024, 6:06 PM IST

ಜೋಯಿಡಾ: ಸೇತುವೆ ಕಾರ್ಯ ಪೂರ್ಣಗೊಂಡರೂ ಇಲ್ಲ ಬಸ್‌!

ಉದಯವಾಣಿ ಸಮಾಚಾರ
ಜೋಯಿಡಾ: ತಾಲೂಕಿನ ಅವರ್ಲಿ ಸೇತುವೆ ಹಾಳಾದ ಕಾರಣ ನಂದಿಗದ್ದಾ ಗ್ರಾ.ಪಂ.ವ್ಯಾಪ್ತಿಯ ಗ್ರಾಮಗಳಿಗೆ ಕಳೆದ 6 ತಿಂಗಳುಗಳಿಂದ ಬಸ್‌ ವ್ಯವಸ್ಥೆ ಇಲ್ಲದೆ ಇಲ್ಲಿನ ಸಾರ್ವಜನಿಕರು ಪರದಾಡಿದ್ದರು ಈಗ ಸೇತುವೆ ಕಾಮಗಾರಿ ಮುಗಿದಿದ್ದರೂ ಬಸ್‌
ಓಡಾಟ ಆರಂಭಗೊಳ್ಳದೆ ಸಂಚಾರದ ಸಮಸ್ಯೆ ಮುಂದುವರಿದಿದೆ.

ಅವರ್ಲಿ ಸೇತುವೆ ಕಾಮಗಾರಿ ಮುಗಿದಿದ್ದು ನೂತನ ಸೇತುವೆ ಮೆಲೆ ಎಲ್ಲಾ ಖಾಸಗಿ ವಾಹನಗಳು ಸಂಚರಿಸುತ್ತಿವೆ. ಅಲ್ಲದೇ ಒಂದು
ವಾರದಿಂದ ಉಳವಿ-ಬೈಲಹೊಂಗಲ ಬಸ್‌ ಕೂಡಾ ಸಂಚರಿಸುತ್ತಿದೆ. ಆದರೆ ದಾಂಡೇಲಿ ಡಿಪೋದ ಗುಂದ-ತಮ್ಮಣ್ಣಗಿ ಬಸ್‌ ಹಾಗೂ ಉಳವಿ-ಗುಂದ-ಶಿರಸಿ ಬಸ್‌ ಯಾಕೆ ಸಂಚಾರ ಆರಂಭಿಸಿಲ್ಲ ಎಂಬುದು ಜನರ ಪ್ರಶ್ನೆಯಾಗಿದೆ.

ಎಲ್ಲಾ ವಾಹನಗಳ ಸಂಚಾರಕ್ಕೆ ಸೇತುವೆ ಮುಕ್ತವಾಗಿರುವಾಗ ಈ ಭಾಗದ ಬಸ್‌ಗಳ ಸಂಚಾರ ಮಾತ್ರ ಸ್ಥಗಿತವಾಗಿರುವುದು ಯಾಕೆ
ಎಂಬುದು ಯಕ್ಷ ಪ್ರಶ್ನೆಯಾಗಿದೆ. ಈ ಭಾಗದ ಜನ ಸಾರಿಗೆ ಬಸ್‌ ಇಲ್ಲದೆ ಈಗಾಗಲೇ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈಗ ಸೇತುವೆ ಪೂರ್ಣಗೊಂಡ ನಂತರವೂ ಸಮಸ್ಯೆ ಮಾತ್ರ ಹಾಗೇ ಮುಂದುವರಿದಿದೆ. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನಹರಿಸಬೇಕಿದೆ.

ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಉಳವಿ ಜಾತ್ರೆಗೆ ನೂತನವಾಗಿ ನಿರ್ಮಿಸಿದ ಸೇತುವೆ ಮೇಲೆಯೇ ನೂರಾರು ಟ್ರಾಕ್ಟರ್‌ ಹಾಗೂ ಖಾಸಗಿ ವಾಹನಗಳು ಓಡಾಡಿದೆ. ಆದರೆ ಗುಂದ ಗ್ರಾಮದ ಬಸ್‌ ಸಂಚಾರಕ್ಕೆ ಮಾತ್ರ ಯಾಕೆ ಮೀನಮೇಷ ಎಂಬುದು ಜನರ ಪ್ರಶ್ನೆ. ಸರ್ಕಾರದ ಉಚಿತ ಬಸ್‌ ಯೋಜನೆ ಈ ಭಾಗದ ಮಹಿಳೆಯರಿಗೆ ಮರೀಚಿಕೆಯಾಗಿದೆ. ಅಲ್ಲದೆ ಬಡವರು ಆಸ್ಪತ್ರೆ,
ಕಚೇರಿ ಕೆಲಸಗಳಿಗೆ ತೆರಳಲು, ಸಂತೆ ಸೇರಿದಂತೆ ಇನ್ನೂ ಹಲವು ಕೆಲಸಗಳಿಗೆ ಗ್ರಾಮದಿಂದ ಬೇರೆಡೆ ತೆರಳಲು ಬಸ್‌ ಸಂಚಾರ ಇಲ್ಲದೇ ತೊಂದರೆ ಉಂಟಾಗಿದೆ. ಸರಿಯಾದ ಸಮಯಕ್ಕೆ ಬಸ್‌ ಇಲ್ಲದ ಕಾರಣ ಶಾಲಾ ಮಕ್ಕಳು ನಿತ್ಯ ಪರದಾಡುತ್ತಿದ್ದಾರೆ.

ಸೇತುವೆ ಕೆಲಸ ಮುಗಿದು ಎಲ್ಲ ವಾಹನ ಸಂಚಾರ ಆರಂಭಗೊಂಡಿದ್ದರೂ ಸ್ಥಳೀಯ ಬಸ್‌ ಮಾತ್ರ ಸಂಚಾರ ಆರಂಭಿಸದಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಅಧಿಕೃತವಾಗಿ ಪತ್ರ ಕೊಟ್ಟಲಿ ಆ ಕ್ಷಣವೇ ಗುಂದಕ್ಕೆ ಬಸ್‌ ಬಿಡಲಾಗುವುದು ಎಂದು ದಾಂಡೇಲಿ ಡಿಪೋ ಮ್ಯಾನೇಜರ್‌ ಹೇಳುತ್ತಾರೆ. ತಕ್ಷಣ ಬಸ್‌ ಸಂಚಾರ ಆರಂಭಿಸಲು ಅಧಿಕಾರಿಗಳು , ಜನಪ್ರತಿನಿಧಿಗಳು ಕ್ರಮ ಕೈಗೊಳ್ಳಬೇಕು ಎಂದು ಜನ ಒತ್ತಾಯಿಸಿದ್ದಾರೆ.

ಸೇತುವೆ ಕೆಲಸ ಮುಗಿದಿದೆ. ಮಣ್ಣಿನ ರಸ್ತೆಗೆ ಕಾಂಕ್ರೀಟ್‌ ಹಾಕುವುದು ಬಾಕಿ ಉಳಿದಿದೆ. ಸದ್ಯದ ಮಟ್ಟಿಗೆ ಬಸ್‌ ಬಿಡಲು ಯಾವ ತೊಂದರೆ ಇಲ್ಲ. ಕಾಂಕ್ರೀಟ್‌ ಹಾಕುವಾಗ ಒಂದು ವಾರ ಮತ್ತೆ ಬಂದ್‌ ಮಾಡಲಾಗುವುದು. ಈಗ ಬಸ್‌ ಸಂಚಾರಕ್ಕೆ ಯಾವ ಸಮಸ್ಯೆಯೂ ಇಲ್ಲ ನಮ್ಮ ತಕರಾರು ಇಲ್ಲ.
ಶಿವಪ್ರಕಾಶ್‌ , ಎಇಇ ಲೋಕೋಪಯೋಗಿ ಇಲಾಖೆ ಜೋಯಿಡಾ.

ಬಸ್‌ ಇಲ್ಲದೆ ಈ ಭಾಗದ ಜನರಿಗೆ ಸಮಸ್ಯೆಯಾಗಿದೆ ಎಂಬುದು ಗಮನಕ್ಕೆ ಬಂದಿದೆ. ಗುಂದಕ್ಕೆ ಕೂಡಲೇ ಬಸ್‌ ಬಿಡುವಂತೆ
ದಾಂಡೇಲಿ ಡಿಪೋ ಮ್ಯಾನೇಜರ್‌ ಅವರಿಗೆ ಸೂಚಿಸಲಾಗುವುದು.
ಮಂಜುನಾಥ ಮೊನ್ನೋಳಿ ,
ತಹಶೀಲ್ದಾರರ ಜೋಯಿಡಾ

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

8-sirsi

Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ

3-sirsi

Sirsi ಜಿಲ್ಲೆ ಹೋರಾಟ ಮತ್ತೆ ಮುನ್ನಲೆಗೆ: ಅನಂತಮೂರ್ತಿ ನೇತೃತ್ವ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.