ಗೇರು ಉತ್ಪಾದನೆಯಲ್ಲಿ ಭಾರತಕ್ಕೆ ವಿಶ್ವದಲ್ಲಿ ಎರಡನೇ ಸ್ಥಾನ


Team Udayavani, Mar 7, 2024, 11:31 AM IST

ಗೇರು ಉತ್ಪಾದನೆಯಲ್ಲಿ ಭಾರತಕ್ಕೆ ವಿಶ್ವದಲ್ಲಿ ಎರಡನೇ ಸ್ಥಾನ

ಉಳ್ಳಾಲ: ಭಾರತದಲ್ಲಿ ಏಳು ಬಿಲಿಯನ್‌ ಗೇರು ಕೃಷಿಯ ಉತ್ಪನ್ನವನ್ನು ಹೊಂದಿದ್ದು, 2 ಮಿಲಿಯನ್‌ ಜನರು ಗೇರು ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಗೇರು ಉತ್ಪಾದನೆಯಲ್ಲಿ ವಿಶ್ವದ ಎರಡನೇ ಸ್ಥಾನದೊಂದಿಗೆ ಭಾರತ ಗೇರು ಉತ್ಪನ್ನ ಗರಿಷ್ಠ ಮಾರುಕಟ್ಟೆ ಹೊಂದಿದೆ. ಮುಂದಿನ ದಿನಗಳಲ್ಲಿ ಗೇರು ಪ್ರಾಮುಖ್ಯ ಬೆಳೆಯಾಗಲಿದೆ ಎಂದು ಶಿವಮೊಗ್ಗ ತೋಟಗಾರಿಕೆ ವಿ.ವಿ. ಸಂಶೋಧನ ನಿರ್ದೇಶಕ ಡಾ| ಬಿ. ಎಂ. ದುಷ್ಯಂತ್‌ ಕುಮಾರ್‌ ಹೇಳಿದರು.

ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಕಾಪಿಕಾಡ್‌-ಉಳ್ಳಾಲ ಇಲ್ಲಿ ಗೇರು ಮೇಳ ಮತ್ತು ವಿಚಾರ ಸಂಕಿರಣ-2024 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಟೀ, ಅಡಿಕೆ ಬಿಟ್ಟರೆ ಗೇರು ಅತ್ಯಂತ ಉತ್ತಮ ಫಲ ನೀಡುವ ಬೆಳೆ. ಜಗತ್ತಿನಲ್ಲಿ ಇರುವ ಗೇರು ಉತ್ಪಾದನೆಯ 33 ದೇಶಗಳಲ್ಲಿ ಬ್ರೆಜಿಲ್‌ ಪ್ರಥಮವಾಗಿದೆ. ಗೇರು ಎಲ್ಲ ಮಣ್ಣಿನಲ್ಲಿ ಬೆಳೆಯುತ್ತದೆ. ಉಳ್ಳಾಲ ಗೇರು ಅಭಿವೃದ್ಧಿ ಕೇಂದ್ರ ಹೊಸ ಗೇರು ತಳಿಗಳ ಅಭಿವೃದ್ಧಿ ಯೋಜನೆ ರೂಪಿಸಿದೆ.

ಕ್ಯಾಶ್ಯು ತಿರುಳು ಉನ್ನತ ವಿಟಮಿನ್‌ ಅಂಶಗಳನ್ನು, ರೋಗ ನಿರೋಧಕ ಗುಣ ಹೊಂದಿದೆ ಎಂದು ವಿವರಿಸಿದರು. ರೈತ ಸಂಘ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ವಿಜ್ಞಾನಿಗಳ ಪಾತ್ರ ಮಹತ್ವದ್ದಾಗಿದೆ. ಗೇರು ಬೀಜಕ್ಕೆ ಕಿಲೋ ಒಂದಕ್ಕೆ 60 ರೂ. ಇದೆ. ಅದನ್ನು 250 ರೂ. ನಿಗದಿ ಮಾಡಬೇಕು. ಹರೇಕ ಳ ಮೆಣಸಿಗೆ ಸರಕಾರದಿಂದ ಮೌಲ್ಯವರ್ಧನೆ ಕೆಲಸ ಆಗಲಿ ಎಂದರು.

ವಿಸ್ತರಣ ನಿಗಮ ಅಧ್ಯಕ್ಷ ಡಾ| ಕೆ. ಟಿ. ಗುರುಮೂರ್ತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ದ. ಕ. ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್‌.ಡಿ. ಸಂಪತ್‌ ಸಾಮ್ರಾಜ್ಯ ತಾಂತ್ರಿಕ ಕೈಪಿಡಿ ಬಿಡುಗಡೆ ಮಾಡಿದರು.

ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ಹಿರಿಯ ವಿಜ್ಞಾನಿ ಡಾ| ಧನಂಜಯ ಬಿ., ಬಹ್ಮಾವರ ಕೃಷಿ ವಿ.ವಿ. ಪ್ರಾಂಶುಪಾಲ ಡಾ| ಕೆ.ವಿ. ಸುಧೀರ್‌ ಕಾಮತ್‌, ಕೆವಿಕೆ ಮುಖಸ್ಥ ರಮೇಶ್‌ ಟಿ.ಜೆ., ಮಂಗಳೂರು ಮೀನುಗಾರಿಕೆ ವಿ.ವಿ. ಡೀನ್‌
ಡಾ| ಎಚ್‌. ಎಸ್‌. ಆಂಜನೇಯಪ್ಪ, ರೈತ ಸಂಘ ಗೌರವಾಧ್ಯಕ್ಷ ಧನಕೀರ್ತಿ ಬಲಿಪ, ಉಳ್ಳಾಲ ನಗರಸಭಾ ಸದಸ್ಯೆ ನಮಿತಾ ಗಟ್ಟಿ
ಉಪಸ್ಥಿತರಿದ್ದರು.

ಸಮ್ಮಾನ
ಪ್ರಗತಿಪರ ಕೃಷಿ ಸಾಧಕರಾದ ದಯಾನಂದ ಭಟ್‌, ಪ್ರೇಮಾ ಹೆಗ್ಡೆ ಮಾಲಾಡಿ ಬೀಡು, ನಿರಂಜನ ಸೇಮಿತ ತೆಂಕಬೆಳ್ಳೂರು, ಸಿ. ಕೆ. ನವೀನ್‌ ಚಂದ್ರ ಐವರ್‌ ನಾಡು, ವಿಲ್ಮಾ ಪ್ರಿಯಾ ಅಲ್ಬು ಕರ್ಕ್‌ ಅಮಾrಡಿ ಅವರನ್ನು ಸಮ್ಮಾನಿಸಲಾಯಿತು. ವಿಚಾರ ಸಂಕಿರಣದಲ್ಲಿ ಕೀಟ ಶಾಸ್ತ್ರ ವಿಭಾಗದ ಡಾ| ರೇವಣ್ಣನವರ್‌, ಕೃಷಿ ವಿಭಾಗದ ಅಭಿಯಂತ ವಿ.ಆರ್‌. ವಿನೋದ್‌, ಮಣ್ಣು ವಿಜ್ಞಾನ ಕೃಷಿ ರಸಾಯನ ಶಾಸ್ತ್ರದ ಜಯಪ್ರಕಾಶ್‌, ತೋಟಗಾರಿಕಾ ಸಹಾಯಕ ಪ್ರಾಧ್ಯಾಪಕ  ಡಾ| ಆರ್‌. ಚೈತನ್ಯ, ಬೇಸಾಯ ಶಾಸ್ತ್ರದ
ಡಾ| ಹರೀಶ್‌ ಶೆಣೈ, ಕೀಟಶಾಸ್ತ್ರದ ನಿಶ್ಮಿತಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಉಳ್ಳಾಲ ಸಂಶೋಧನ ಕೇಂದ್ರದ ಮುಖ್ಯಸ್ಥ ಡಾ| ಮಾರುತೇಶ್‌ ಎ. ಎಂ. ಸ್ವಾಗತಿಸಿದರು. ಬ್ರಹ್ಮಾವರ ವಲಯ ಕೃಷಿ ಸಂಶೋಧನ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ| ಲಕ್ಷ್ಮಣ ಪ್ರಸ್ತಾವನೆಗೈದರು. ಸಹಾಯಕ ಪ್ರಾಧ್ಯಾಪಿಕೆ ಡಾ| ಆರತಿ ಯಾದವಾಡ ವಂದಿಸಿದರು. ಪ್ರವೀಣ್‌ ಎಸ್‌. ಕುಂಪಲ ಕಾರ್ಯಕ್ರಮ ನಿರೂಪಿಸಿದರು.

ಮನೆಗೊಂದು ಗೇರು ಗಿಡ
ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸಿ, ಗೇರು ಕೃಷಿಕರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ವ್ಯಾಪಕ ಕೆಲಸ ಆಗಬೇಕಾಗಿದೆ. ಗೇರು ಕೃಷಿಯಲ್ಲಿ ಎಲರೂ ತೊಡಗಿಸುವ ನಿಟ್ಟಿನಲ್ಲಿ ಮನೆಗೊಂದು ಗೇರು ಗಿಡ ಯೋಜನೆಯನ್ನು ರೂಪಿಸಬೇಕಾಗಿದೆ. ಗೇರು ಹಣ್ಣು ಕಿತ್ತಲೆ ಹಣ್ಣಿಗಿಂತ ಹೆಚ್ಚಿನ ಪೋಷಕಾಂಶ ಹೊಂದಿದೆ. ಮಕ್ಕಳ ಆರೋಗ್ಯವರ್ಧನೆಗೆ ತಾಯಂದಿರು ಗೇರು ಹಣ್ಣನ್ನು ತಿನ್ನಲು ನೀಡಬೇಕು ಎಂದರು.

ಟಾಪ್ ನ್ಯೂಸ್

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.