![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 8, 2024, 11:20 PM IST
ಶಿವಮೊಗ್ಗ: ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕೆ.ಈ.ಕಾಂತೇಶ್ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ಟಿಕೆಟ್ ಸಿಗುವುದು ಅನುಮಾನ ಎಂಬ ಸುದ್ದಿಗಳು ಹರಿದಾಡುತ್ತಿರುವುದರಿಂದ ಅವರ ಅಭಿಮಾನಿಗಳು ಶುಕ್ರವಾರ ಮನೆ ಮುಂದೆ ಜಮಾಯಿಸಿದ್ದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂತೇಶ್, ಸದ್ಯ ಗೊಂದಲ ಸೃಷ್ಟಿಯಾಗಿರುವುದರಿಂದ ನಮ್ಮ ಮನೆಗೆ ಬೆಂಬಲಿಗರು ಬಂದಿದ್ದಾರೆ. ಯಡಿಯೂರಪ್ಪ ಅವರು ಆಶೀರ್ವಾದ ಮಾಡಿದ್ದರು. ಹೀಗಾಗಿ ಹಾವೇರಿಯಲ್ಲಿ ಟಿಕೆಟ್ ಸಿಗುತ್ತದೆ ಹಾಗೂ ಕ್ಷೇತ್ರದಲ್ಲಿ ಓಡಾಡುವಂತೆ ಸೂಚನೆ ಬಂದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಓಡಾಟ ಮಾಡಿದ್ದೆ. ಈಗ ಬಸವರಾಜ ಬೊಮ್ಮಾಯಿ ಹೆಸರು ಕೇಳಿಬರುತ್ತಿದೆ.
ಹಾಗಾಗಿ ಕೆಲ ಗೊಂದಲಗಳು ಸೃಷ್ಟಿಯಾಗಿವೆ. ಈಗಲೂ ನನಗೆ ವಿಶ್ವಾಸ ಇದೆ. ಟಿಕೆಟ್ ನನಗೆ ಸಿಕ್ಕೇ ಸಿಗುತ್ತದೆ ಎಂದರು.
ವಿಜಯೇಂದ್ರ, ರಾಘಣ್ಣ ಅವರು ನನಗೆ ಟಿಕೆಟ್ ಕೊಡಿಸಲು ಪ್ರಯತ್ನ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಟಿಕೆಟ್ ಮಿಸ್ ಆಗುವುದಿಲ್ಲ. ಹಾವೇರಿ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಗೆಲ್ಲುತ್ತದೆ. ಹಾವೇರಿ-ಗದಗ ಕ್ಷೇತ್ರಕ್ಕೆ ನನಗೆ ಟಿಕೆಟ್ ಸಿಗುವುದು ಖಚಿತ.
ಹೈಕಮಾಂಡ್ ಸೂಚನೆ ಮೇರೆಗೆ ನಮ್ಮ ತಂದೆ ರಾಜಕೀಯ ನಿವೃತ್ತಿ ಹೊಂದಿದ್ದರು. ಇದೀಗ ನಮ್ಮ ಕುಟುಂಬಕ್ಕೆ ಲೋಕಸಭಾ ಟಿಕೆಟ್ ಸಿಕ್ಕೇ ಸಿಗುತ್ತದೆ. ನಾವು ಬಿಜೆಪಿಯನ್ನು ತಾಯಿಯಂತೆ ಪ್ರೀತಿಸುತ್ತೇವೆ. ಹಾಗಾಗಿ ಪಕ್ಷದ ಮೇಲೆ ನಮಗೆ ಗೌರವವಿದೆ ಎಂದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.