ಸ್ವಾತಂತ್ರ್ಯ ದಿನಕ್ಕೆ 3 ಸಿನಿಮಾ ರಿಲೀಸ್‌ ಪಕ್ಕಾ.. ಅಲ್ಲು,ಶಿವಣ್ಣ,ದೇವಗನ್‌ ನಡುವೆ ಪೈಪೋಟಿ

ಅಖಾಡಕ್ಕೆ ಎಂಟ್ರಿ ಆಗುತ್ತಾ ರಜಿನಿ, ವಿಜಯ್‌ ಸಿನಿಮಾ?

Team Udayavani, Mar 10, 2024, 3:49 PM IST

11

ಬೆಂಗಳೂರು: ಚಿತ್ರರಂಗದಲ್ಲಿ ಸಿನಿಮಾಗಳು ಹಬ್ಬದ ಸಂದರ್ಭದಲ್ಲಿ ರಿಲೀಸ್‌ ಆಗುತ್ತವೆ. ಅದರಲ್ಲೂ ವಿಶೇಷವಾಗಿ ಸಂಕ್ರಾಂತಿ ಹಬ್ಬದ ವೇಳೆ ದಕ್ಷಿಣದಲ್ಲಿ ಒಂದಕ್ಕೊಂದು ಟಕ್ಕರ್‌ ಕೊಡುವಂತೆ ಸ್ಟಾರ್‌ ನಟರ ಸಿನಿಮಾಗಳು ತೆರೆ ಕಾಣುತ್ತದೆ. ಈ ವೇಳೆ ಬರುವ ಸಿನಿಮಾಗಳು ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಗಳಿಕೆ ಕಾಣುತ್ತದೆ ಎನ್ನುವುದು ಚಿತ್ರತಂಡದ ಲೆಕ್ಕಚಾರ ಆಗಿರುತ್ತದೆ.

ಇದೀಗ ಸೌತ್‌ ಸಿನಿಮಾದಲ್ಲಿ ಈ ಟ್ರೆಂಡ್‌ ಬದಲಾದಂತೆ ಕಾಣುತ್ತಿದೆ. ಈ ವರ್ಷ ಹಬ್ಬದ ಬದಲಾಗಿ ಸ್ವಾತಂತ್ರೋತ್ಸವಕ್ಕೆ ಬಿಗ್‌ ಬಜೆಟ್‌ ಸಿನಿಮಾಗಳು ಒಂದೇ ದಿನ ತೆರೆಗೆ ಅಪ್ಪಳಿಸಲಿವೆ.

ಪ್ಯಾನ್‌ ಇಂಡಿಯಾದಲ್ಲಿ ʼಪುಷ್ಪ-2ʼ ಮಾಡುತ್ತಾ ಕಮಾಲ್?:‌ ಅಲ್ಲು ಅರ್ಜುನ್‌ ವೃತ್ತಿ ಬದುಕಿನ ಬಹುದೊಡ್ಡ ಹಿಟ್‌ ನಲ್ಲಿ ಒಂದಾಗಿರುವ ʼಪುಷ್ಪʼ ಸಿನಿಮಾದ ಸೀಕ್ವೆಲ್‌ ʼಪುಷ್ಪ-2ʼ ಗಾಗಿ ದಕ್ಷಿಣ ಭಾರತ ಮಾತ್ರವಲ್ಲದೆ, ಉತ್ತರದಲ್ಲೂ ಪ್ರೇಕ್ಷಕರು ಕಾಯುತ್ತಿದ್ದಾರೆ. ಸುಕುಮಾರನ್‌ ನಿರ್ದೇಶನದ ಈ ಸಿನಿಮಾದ ಬಗ್ಗೆ ಪರಿಚಯ ಮಾಡಿಕೊಡಬೇಕಿಲ್ಲ. ಸಿನಿಮಾದ ಮೊದಲ ಭಾಗ ತಂದುಕೊಟ್ಟ ಹಿಟ್‌ ನಿಂದ ಎರಡನೇ ಭಾಗದ ಹೈಪ್‌ ಶೂಟಿಂಗ್‌ ಹಂತದಲ್ಲೇ ಹೆಚ್ಚಾಗಿದೆ.

ಈ ಸಿನಿಮಾ ಇದೇ ವರ್ಷದ ಆಗಸ್ಟ್‌ 15 ರಂದು ರಿಲೀಸ್‌ ಆಗಲಿದೆ. ಬಾಕ್ಸ್‌ ಆಫೀಸ್‌ ನಲ್ಲಿ ಎಲ್ಲಾ ದಾಖಲೆಗಳನ್ನು ಪುಡಿಗಟ್ಟುವ ನಿರೀಕ್ಷೆ ಸಿನಿಮಾದ ಮೇಲಿದೆ.

ಬಿಟೌನ್‌ನಲ್ಲಿ ಬಿಗ್‌ ಬಜೆಟ್‌ ʼಸಿಂಗಂ ಎಗೇನ್‌ʼ: ಇನ್ನು ʼಸಿಂಗಂʼ ಫ್ರಾಂಚೈಸಿ ಮೂಲಕ ಬಿಟೌನ್‌ ಬಾಕ್ಸ್‌ ಆಫೀಸ್‌ ನಲ್ಲಿ ಕೋಟಿ ಕೋಟಿ ಕಮಾಯಿ ಮಾಡಿರುವ ರೋಹಿತ್‌ ಶೆಟ್ಟಿ ಈ ಬಾರಿ ʼಸಿಂಗಂ ಎಗೇನ್‌ʼ ಮೂಲಕ ಮೋಡಿ ಬರಲು ಬರುತ್ತಿದ್ದಾರೆ. ಈ ಸಲಿ ಸಿನಿಮಾದಲ್ಲಿ ಮಲ್ಟಿಸ್ಟಾರ್ಸ್‌ ಗಳಿದ್ದು, ಹವಾ ಎಬ್ಬಿಸೋದು ಪಕ್ಕಾ ಎನ್ನುವುದು ಬಿಟೌನ್‌ ಮಂದಿಯ ನಿರೀಕ್ಷೆ.

ಅಜಯ್ ದೇವಗನ್, ಕರೀನಾ ಕಪೂರ್ , ದೀಪಿಕಾ ಪಡುಕೋಣೆ, ರಣ್ವೀರ್ ಸಿಂಗ್, ಅರ್ಜುನ್ ಕಪೂರ್, ಟೈಗರ್ ಶ್ರಾಫ್ ಸೇರಿದಂತೆ ಬಹುದೊಡ್ಡ ಕಲಾವಿದರ ದಂಡು ಸಿನಿಮಾದಲ್ಲಿದೆ. ಅಂದಹಾಗೆ ಈ ಸಿನಿಮಾ ಕೂಡ ಆಗಸ್ಟ್‌ 15 ರಂದೇ ರಿಲೀಸ್‌ ಆಗಲಿದೆ.

ಪ್ಯಾನ್‌ ಇಂಡಿಯಾ ಸಿನಿಮಾಕ್ಕೆ ಟಕ್ಕರ್‌ ಕೊಡುತ್ತಾ ʼಭೈರತಿ ರಣಗಲ್ʼ ? : ಸ್ವಾತಂತ್ರೋತ್ಸವಕ್ಕೆ ʼಪುಷ್ಪ-2ʼ ಹಾಗೂ ʼಸಿಂಗಂ ಎಗೇನ್‌ʼ ಸಿನಿಮಾಗಳು ಬಾಕ್ಸ್‌ ಆಫೀಸ್‌ ನಲ್ಲಿ ಪೈಪೋಟಿ ನಡೆಸಲಿವೆ ಎನ್ನಲಾಗುತ್ತಿತ್ತು. ಈ ನಡುವೆ ಕರ್ನಾಟಕದಲ್ಲಿ ಶಿವರಾಜ್‌ ಕುಮಾರ್‌ ಅವರ ʼಭೈರತಿ ರಣಗಲ್‌ʼ ಸಿನಿಮಾ ಕೂಡ ಆ.15 ರಂದೇ ರಿಲೀಸ್‌ ಆಗಲಿದ್ದು, ಚಂದನವನದಲ್ಲಿ ಪರಭಾಷಾ ಸಿನಿಮಾಗಳ ಮುಂದೆ ನರ್ತನ್‌ ಅವರ ʼಭೈರತಿ ರಣಗಲ್‌ʼ ಮ್ಯಾಜಿಕ್‌ ಮಾಡುತ್ತಾ ಎನ್ನುವುದನ್ನು ಕಾದು ನೋಡಬೇಕಾಗಿದೆ.

‘ಭೈರತಿ ರಣಗಲ್’ ‘ಮಫ್ತಿ’ಸಿನಿಮಾದ ಪ್ರೀಕ್ವೆಲ್ ಆಗಿದ್ದು, ಬಹುದೊಡ್ಡ ನಿರೀಕ್ಷೆಯನ್ನು ಹುಟ್ಟುಹಾಕಿದೆ.

ಇನ್ನು ಈ ಪೈಪೋಟಿಯಲ್ಲಿ ಮತ್ತಷ್ಟು ಸಿನಿಮಾಗಳು ಕೂಡ ಸೇರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಕಾಲಿವುಡ್‌ ನಿಂದ ದಳಪತಿ ವಿಜಯ್‌ ಅವರ ʼ ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್ʼ ಹಾಗೂ ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ‘ವೆಟ್ಟೈಯನ್​’ ಸಿನಿಮಾ ಕೂಡ ಆ.15 ರಂದು ಬಿಡುಗಡೆ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

Rashmika Mandanna is in kubera movie

Rashmika Mandanna; ಕುಬೇರ ಮೂಲೆಯಲ್ಲಿ ನಿಂತ ರಶ್ಮಿಕಾ ಮಂದಣ್ಣ

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.