WPL ; ಯುಪಿ ವಾರಿಯರ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯಭೇರಿ
Team Udayavani, Mar 7, 2024, 11:01 PM IST
ಹೊಸದಿಲ್ಲಿ: ಆಲ್ರೌಂಡ್ ಆಟದ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ ತಂಡವು ವನಿತಾ ಪ್ರೀಮಿಯರ್ ಲೀಗ್ನ ಗುರುವಾರದ ಪಂದ್ಯದಲ್ಲಿ ಯುಪಿ ವಾರಿಯರ್ ತಂಡವನ್ನು 42 ರನ್ನುಗಳಿಂದ ಸೋಲಿಸಿದೆ.
ಗೆಲ್ಲಲು 161 ರನ್ ಗಳಿಸುವ ಸವಾಲು ಪಡೆದ ಯುಪಿ ವಾರಿಯರ್ ತಂಡವು ಮುಂಬೈಯ ನಿಖರ ದಾಳಿಗೆ ತತ್ತರಿಸಿದ್ದು ನಿಗದಿತ 20 ಓವರ್ಗಳಲ್ಲಿ 9 ವಿಕೆಟಿಗೆ 118 ರನ್ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು. ಈ ಗೆಲುವಿನಿಂದ ಮುಂಬೈ ತಂಡವು ತಾನಾಡಿದ ಆರು ಪಂದ್ಯಗಳಿಂದ ನಾಲ್ಕರಲ್ಲಿ ಜಯ ಸಾಧಿಸಿ ಒಟ್ಟು ಎಂಟಂಕದೊಂದಿಗೆ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿತು. 4 ಪಂದ್ಯಗಳಲ್ಲಿ ಗೆದ್ದಿರುವ ಡೆಲ್ಲಿ ತಂಡವೂ ಎಂಟಂಕ ಹೊಂದಿದ್ದರೂ ಉತ್ತಮ ರನ್ಧಾರಣೆಯ ಆಧಾರದಲ್ಲಿ ಅಗ್ರಸ್ಥಾನದಲ್ಲಿದೆ. ಯುಪಿ ವಾರಿಯರ್ ತಾನಾಡಿದ ಆರು ಪಂದ್ಯಗಳಲ್ಲಿ ಕೇವಲ ಎರಡರಲ್ಲಿ ಜಯ ಸಾಧಿಸಿತ್ತು.
ಬ್ರಂಟ್ ಆಸರೆ
ಈ ಮೊದಲು ನಾಟ್ ಸಿವೆರ್ ಬ್ರಂಟ್, ನಾಯಕಿ ಹರ್ಮನ್ಪ್ರೀತ್ ಕೌರ್ ಮತ್ತು ಅಮೆಲಿಯಾ ಕೆರ್ರ ಅವರ ಉತ್ತಮ ಆಟದಿಂದಾಗಿ ಮುಂಬೈ ಇಂಡಿಯನ್ಸ್ ತಂಡವು ಆರು ವಿಕೆಟಿಗೆ 160 ರನ್ನುಗಳ ಉತ್ತಮ ಮೊತ್ತ ಪೇರಿಸಿತ್ತು. ಬ್ರಂಟ್ 31 ಎಸೆತಗಳಿಂದ 45 ಮತ್ತು ಕೌರ್ 30 ಎಸೆತಗಳಿಂದ 33 ರನ್ ಗಳಿಸಿದರು. ಅವರಿಬ್ಬರು ಮೂರನೇ ವಿಕೆಟಿಗೆ 59 ರನ್ ಪೇರಿಸಿದ್ದರಿಂದ ಮುಂಬೈ ಚೇತರಿಸಿಕೊಂಡಿತು. ಕೊನೆ ಹಂತದಲ್ಲಿ ಅಮೆಲಿಯಾ ಕೆರ್ರ ಮತ್ತು ಸಜೀವನ್ ಸಜನಾ ಬಿರುಸಿನ ಆಟ ಆಡಿದರು. ಕೆರ್ರ 23 ಎಸೆತಗಳಿಂದ 39 ರನ್ ಗಳಿಸಿ ಅಜೇಯರಾಗಿ ಉಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Womens T20 World Cup: ಪಾಕ್ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್ ಸೋತ ಭಾರತ
INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್ ಯಾರು?
T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.