![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Mar 12, 2024, 10:13 AM IST
ಬೆಂಗಳೂರು: ತೆಲುಗು ನಟರಾದ ಪ್ರಭಾಸ್ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳ ನಡುವೆ ಕೆ.ಆರ್.ಪುರದ ಕ್ರಿಕೆಟ್ ಮೈದಾನದಲ್ಲಿ ಮಾರಾಮಾರಿ ನಡೆದಿದ್ದು, ಯುವಕನ ಮೇಲೆ ಆರೇಳು ಮಂದಿಯ ಗುಂಪು ಹಲ್ಲೆ ಮಾಡುತ್ತಿರುವ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿದ ಸ್ಥಳೀಯರೊಬ್ಬರು ಅದನ್ನು ನಗರ ಪೊಲೀಸರ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಗೆ ಟ್ಯಾಗ್ ಮಾಡಿದ್ದಾರೆ.
ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿಯ ಆಟದ ಮೈದಾನದಲ್ಲಿ ಭಾನುವಾರ ಘಟನೆ ನಡೆದಿದ್ದು, ಕೆ.ಆರ್.ಪುರ ಪೊಲೀಸರಿಗೆ ವಿಷಯ ತಿಳಿಯುತ್ತಿದ್ದಂತೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಮಾಹಿತಿ ಆಧರಿಸಿ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕ್ರಿಕೆಟ್ ಆಡುವಾಗ ತೆಲುಗು ನಟ ಪ್ರಭಾಸ್ ಅಭಿಮಾನಿ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳ ನಡುವೆ ತಮ್ಮ ನೆಚ್ಚಿನ ನಾಯಕನ ಬಗ್ಗೆ ಕೀಳಾಗಿ ಮಾತನಾಡಿದ್ದಕ್ಕೆ ಜಗಳ ನಡೆದಿತ್ತು. ನೋಡು ನೋಡುತ್ತಿದ್ದಂತೆ ಯುವಕನ ಮೇಲೆ ಆರೇಳು ಜನರ ಗುಂಪು ಕೈಯಿಂದ ಹಲ್ಲೆ ನಡೆಸಿದೆ.
ಯುವಕನಿಗೆ ಹೊಡೆಯುವುದು, ಬೆದರಿಸಿರುವುದು ಮತ್ತು ತಮ್ಮ ನೆಚ್ಚಿನ ನಟನಿಗೆ ಜೈಕಾರ ಹಾಕುವುದು ವಿಡಿಯೋದಲ್ಲಿ ಸೆರೆಯಾ ಗಿದೆ. ಹಲ್ಲೆಗೊಳಗಾದ ಯುವಕನನ್ನು ಪೊಲೀಸರು ಸಂಪರ್ಕಿಸಿದಾಗ, “ಪರಿಚಿತ ಹುಡುಗರೊಂದಿಗೆ ಜಗಳವಾಗಿದ್ದು, ಪ್ರಕರಣದಲ್ಲಿ ಬಳಿಕ ರಾಜಿಯಾಗಿದ್ದೇವೆ. ಹೀಗಾಗಿ ದೂರು ನೀಡುವುದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.