Loksabha ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಮೊಹಮ್ಮದ್ ಶಮಿ ಸ್ಪರ್ಧೆ?
Team Udayavani, Mar 8, 2024, 11:39 AM IST
ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಿಂದ ಸ್ಟಾರ್ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ಆಲೋಚಿಸುತ್ತಿದೆ ಎಂದು ವರದಿಯಾಗಿದೆ.
ಈ ಬಗ್ಗೆ ಮೂಲಗಳನ್ನು ಉದ್ದೇಶಿಸಿ ಇಂಡಿಯಾ ಟುಡೇ ವರದಿ ಮಾಡಿದೆ. ಉತ್ತರ ಪ್ರದೇಶ ಮೂಲದವರಾದ ಮೊಹಮ್ಮದ್ ಶಮಿ ಅವರು ಬಂಗಾಳದ ತಂಡದ ಪರ ರಣಜಿ ಟ್ರೋಫಿ ಪಂದ್ಯಗಳನ್ನಾಡಿದ್ದಾರೆ. ಈಗಲೂ ದೇಶಿಯ ಕ್ರಿಕೆಟ್ ನಲ್ಲಿ ಬಂಗಾಳವನ್ನೇ ಶಮಿ ಪ್ರತಿನಿಧಿಸುತ್ತಿದ್ದಾರೆ.
ಕಳೆದ ಏಕದಿನ ವಿಶ್ವಕಪ್ ನಲ್ಲಿ ಅತ್ಯದ್ಭುತ ಬೌಲಿಂಗ್ ನಿಂದ ಕಮಾಲ್ ಮಾಡಿದ್ದ ಶಮಿ ಬಳಿಕ ಗಾಯದ ಕಾರಣದಿಂದ ಯಾವುದೇ ಕ್ರಿಕೆಟ್ ಆಡಿಲ್ಲ. ಇತ್ತೀಚೆಗಷ್ಟೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಮಿ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.
ವರದಿಯ ಪ್ರಕಾರ, ಬಿಜೆಪಿ ನಾಯಕತ್ವವು ಈಗಾಗಲೇ ಶಮಿ ಅವರನ್ನು ಚುನಾವಣೆ ಸ್ಪರ್ಧೆ ಬಗ್ಗೆ ಸಂಪರ್ಕಿಸಿದೆ. ಆದರೆ ಶಮಿ ಇದುವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ.
ಬಿಜೆಪಿಯ ಉನ್ನತ ಮೂಲಗಳ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಶಮಿ ಅವರನ್ನು ಅಭ್ಯರ್ಥಿಯಾಗಿ ಪ್ರಸ್ತಾಪಿಸಲಾಗಿದೆ. ಸಕಾರಾತ್ಮಕ ಚರ್ಚೆಗಳು ನಡೆದಿದೆ. ಬಿಜೆಪಿಯೊಳಗಿನ ಆಂತರಿಕ ಚರ್ಚೆಗಳು ಶಮಿಯನ್ನು ಕಣಕ್ಕಿಳಿಸುವುದು ಬಂಗಾಳದ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಗೆಲುವು ಸಾಧಿಸಲು ಸಹಾಯ ಮಾಡುತ್ತದೆ ಎಂದು ಸೂಚಿಸುತ್ತದೆ.
ಬಿಜೆಪಿ ಮೂಲಗಳ ಪ್ರಕಾರ, ಹಿಂಸಾಚಾರಕ್ಕೆ ಸಾಕ್ಷಿಯಾದ ಸಂದೇಶಖಾಲಿ ಗ್ರಾಮವಿರುವ ಬಸಿರ್ಹತ್ ಲೋಕಸಭಾ ಕ್ಷೇತ್ರದಿಂದ ಶಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ.
ವಿಶ್ವಕಪ್ ಫೈನಲ್ ಸೋಲಿನ ಬಳಿಕ ಡ್ರೆಸ್ಸಿಂಗ್ ರೂಮ್ ಗೆ ತೆರಳಿದ್ದ ಪ್ರಧಾನಿ ಮೋದಿ ಅವರು ಶಮಿ ಅವರನ್ನು ಹೊಗಳಿದ್ದರು. ಅಲ್ಲದೆ ಅವರನ್ನು ಆಲಂಗಿಸಿದ್ದರು. ಇತ್ತೀಚೆಗೆ ಶಸ್ತ್ರಚಿಕಿತ್ಸೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಶೀಘ್ರ ಚೇತರಿಕೆಗೆ ಪಿಎಂ ಮೋದಿ ಹಾರೈಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್: ದ.ಆಫ್ರಿಕಾಗೆ 177 ರನ್ ಅಂತರದ ಸೋಲು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.