Rameshwaram Cafe Case: ಮತ್ತೆ ನಾಲ್ಕು ಫೋಟೋ ಬಿಡುಗಡೆ: ಬೆನ್ನು ಬಿದ್ದ ಎನ್ಐಎ
Team Udayavani, Mar 10, 2024, 7:15 AM IST
ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ಶಂಕಿತ ವ್ಯಕ್ತಿಯ ಮತ್ತಷ್ಟು ಫೋಟೋ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡು ಸಾರ್ವಜನಿಕರ ಸಹಕಾರ ಕೋರಿದ್ದಾರೆ.
ಶಂಕಿತ ಓಡಾಡಿರುವ ಸ್ಥಳದ ಬಗ್ಗೆ ಮಾಹಿತಿ ಸಂಗ್ರಹಿಸಿ ಅಲ್ಲಿನ ಸಿಸಿ ಕೆಮರಾಗಳಲ್ಲಿ ಸೆರೆಯಾದ ದೃಶ್ಯಗಳನ್ನು ಆಧರಿಸಿ ವಿವಿಧ ಭಂಗಿಯ ನಾಲ್ಕು ಫೋಟೋಗಳನ್ನು ಎನ್ಐಎ ತನ್ನ ಎಕ್ಸ್ ಖಾತೆಯಲ್ಲಿ ಬಿಡುಗಡೆ ಮಾಡಿದೆ. ಈ ಫೋಟೋಗಳಲ್ಲಿ ಶಂಕಿತ ವ್ಯಕ್ತಿಯ ಮುಖಚಹರೆ ಸ್ಪಷ್ಟವಾಗಿ ಕಾಣುತ್ತಿದೆ. ಈ ಕುರಿತು ಸಾರ್ವಜನಿಕ ಪ್ರಕಟನೆ ಹೊರಡಿಸಿರುವ ಎನ್ಐಎ, ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದೆ. ಶಂಕಿತನ ಸುಳಿವು ಲಭಿಸಿದ ಕೂಡಲೇ 080- 29510900, 8904241100 ಹಾಗೂ ಇಮೇಲ್ ವಿಳಾಸ [email protected] ಗೆ ಮಾಹಿತಿ ನೀಡಬಹುದು ಎಂದು ಅಧಿಕಾರಿ ಗಳು ತಿಳಿಸಿದ್ದಾರೆ.
ಶಂಕಿತ ಆರೋಪಿ ಮಾ.1ರಂದು ಮಧ್ಯಾಹ್ನ ಬಿಎಂಟಿಸಿ ಬಸ್ನಲ್ಲಿ ಓಡಾಟ ಮತ್ತು ಅದೇ ದಿನ ರಾತ್ರಿ 9 ಗಂಟೆಗೆ ಬಳ್ಳಾರಿಯ ಬಸ್ ನಿಲ್ದಾಣದಲ್ಲಿ ಓಡಾಡಿರುವ ಎರಡು ವೀಡಿಯೋಗಳನ್ನು ಶುಕ್ರವಾರ ಎನ್ಐಎ ಬಿಡುಗಡೆ ಮಾಡಿತ್ತು. ಬಳಿಕ ಶಂಕಿತ ಬಳ್ಳಾರಿಯಲ್ಲೇ ವಿವಿಧೆಡೆ ಸಂಚರಿಸಿರುವ ದೃಶ್ಯಗಳನ್ನು ಎನ್ಐಎ ವೈರಲ್ ಮಾಡಿದೆ.
ಕರಾವಳಿಯಲ್ಲೂ ಹುಡುಕಾಟ
ಮತ್ತೂಂದೆಡೆ ಶಂಕಿತ ವ್ಯಕ್ತಿ ಬಳ್ಳಾರಿಯಿಂದ ಭಟ್ಕಳ ಮತ್ತು ಬಂಟ್ವಾಳ ಮಾರ್ಗವಾಗಿ ಕಡಲ ತೀರದ ಪ್ರದೇಶಗಳಿಗೆ ತೆರಳಿ ರುವ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆ ಯಲ್ಲಿ ಶಂಕಿತನಿಗಾಗಿ ಎನ್ಐಎ ಅಧಿಕಾರಿಗಳು ರಾಜ್ಯದ ಕಡಲ ತೀರದಲ್ಲಿ ತೀವ್ರ ಶೋಧ ನಡೆಸು ತ್ತಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಂಗಳೂರು ಪೊಲೀಸರು ಎನ್ಐಎ ಅಧಿಕಾರಿಗಳ ಜತೆ ಹುಡುಕಾಟ ನಡೆಸುತ್ತಿದ್ದಾರೆ. ಸ್ಫೋಟದ ಬಳಿಕ ಅಧಿಕಾರಿಗಳು ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕದ ಬಳ್ಳಾರಿಯಲ್ಲಿ ಕೆಲವು ಶಂಕಿತರನ್ನು ವಿಚಾರಣೆಗೆ ಒಳಪಡಿಸಿ ದರೂ ಶಂಕಿತನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ತನಿಖೆ ಮತ್ತು ಕೆಲವರ ವಿಚಾರಣೆ ಸಂದರ್ಭದಲ್ಲಿ ಶಂಕಿತ ಸಮುದ್ರದ ಮೂಲಕ ಪರಾರಿಯಾಗಿರಬಹುದು ಎಂಬ ಶಂಕೆಯಲ್ಲಿ ಕರಾವಳಿ ರಕ್ಷಣ ಪಡೆಗಳಿಗೆ ಮಾಹಿತಿ ನೀಡಲಾಗಿದೆ. ಶಂಕಿತರು ಅಥವಾ ಹೊಸದಾಗಿ ಬರುವ ವ್ಯಕ್ತಿಗಳಬಗ್ಗೆ ನಿಗಾ ವಹಿಸುವಂತೆ ಎನ್ಐಎ ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.