ಓಮನ್‌ ಬಿಲ್ಲವಾಸ್‌ ; ಮಸ್ಕತ್‌ನಲ್ಲಿ ಹೊನಲು ಬೆಳಕಿನ ಕ್ರೀಡಾಕೂಟ


Team Udayavani, Mar 9, 2024, 11:10 AM IST

ಓಮನ್‌ ಬಿಲ್ಲವಾಸ್‌ ; ಮಸ್ಕತ್‌ನಲ್ಲಿ ಹೊನಲು ಬೆಳಕಿನ ಕ್ರೀಡಾಕೂಟ

ಮಸ್ಕತ್‌: ಮಸ್ಕತ್‌ನ ಬಿಲ್ಲವ ಸಂಘಟನೆ ಓಮನ್‌ ಬಿಲ್ಲವಾಸ್‌ ವತಿಯಿಂದ ಹೊನಲು ಬೆಳಕಿನ ಕ್ರೀಡಾಕೂಟವು ಸಂಘದ ಅಧ್ಯಕ್ಷ ಸುಜಿತ್‌ ಅಂಚನ್‌ ನೇತೃತ್ವದಲ್ಲಿ ಫೆ. 9ರಂದು ಅಲ್‌ ಹೈಲ್‌ ಕ್ರಿಕೆಟ್‌ ಮೈದಾನ ಮಸ್ಕತ್‌ನಲ್ಲಿ ನಡೆಯಿತು.

ಸಂಘಟನೆಯ ಸ್ಥಾಪಕ ಅಧ್ಯಕ್ಷ ದಿ| ಪಿ. ಬಿ. ಅಲ್ಕೆ ಸ್ಮರಣಾರ್ಥ ಪುರುಷರಿಗೆ ಕ್ರಿಕೆಟ್‌, ಮಹಿಳೆಯರಿಗೆ ಕ್ರಿಕೆಟ್‌ ಮತ್ತು ತ್ರೋಬಾಲ್‌ ಮತ್ತು ಮಕ್ಕಳಿಗೆ, ಹಿರಿಯರಿಗೆ ವಿವಿಧ‌ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಪುರುಷರ 8 ತಂಡಗಳು ಹಾಗೂ ಮಹಿಳೆಯರ 4 ತಂಡಗಳು ಪ್ರಪ್ರಥಮವಾಗಿ ಆಯೋಜಿಸಲ್ಪಟ್ಟ ದಿ| ಪಿ. ಬಿ. ಅಲ್ಕೆ ಟ್ರೋಫಿ 2024ಕ್ಕಾಗಿ ತಲಾ 5 ಓವರ್‌ಗಳ ಲೀಗ್‌ ಮಾದರಿಯಲ್ಲಿ ರೋಚಕವಾಗಿ ಸೆಣಸಾಟ ನಡೆಯಿತು.

ಪುರುಷರ ತಂಡಗಳಾದ ಕುದ್ರೋಳಿ ಇಲೆವೆನ್‌, ಬೆದ್ರ ಇಲೆವೆನ್‌, ಬಿರ್ವಾಸ್ಮ್ಯಾಶರ್ಸ್‌, ಜೇನುಗೂಡು, ಗೆಜ್ಜೆಗಿರಿ ಇಲೆವೆನ್‌, ಕಟಾ³ಡಿ ಇಲೆವೆನ್‌, ಸೋಹಾರ್‌ ವಾರಿಯರ್ಸ್‌ ಹಾಗೂ ಕಾನ್ಸೆಪ್ಟ್ ಇಲೆವೆನ್‌ ತಂಡಗಳು ಭಾಗವಹಿಸಿದ್ದವು. ಅಂತಿಮ ಸೆಣಸಾಟದಲ್ಲಿ ಸುಕುಮಾರ್‌ ಅಂಚನ್‌ ಪಾಂಗಾಳ ಮಾಲಕತ್ವದ ಗೆಜ್ಜೆಗಿರಿ ಇಲೆವೆನ್‌ ತಂಡವು ಸಂದೀಪ್‌ ಕರ್ಕೇರಾ ಮಾಲಕತ್ವದ ಬೆದ್ರ ಇಲೆವೆನ್‌ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯಭೇರಿ ಪಡೆದು ಪ್ರತಿಷ್ಠಿತ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡಿತು.

ಮಹಿಳೆಯರ ಕ್ರಿಕೆಟ್‌ ವಿಭಾಗದಲ್ಲಿ ಬಿರ್ವಾ ಬೊಳ್ಳಿಲು, ಟೀಮ್‌ ಶಕ್ತಿ, ಸೋಹಾರ್‌ ವಾರಿಯರ್ಸ್‌ ಹಾಗೂ ಟೀಮ್‌ ಭೈರವಿ ತಂಡಗಳು ಭಾಗವಹಿಸಿದ್ದವು. ಫೈನಲ್‌ ಹಣಾಹಣಿಯಲ್ಲಿ ಟೀಮ್‌ ಶಕ್ತಿ ತಂಡವು ಟೀಮ್‌ ಭೈರವಿ ವಿರುದ್ಧ 6 ವಿಕೆಟ್‌ಗಳ ರೋಚಕ ಗೆಲುವಿನೊಂದಿಗೆ ಪ್ರಶಸ್ತಿಯನ್ನು ತನ್ನದಾಗಿಸಿತು. ತ್ರೋಬಾಲ್‌ ಪಂದ್ಯದಲ್ಲಿ ಟೀಂ ಶಕ್ತಿ, ಬಿರ್ವಾ ಬೊಳ್ಳಿಲು ಹಾಗೂ “ಬ್ರಾಮರಿ’ ತಂಡಗಳು ಭಾಗವಹಿಸಿದ್ದವು.

ಫೈನಲ್‌ ಮುಖಾಮುಖಿಯಲ್ಲಿ ಟೀಮ್‌ ಶಕ್ತಿ ತಂಡವು ಬಿರ್ವಾ ಬೊಳ್ಳಿಲು ವಿರುದ್ಧ ಜಯಸಾಧಿಸಿ ಪ್ರಶಸ್ತಿ ಗಳಿಸುವಲ್ಲಿ ಸಫಲತೆಯನ್ನು ಕಂಡಿತು. ಕಾರ್ಯಕ್ರಮದ ಕೊನೆಯಲ್ಲಿ ಉತ್ತಮ ಆಟಗಾರರಿಗೆ, ವಿಜೇತ ತಂಡಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಪ್ರಶಸ್ತಿ ವಿತರಿಸಲಾಯಿತು.

ನವೀನ್‌ ಪೂಜಾರಿ, ಗಣೇಶ್‌ ಪೂಜಾರಿ ಮತ್ತು ನಿತೇಶ್‌ ನೇತೃತ್ವದ ಅಡುಗೆ ತಂಡವು ದಿನದ ಮೂರು ಹೊತ್ತಿನ ಊಟೋಪಚಾರದ ನೇತೃತ್ವ ವಹಿಸಿದ್ದರು. ಈ ಕ್ರೀಡಾಮಹೋತ್ಸವದಲ್ಲಿ ಅಧ್ಯಕ್ಷ ಸುಜಿತ್‌ ಅಂಚನ್‌, ಸ್ಥಾಪಕ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರಾದ ಅಶೋಕ್‌ ಸುವರ್ಣ, ಎಸ್‌. ಕೆ. ಪೂಜಾರಿ, ಡಾ|ಅಂಚನ್‌ ಸಿ.ಕೆ., ಓಮನ್‌ ತುಳುವೆರ್‌ ಅಧ್ಯಕ್ಷ ರಮಾನಂದ ಶೆಟ್ಟಿ, ಮಸ್ಕತ್‌ ಮೊಗವೀರ್ ಪ್ರತಿನಿಧಿ ಶ್ರೀಶ ಕಾಂಚನ್‌, ಕರಾವಳಿ ಫ್ರೆಂಡ್ಸ್‌ನ ಹಿತೇಶ್‌, ಕಾರ್ಯಕಾರಿ ಸಮಿತಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ಸುಮಧುರ ಸಂಗೀತ ಸಂಜೆ: ಮಲ್ಹಾರ್‌ 2.0 ಕಾರ್ಯಕ್ರಮ

Desi Swara: ಸುಮಧುರ ಸಂಗೀತ ಸಂಜೆ: ಮಲ್ಹಾರ್‌ 2.0 ಕಾರ್ಯಕ್ರಮ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.