ಅಡಿಕೆ ಸಹಕಾರ ಸಂಸ್ಥೆ ನಿಯೋಗದಿಂದ ಕೇಂದ್ರ ಕಾನೂನು ಸಚಿವರ ಭೇಟಿ

ನ್ಯಾಯಾಲಯದಲ್ಲಿರುವ ಪ್ರಕರಣದಲ್ಲಿ ಬೆಳೆಗಾರರ ಹಿತಾಸಕ್ತಿ ಕಾಯಲು ಮನವಿ

Team Udayavani, Mar 6, 2024, 7:54 PM IST

1-wewqewqe

ಸಾಗರ: ಅಡಕೆಯನ್ನು ನಮ್ಮಲ್ಲಿಯೂ ಕೂಡ ಪಾರಂಪರಿಕವಾಗಿ ಬಳಕೆ ಮಾಡುವುದನ್ನು ನಾನು ನೋಡಿದ್ದೇನೆ. ಅದರ ಕುರಿತು ತಪ್ಪು ಮಾಹಿತಿಗಳು ದಾಖಲಾಗದಂತೆ ನೋಡಿಕೊಳ್ಳುವ ಪ್ರಯತ್ನ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಶತಶತಮಾನಗಳಿಂದ ಕೃಷಿ ನಡೆಸಿರುವ ಅಡಿಕೆ ಬೆಳೆಗಾರರ ಹಿತಾಸಕ್ತಿ ಕಾಪಾಡುತ್ತೇವೆ ಎಂದು ಕೇಂದ್ರ ಕಾನೂನು ಸಚಿವರಾದ ಅರ್ಜುನ್ ಮೇಗವಾಲ್ ಭರವಸೆ ನೀಡಿದ್ದಾರೆ.

ಅಡಿಕೆಯ ಬಳಕೆ ಕ್ಯಾನ್ಸರ್‌ಕಾರಕ ಎನ್ನುವ ಕುರಿತಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ಹಿನ್ನೆಲೆಯಲ್ಲಿ ಅಡಿಕೆ ಬೆಳೆಗಾರರ ಭವಿಷ್ಯಕ್ಕೆ ಆತಂಕ ತಲೆದೋರಿರುವ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಅಡಕೆ ಸಹಕಾರ ಸಂಘಗಳ ಮಹಾಮಂಡಲದ ನೇತೃತ್ವದಲ್ಲಿ ಬುಧವಾರ ಭೇಟಿ ಮಾಡಿದ ನಿಯೋಗಕ್ಕೆ ಧೈರ್ಯ ತುಂಬುವ ಮಾತನಾಡಿದ ಅವರು, ನಮ್ಮಲ್ಲಿ ನೂರಾರು ವರ್ಷಗಳಿಂದ ಬಾಯಾರಿಕೆ ಆದಾಗ ಅಡಕೆ ತುಂಡನ್ನು ಬಾಯಲ್ಲಿ ಹಾಕಿಕೊಳ್ಳುವ ಸಂಪ್ರದಾಯವಿದೆ. ಅಡಕೆಯನ್ನು ಧಾರ್ಮಿಕ ಚೌಕಟ್ಟಿನಲ್ಲಿ ಬಳಸುವುದನ್ನು ಕೂಡ ನೋಡಿದ್ದೇವೆ. ಅದಕ್ಕೆ ಒದಗಿರುವ ಅಪವಾದವನ್ನು ತೊಡೆಯಲು ವೈಜ್ಞಾನಿಕ ಹಾಗೂ ಕಾನೂನಾತ್ಮಕ ಹೆಜ್ಜೆಗಳನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಲಿದೆ ಎಂದರು.

ನಿಯೋಗದ ನೇತೃತ್ವ ವಹಿಸಿದ್ದ ಕ್ರ್ಯಾಮ್ ಅಧ್ಯಕ್ಷ ಎಚ್.ಎಸ್. ಮಂಜಪ್ಪ ಹೊಸಬಾಳೆ ಬೆಳೆಗಾರರ ಬದುಕಿಗೆ ನ್ಯಾಯಾಲಯದಲ್ಲಿರುವ ಪ್ರಕರಣದಿಂದಾಗುವ ಅಪಾಯದ ಕುರಿತು ಸಚಿವರಿಗೆ ಮನವರಿಕೆ ಮಾಡಿ, ಅಡಕೆಯ ಸಂಸ್ಕರಣದ ಸಂದರ್ಭದಲ್ಲಿ, ಕಳಪೆ ಮಾಲುಗಳನ್ನು ಸಾಂಪ್ರದಾಯಿಕ ಪರಿಷ್ಕೃತ ಅಡಕೆಯ ಜೊತೆ ಸೇರಿಸುವ ಸಂದರ್ಭದಲ್ಲಿ ರಾಸಾಯನಿಕಗಳನ್ನು, ಆರೋಗ್ಯಕ್ಕೆ ಹಾನಿಕಾರಕ ಅಂಶಗಳನ್ನು ಬೆರೆಸುತ್ತಿದ್ದರೆ ಅದನ್ನು ತಡೆಯುವ ಕ್ರಮಗಳನ್ನು ಸರ್ಕಾರಗಳು ತೆಗೆದುಕೊಳ್ಳಬೇಕು. ಅಡಕೆ ಮೂಲದಲ್ಲಿ ಹಾಗೂ ಪ್ರಾಚೀನ ಕಾಲದಿಂದ ಬಂದಿರುವ ಪದ್ಧತಿಯಲ್ಲಿ ಪರಿಷ್ಕರಿಸಿದರೆ ಯಾವುದೇ ಅಪಾಯವಿಲ್ಲ ಎಂಬುದನ್ನು ನಮ್ಮ ಹಿರಿಯರು ಕಂಡುಕೊಂಡಿದ್ದರು. ಇದನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿ ಮನದಟ್ಟು ಮಾಡಿಕೊಳ್ಳಲು ಅಡಕೆ ಬೆಳೆಯುತ್ತಿರುವ ಮೂಲನೆಲೆಯಲ್ಲಿನ ಅಡಕೆಯನ್ನು ಆಯ್ದು ಪರೀಕ್ಷೆಗೆ ಒಳಪಡಿಸಬಹುದು ಎಂದರು.

ಆದರೆ ಈಗಾಗಲೇ ಅಡಕೆ ಹಾನಿಕರವಲ್ಲ ಎಂಬುದನ್ನು ವೈಜ್ಞಾನಿಕ ಸಂಶೋಧನೆಗಳು ರುಜುವಾತುಪಡಿಸಿರುವುದು ನಮ್ಮ ಮುಂದಿದೆ. ಅದರ ಆಧಾರದಲ್ಲಿ ಕೇಂದ್ರ ಸರ್ಕಾರ ನ್ಯಾಯಾಲಯದ ಮುಂದೆ ಸತ್ಯವಾದ, ಅಡಕೆ ಬೆಳೆಗಾರರಿಗೆ ಪೂರಕವಾದ ಅಫಿಡವಿಟ್‌ನ್ನು ಸಲ್ಲಿಸಬೇಕು ಎಂದು ಅವರು ಒತ್ತಾಯಿಸಿದರು.

ನಿಯೋಗದಲ್ಲಿ ಅಡಕೆ ಸಹಕಾರ ಸಂಘಗಳ ಮಹಾಮಂಡಲದ ಅಧ್ಯಕ್ಷ ವೈ.ಎಸ್.ಸುಬ್ರಹ್ಮಣ್ಯ ಯಡಗೆರೆ, ಸಾಗರದ ಆಪ್ಸ್‌ಕೋಸ್ ಸಂಸ್ಥೆ ಅಧ್ಯಕ್ಷ ಬಿ.ಎ. ಇಂದೂಧರಗೌಡ, ಮ್ಯಾಮ್‌ಕೋಸ್‌ನ ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ್ ಬರುವೆ, ರಾಜೇಶ್ ಕುಮಾರ್ ಖೇರ್, ಶಿರಸಿ ಟಿಎಸ್‌ಎಸ್‌ನ ಪ್ರಧಾನ ವ್ಯವಸ್ಥಾಪಕ ವಿಜಯಾನಂದ ಭಟ್ ಇದ್ದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.