![belagavi](https://www.udayavani.com/wp-content/uploads/2024/07/belagavi-415x249.jpg)
DA; ನೌಕರರ ಡಿಎ ಹೆಚ್ಚಳ ಮಾಡಿದ ಕೇಂದ್ರ ಸರಕಾರ: 1 ಕೋಟಿ ಮಂದಿಗೆ ಪ್ರಯೋಜನ
Team Udayavani, Mar 7, 2024, 8:46 PM IST
![MONEY (2)](https://www.udayavani.com/wp-content/uploads/2024/03/MONEY-2-620x365.jpg)
ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಮುನ್ನ ಕೇಂದ್ರ ಸರಕಾರ ನೌಕರರಿಗೆ ಭರ್ಜರಿ ಗಿಫ್ಟ್ ಎಂಬಂತೆ ಗುರುವಾರ ತುಟ್ಟಿಭತ್ಯೆ (ಡಿಎ)ಯನ್ನು ಮೂಲ ವೇತನದ ಶೇಕಡಾ 50 ಕ್ಕೆ ಏರಿಸಿದ್ದು, ಈ ವರ್ಷದ ಜನವರಿ 1 ರಿಂದ ಜಾರಿಗೆ ಬರುವಂತೆ 1 ಕೋಟಿ ನೌಕರರು ಮತ್ತು ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ.
”ಮೂಲ ವೇತನ, ಪಿಂಚಣಿ, ಬೆಲೆ ಏರಿಕೆ ಸರಿದೂಗಿಸುವ ಸಲುವಾಗಿ ಜನವರಿ 1, 2024 ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ಡಿಆರ್ನೆಸ್ ರಿಲೀಫ್ (ಡಿಆರ್) ಅನ್ನು ಬಿಡುಗಡೆ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದು ಪ್ರಸ್ತುತ ಇರುವ ಶೇಕಡಾ 46 ರ ದರಕ್ಕಿಂತ 4 ಶೇಕಡಾ ಹೆಚ್ಚಳವಾಗಿದೆ” ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಂಪುಟ ಸಭೆಯ ನಂತರ ಹೇಳಿದ್ದಾರೆ.
Dearness Allowance ಮತ್ತು Dearness Relief ಎರಡರ ಲೆಕ್ಕದಲ್ಲಿ ಬೊಕ್ಕಸಕ್ಕೆ ವಾರ್ಷಿಕ 12,869 ಕೋಟಿ ರೂ. ಹೊರೆ ಇದ್ದು ಇನ್ನು ಮುಂದೆ ಹೆಚ್ಚಳದ ಪರಿಣಾಮ 2024-25ರ ಅವಧಿಯಲ್ಲಿ (ಜನವರಿ 2024 ರಿಂದ ಫೆಬ್ರವರಿ 2025) 15,014 ಕೋಟಿ ರೂ.ಹೊರೆಯಾಗಲಿದೆ.
ಡಿಎ ಹೆಚ್ಚಳದೊಂದಿಗೆ ಸಾರಿಗೆ ಭತ್ಯೆ, ಕ್ಯಾಂಟೀನ್ ಭತ್ಯೆ ಮತ್ತು ನಿಯೋಜಿತ ಭತ್ಯೆಗಳನ್ನು ಶೇ 25 ರಷ್ಟು ಹೆಚ್ಚಿಸಲಾಗಿದೆ. ಮನೆ ಬಾಡಿಗೆ ಭತ್ಯೆಯನ್ನು ಮೂಲ ವೇತನದ ಶೇ.27, ಶೇ.19 ಮತ್ತು ಶೇ.9ರಿಂದ ಕ್ರಮವಾಗಿ ಶೇ.30, ಶೇ.20 ಮತ್ತು ಶೇ.10ಕ್ಕೆ ಏರಿಸಲಾಗಿದೆ.
ಗ್ರಾಚ್ಯುಟಿ ಅಡಿಯಲ್ಲಿ ಪ್ರಯೋಜನಗಳನ್ನು ಶೇಕಡಾ 25 ರಷ್ಟು ಹೆಚ್ಚಿಸಲಾಗಿದೆ ಮತ್ತು ಈಗಿರುವ 20 ಲಕ್ಷದಿಂದ 25 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ವಿವಿಧ ಭತ್ಯೆಗಳ ಹೆಚ್ಚಳದಿಂದ ಬೊಕ್ಕಸಕ್ಕೆ ವಾರ್ಷಿಕವಾಗಿ 9,400 ಕೋಟಿ ರೂ.ಹೊರೆಯಾಗಲಿದೆ.
7ನೇ ಕೇಂದ್ರೀಯ ವೇತನ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಅಂಗೀಕೃತ ಸೂತ್ರಕ್ಕೆ ಅನುಗುಣವಾಗಿ ಡಿಎ ಮತ್ತು ಡಿಆರ್ ಹೆಚ್ಚಳವಾಗಿದೆ. ಕೇಂದ್ರ ಸರಕಾರದ ಈ ನಿರ್ಧಾರವು 67.95 ಲಕ್ಷ ಪಿಂಚಣಿದಾರರು ಜತೆಗೆ 49.18 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಪ್ರಯೋಜನವನ್ನು ಪಡೆಯಲಿದ್ದಾರೆ.
ಟಾಪ್ ನ್ಯೂಸ್
![belagavi](https://www.udayavani.com/wp-content/uploads/2024/07/belagavi-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ](https://www.udayavani.com/wp-content/uploads/2024/07/3-8-150x90.jpg)
Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ
![rahul gandhi](https://www.udayavani.com/wp-content/uploads/2024/07/rahul-8-150x83.jpg)
LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ
![terror attack on Army camp in Jammu and Kashmir’s Rajouri](https://www.udayavani.com/wp-content/uploads/2024/07/rajuori-150x83.jpg)
Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ
![Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!](https://www.udayavani.com/wp-content/uploads/2024/07/himachala-150x91.jpg)
Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!
![NEET-UG Counselling: ನೀಟ್-ಯುಜಿ ಕೌನ್ಸೆಲಿಂಗ್ ಈ ಮಾಸಾಂತ್ಯಕ್ಕೆ ಆರಂಭ?](https://www.udayavani.com/wp-content/uploads/2024/07/neet-5-150x83.jpg)
NEET-UG Counselling: ನೀಟ್-ಯುಜಿ ಕೌನ್ಸೆಲಿಂಗ್ ಈ ಮಾಸಾಂತ್ಯಕ್ಕೆ ಆರಂಭ?
MUST WATCH
ಹೊಸ ಸೇರ್ಪಡೆ
![belagavi](https://www.udayavani.com/wp-content/uploads/2024/07/belagavi-150x90.jpg)
Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ
![Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ](https://www.udayavani.com/wp-content/uploads/2024/07/sahitya-150x83.jpg)
Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ
![6-kalburgi](https://www.udayavani.com/wp-content/uploads/2024/07/6-kalburgi-150x90.jpg)
Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ
![5-vitla](https://www.udayavani.com/wp-content/uploads/2024/07/5-vitla-150x90.jpg)
Vitla: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು
![Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ](https://www.udayavani.com/wp-content/uploads/2024/07/3-8-150x90.jpg)
Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.