Anantkumar Hegde ಹೇಳಿಕೆ ವಿರುದ್ಧ ಖರ್ಗೆ, ರಾಹುಲ್ ಸೇರಿ ಕಾಂಗ್ರೆಸ್ ನಾಯಕರ ಆಕ್ರೋಶ

ಸಂವಿಧಾನ್ ಬಚಾವೋ ಬಿಜೆಪಿ ಹಟಾವೋ...

Team Udayavani, Mar 10, 2024, 7:05 PM IST

Anant KUmar Hegde

ಬೆಂಗಳೂರು: ‘ಸಂವಿಧಾನವನ್ನು ತಿದ್ದುಪಡಿ ಮಾಡಲು ತಮ್ಮ ಪಕ್ಷಕ್ಕೆ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ’ ಎಂದುಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಹೇಳಿಕೆ ನೀಡಿರುವ ಕುರಿತು ”ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂವಿಧಾನವನ್ನು ಮರು ಬರೆಯುವ ಮತ್ತು ನಾಶಮಾಡುವ ಅಜೆಂಡಾವನ್ನು ಹೊಂದಿದೆ” ಎಂದು ಕಾಂಗ್ರೆಸ್ ಆಕ್ರೋಶ ಹೊರ ಹಾಕಿದೆ.

ಅನಂತಕುಮಾರ ಹೆಗಡೆ ಅವರು ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ, ಸಂವಿಧಾನವನ್ನು ತಿದ್ದುಪಡಿ ಮಾಡಲು, ಕಾಂಗ್ರೆಸ್ ಮಾಡಿದ ವಿರೂಪಗಳು ಮತ್ತು ಅನಗತ್ಯ ಸೇರ್ಪಡೆಗಳನ್ನು ಸರಿಪಡಿಸಲು ಬಿಜೆಪಿಗೆ ಸಂಸತ್ತಿನ ಉಭಯ ಸದನಗಳಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ” ಎಂದಿದ್ದರು.

ಹೆಗಡೆ ಹೇಳಿಕೆಯು ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ಗುಪ್ತ ಉದ್ದೇಶಗಳ ಸಾರ್ವಜನಿಕ ಘೋಷಣೆಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

”ಬಾಬಾ ಸಾಹೇಬರ ಸಂವಿಧಾನವನ್ನು ನಾಶಪಡಿಸುವುದೇ ನರೇಂದ್ರ ಮೋದಿ ಮತ್ತು ಬಿಜೆಪಿಯ ಅಂತಿಮ ಗುರಿ. ಅವರು ನ್ಯಾಯ, ಸಮಾನತೆ, ನಾಗರಿಕ ಹಕ್ಕುಗಳು ಮತ್ತು ಪ್ರಜಾಪ್ರಭುತ್ವವನ್ನು ದ್ವೇಷಿಸುತ್ತಾರೆ. ಸಮಾಜವನ್ನು ವಿಭಜಿಸುವ ಮೂಲಕ, ಮಾಧ್ಯಮವನ್ನು ಗುಲಾಮರನ್ನಾಗಿ ಮಾಡುವ ಮೂಲಕ, ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಕಸಿದುಕೊಳ್ಳುವ ಮೂಲಕ ಮತ್ತು ಸ್ವತಂತ್ರ ಸಂಸ್ಥೆಗಳನ್ನು ದುರ್ಬಲಗೊಳಿಸುವ ಮೂಲಕ, ವಿರೋಧವನ್ನು ತೊಡೆದುಹಾಕಲು ಸಂಚು ರೂಪಿಸುವ ಮೂಲಕ ಭಾರತದ ಮಹಾನ್ ಪ್ರಜಾಪ್ರಭುತ್ವವನ್ನು ಸಂಕುಚಿತ ಸರ್ವಾಧಿಕಾರವಾಗಿ ಪರಿವರ್ತಿಸಲು ಅವರು ಬಯಸುತ್ತಾರೆ ”ಎಂದು ಹಿಂದಿಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟದ ವೀರರ ಕನಸುಗಳೊಂದಿಗಿನ ಪಿತೂರಿಗಳಲ್ಲಿ ಅವರು ಯಶಸ್ವಿಯಾಗಲು ಬಿಡುವುದಿಲ್ಲ ಮತ್ತು ಕೊನೆಯ ಉಸಿರು ಇರುವವರೆಗೂ ಸಂವಿಧಾನವು ಖಾತರಿಪಡಿಸುವ ಪ್ರಜಾಪ್ರಭುತ್ವ ಹಕ್ಕುಗಳಿಗಾಗಿ ಹೋರಾಡುವುದನ್ನು ಮುಂದುವರಿಸುತ್ತೇವೆ ಎಂದು ರಾಹುಲ್ ಆಕ್ರೋಶ ಹೊರ ಹಾಕಿದ್ದಾರೆ.

ಹೇಳಿಕೆಯು ಸರ್ವಾಧಿಕಾರವನ್ನು ಹೇರುವ ಮೋದಿ-ಆರ್‌ಎಸ್‌ಎಸ್‌ನ ವಂಚಕ ಅಜೆಂಡಾವನ್ನು ಮತ್ತೊಮ್ಮೆ ಬಹಿರಂಗಪಡಿಸುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

“ಮೋದಿ ಸರ್ಕಾರ, ಬಿಜೆಪಿ ಮತ್ತು ಆರ್‌ಎಸ್‌ಎಸ್ ರಹಸ್ಯವಾಗಿ ಸರ್ವಾಧಿಕಾರವನ್ನು ಹೇರಲು ಬಯಸುತ್ತವೆ, ಆ ಮೂಲಕ ಅವರು ತಮ್ಮ ‘ಮನುವಾದಿ ಮನಸ್ಥಿತಿ’ಯನ್ನು ಭಾರತದ ಜನರ ಮೇಲೆ ಹೇರುತ್ತಾರೆ ಮತ್ತು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಹಕ್ಕುಗಳನ್ನು ಕಸಿದುಕೊಳ್ಳುತ್ತಾರೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

”ಕಾಲಕಾಲಕ್ಕೆ ಬಿಜೆಪಿ-ಆರ್‌ಎಸ್‌ಎಸ್‌ನ ಇಂತಹ ಪುನರಾವರ್ತಿತ ಕರೆಗಳು ನಮ್ಮ ಸಂವಿಧಾನ ತಯಾರಕರು ಪ್ರತಿಪಾದಿಸಿರುವ ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಪ್ರಭುತ್ವದ ಪ್ರಶ್ನಾತೀತ ತತ್ವಗಳ ಮೇಲೆ ನೇರ ದಾಳಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.

“ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯವು ಸಂವಿಧಾನದ ಬಲವಾದ ಸ್ತಂಭಗಳಾಗಿದ್ದು, ಈ ತತ್ವಗಳಲ್ಲಿನ ಯಾವುದೇ ಬದಲಾವಣೆಯು ಬಾಬಾಸಾಹೇಬ್ ಡಾ ಅಂಬೇಡ್ಕರ್ ಮತ್ತು ನಮ್ಮ ಪೂಜ್ಯ ಸಂಸ್ಥಾಪಕರು ರೂಪಿಸಿದ ಭಾರತಕ್ಕೆ ಅವಮಾನವಾಗಿದೆ” ಎಂದು “ಸಂವಿಧಾನ್ ಬಚಾವೋ ಬಿಜೆಪಿ ಹಟಾವೋ” ಎಂಬ ಹ್ಯಾಶ್‌ಟ್ಯಾಗ್ ಬಳಸಿದ್ದಾರೆ.

ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ, ಮತ್ತು ಮೋದಿ ಅವರ ನೆಚ್ಚಿನ ಅನಂತಕುಮಾರ್ ಹೆಗಡೆ ಈಗಾಗಲೇ ತಿಳಿದಿದ್ದನ್ನು ಮಾತ್ರ ಬಹಿರಂಗಪಡಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ಬುಡಮೇಲು ಮಾಡುವುದು ಬಿಜೆಪಿ ಮತ್ತು ಆರೆಸ್ಸೆಸ್ ಗುರಿಯಾಗಿದೆ ಎಂದಿದ್ದಾರೆ.

“400 ಸೀಟುಗಳನ್ನು ಮೀರುವ ಬಗ್ಗೆ ಪ್ರಧಾನ ಮಂತ್ರಿಗಳ ಎಲ್ಲಾ ಹೇಳಿಕೆಗಳು ಸಂವಿಧಾನವನ್ನು ಕಿತ್ತೊಗೆಯುವ ಗುರಿಯತ್ತ ಸಾಗುತ್ತಿವೆ. ಭಾರತದ ಜನರ, ವಿಶೇಷವಾಗಿ ದಲಿತರು, ಆದಿವಾಸಿಗಳು, ಒಬಿಸಿಗಳು ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕುಗಳ ಕೊನೆಯ ರಕ್ಷಕ. ನಾವು ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ಉಳಿಸಬೇಕಾದರೆ ಮತ್ತು ಭಾರತೀಯ ಪ್ರಜಾಪ್ರಭುತ್ವವನ್ನು ಸಂರಕ್ಷಿಸಬೇಕಾದರೆ, ನಾವು ಮೋದಿ ಸರ್ಕಾರದ ವಿರುದ್ಧ ಮತ ಹಾಕಬೇಕು” ಎಂದು ಎಕ್ಸ್ ನಲ್ಲಿನ ಪೋಸ್ಟ್‌ ಮಾಡಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿ, ಇದು ಬಿಜೆಪಿ ಸಂವಿಧಾನ ವಿರೋಧಿ ಎಂಬುದನ್ನು ತೋರಿಸುತ್ತದೆ. ಅವರು ಸಂವಿಧಾನವನ್ನು ತಿದ್ದುಪಡಿ ಮಾಡಲಿ. ಬಿಜೆಪಿ ಸಂಸದರು ಬಾಬಾಸಾಹೇಬ್ ಅಂಬೇಡ್ಕರ್ ನೀಡಿದ ಸಂವಿಧಾನಕ್ಕೆ ವಿರುದ್ಧವಾಗಿದ್ದಾರೆ. ಅವರು ಅದಕ್ಕೆ ಪ್ರಧಾನಿಯಿಂದ ಮುದ್ರೆಯೊತ್ತಲಿ” ಎಂದಿದ್ದಾರೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.