Udupi: ಜಾನುವಾರುಗಳಿಗೆ ತುರ್ತು ಚಿಕಿತ್ಸೆ; 8 ಪಶು ಸಂಜೀವಿನಿ ಆ್ಯಂಬುಲೆನ್ಸ್‌ ಲಭ್ಯ


Team Udayavani, Mar 7, 2024, 1:25 PM IST

Udupi: ಜಾನುವಾರುಗಳಿಗೆ ತುರ್ತು ಚಿಕಿತ್ಸೆ; 8 ಪಶು ಸಂಜೀವಿನಿ ಆ್ಯಂಬುಲೆನ್ಸ್‌ ಲಭ್ಯ

ಉಡುಪಿ: ಎರಡೂವರೆ ವರ್ಷದ ಹಿಂದೆ ಲೋಕಾರ್ಪಣೆಗೊಂಡು, ಕಾರಣಾಂತರಗಳಿಂದ ಸೇವೆಗೆ ಲಭ್ಯವಾಗದ ಪಶು ಸಂಜೀವಿನಿ ಆ್ಯಂಬುಲೆನ್ಸ್‌ ಕಳೆದ ಆಗಸ್ಟ್‌ನಿಂದ ಪ್ರಾಯೋಗಿಕವಾಗಿ ಜಾರಿಗೊಂಡು ಇದೀಗ ಪೂರ್ಣ ಪ್ರಮಾಣದಲ್ಲಿ ಜಾನುವಾರುಗಳ ಉಚಿತ
ಚಿಕಿತ್ಸೆಗೆ ಲಭ್ಯವಾಗುತ್ತಿದೆ. ಈಗಾಗಲೇ ಜಿಲ್ಲೆಯ 1,723 ಜಾನುವಾರುಗಳಿಗೆ ಈ ಮೂಲಕ ತುರ್ತು ಚಿಕಿತ್ಸಾ ಸೇವೆ ಒದಗಿಸಲಾಗಿದೆ.

ಕೇಂದ್ರ ಸರಕಾರದ “ಪಶು ಸಂಜೀವಿನಿ ಯೋಜನೆ’ಯ ಮೊಬೈಲ್‌ ವೆಟರ್ನರಿ ಕ್ಲಿನಿಕ್‌ (ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನ) ಗ್ರಾಮೀಣ ಪ್ರದೇಶದ ಜಾನುವಾರುಗಳಿರುವ ಮನೆ ಹೋಗಿ ಚಿಕಿತ್ಸೆ ನೀಡುತ್ತಿದೆ.

ಪಶು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಡಿ 2022ರ ಜುಲೈನಲ್ಲಿ ಲೋಕಾರ್ಪಣೆಗೊಂಡಿದ್ದ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನಗಳು ಟೆಂಡರ್‌ ಸಹಿತ ಇನ್ನಿತರ ತಾಂತ್ರಿಕ ಸಮಸ್ಯೆಯಿಂದ ಸೇವೆ ಆರಂಭಿ ಸಲು ವಿಳಂಬವಾಗಿತ್ತು.
ಇದೀಗ ಎಲ್ಲ ಸಮಸ್ಯೆಗಳು ಬಗೆಹರಿದು ಜಾನುವಾರುಗಳ ಚಿಕಿತ್ಸೆಗೆ ಲಭ್ಯವಾಗಿದೆ. ಪ್ರತೀ ವಾಹನದಲ್ಲಿ ಒಬ್ಬರು ಪಶು ವೈದ್ಯರು, ಒಬ್ಬರು ಸಹಾಯಕ, ಚಾಲಕ ಸಹಿತ ಒಟ್ಟು ಮೂವರು ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲೆಗೆ 8 ಪಶು ಸಂಜೀವಿನಿ ಆ್ಯಂಬುಲೆನ್ಸ್‌ ದೊರೆತಿದ್ದು, 7 ತಾಲೂಕಿಗೆ ತಲಾ ಒಂದು ಆ್ಯಂಬುಲೆನ್ಸ್‌ ಒದಗಿಸಲಾಗಿದ್ದು, ಒಂದು ಆ್ಯಂಬುಲೆನ್ಸ್‌ ಜಿಲ್ಲಾ ಕೇಂದ್ರಕ್ಕೆ ನೀಡಲಾಗಿದೆ. ಇದರಲ್ಲಿ ಎಲ್ಲ ರೀತಿಯ ಔಷಧ, ಶಸ್ತ್ರಚಿಕಿತ್ಸೆ ಪರಿಕರಗಳು ಲಭ್ಯವಿದೆ. ಡಿಸೆಂಬರ್‌ನಲ್ಲಿ 295, ಜನವರಿಯಲ್ಲಿ 497, ಫೆಬ್ರವರಿಯಲ್ಲಿ 591 ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗಿದೆ.

1962ಕ್ಕೆ ಕರೆ ಮಾಡಿ
ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು ಗ್ರಾಮೀಣ ಪ್ರದೇಶದ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ಅಗತ್ಯವಿದ್ದಾಗ ಅವುಗಳಿಗೆ ತುರ್ತು ಸೇವೆ ನೀಡಲು 1962 ಸಂಖ್ಯೆಯ ಸಹಾಯವಾಣಿ ರೂಪಿಸಿದೆ. ಗ್ರಾಮೀಣ ಭಾಗದಲ್ಲಿ ಜಾನುವಾರುಗಳ ಆರೋಗ್ಯದಲ್ಲಿ ಯಾವುದೇ ರೀತಿಯ ಏರುಪೇರು ಕಂಡು ಬಂದರೆ, ಕರೆ ಮಾಡಿದ ಕೆಲವೇ ಸಮಯದಲ್ಲಿ ವಾಹನಗಳು ಸಾಮಾನ್ಯ
ಆ್ಯಂಬುಲೆನ್ಸ್‌ನಂತೆ ಸ್ಥಳಕ್ಕೆ ಧಾವಿಸಿ, ಸ್ಥಳದಲ್ಲಿಯೇ ಜಾನುವಾರುಗಳಿಗೆ ಚಿಕಿತ್ಸೆ ಒದಗಿಸಲಾಗುವುದು ಎಂದು ಪಶು ಸಂಜೀವಿನಿ ಜಿಲ್ಲಾ ಸಂಯೋಜಕ ಡಾ| ಸರ್ವೋತ್ತಮ ಉಡುಪ ತಿಳಿಸಿದ್ದಾರೆ.

ಪೂರ್ಣಪ್ರಮಾಣದಲ್ಲಿ ಸೇವೆ
ಜಿಲ್ಲೆಯ 7 ತಾಲೂಕು ಸಹಿತ ಜಿಲ್ಲಾ ಕೇಂದ್ರವು ಸೇರಿ 8 ಪಶು ಸಂಜೀವಿನಿ ಸಂಚಾರಿ ತುರ್ತು ಚಿಕಿತ್ಸ ವಾಹನಗಳು ಪೂರ್ಣ ಪ್ರಮಾಣದಲ್ಲಿ ಸೇವೆ ನೀಡುತ್ತಿದೆ. ಗ್ರಾಮೀಣ ಭಾಗದಿಂದ ಜಾನುವಾರುಗಳ ಅನಾರೋಗ್ಯಕ್ಕೆ ಸಂಬಂಧಿಸಿ ಕರೆಗಳೂ ಬರುತ್ತಿದ್ದು, ಪಶು ವೈದ್ಯರು, ಪ್ಯಾರಾ ಮೆಡಿಕಲ್‌ ಅಸಿಸ್ಟೆಂಟ್‌, ವಾಹನ ಚಾಲಕ ಸಹಿತ ಸಿಬಂದಿ ತಂಡವು ತುರ್ತಾಗಿ ಧಾವಿಸಿ ಜಾನುವಾರುಗಳಿಗೆ ಚಿಕಿತ್ಸೆ ನೀಡುತ್ತಿದೆ.
ಡಾ| ರೆಡ್ಡಪ್ಪ , ಉಪ ನಿರ್ದೇಶಕರು,
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ

*ಅವಿನ್‌ ಶೆಟ್ಟಿ

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.