ರಿಷಬ್‌ ಶೆಟ್ಟಿ ʼಕಾಂತಾರ -1ʼ ನಲ್ಲಿ ಜೂ.NTR ನಟನೆ? ಟಾಲಿವುಡ್‌‌ ನಲ್ಲಿ ಸುದ್ದಿ ವೈರಲ್


Team Udayavani, Mar 12, 2024, 11:30 AM IST

ರಿಷಬ್‌ ಶೆಟ್ಟಿ ʼಕಾಂತಾರ -1ʼ ನಲ್ಲಿ ಜೂ.NTR ನಟನೆ? ಟಾಲಿವುಡ್‌‌ ನಲ್ಲಿ ಸುದ್ದಿ ವೈರಲ್

ಬೆಂಗಳೂರು: ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ ʼಕಾಂತಾರʼ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡಿದ್ದು ಗೊತ್ತೇ ಇದೆ. ಈ ಸಿನಿಮಾದ ಪ್ರೀಕ್ವೆಲ್‌ ಅನೌನ್ಸ್‌ ಆದ ಬಳಿಕ ಕುತೂಹಲ ಹೆಚ್ಚಾಗಿದೆ.

ಸಿನಿಮಾದ ಮುಹೂರ್ತ ನಡೆದು, ಕಲಾವಿದರ ಆಯ್ಕೆಗಾಗಿ ಅಡಿಷನ್‌ ಕೂಡ ನಡೆದಿದೆ. ಈಗಾಗಲೇ ʼಕಾಂತಾರ ಪ್ರೀಕ್ವೆಲ್‌ʼ ಟೀಸರ್‌ ದೊಡ್ಟಮಟ್ಟದಲ್ಲಿ ಸೌಂಡ್‌ ಮಾಡಿದೆ.

ʼಕಾಂತಾರ-1ʼ ನಲ್ಲಿ ಪಂಜುರ್ಲಿ ದೈವದ ಮೂಲದ ಕಥೆ ಇರಲಿದೆ ಎನ್ನಲಾಗಿದೆ. ಕ್ರಿ.ಶ. 301-400 ಕಾಲದ ಕಥೆ ಇರಲಿದೆ. ಪಂಜುರ್ಲಿ ದೈವದ ಹುಟ್ಟು ಹಾಗೂ ಆಚರಣೆ ಕುರಿತ ಕಥೆ ಪ್ರೀಕ್ವೆಲ್‌ ನಲ್ಲಿ ಇರಲಿದೆ ಎನ್ನಲಾಗಿದೆ.

ಸಿನಿಮಾದ ಕಲಾವಿದರ ಆಯ್ಕೆ ಬಗ್ಗೆ ಕುತೂಹಲ ಹೆಚ್ಚಾಗಿದೆ. ದೊಡ್ಡಮಟ್ಟದಲ್ಲಿ ಸಿನಿಮಾ ನಿರ್ಮಾಣ ಆಗುತ್ತಿರುವುದರಿಂದ ಈ ಭಾಗದ ಸ್ಥಳೀಯ ಕಲಾವಿದರ ಜೊತೆ ಅನ್ಯ ಸಿನಿರಂಗದ ಖ್ಯಾತ ಕಲಾವಿದರು ಕೂಡ ಇರಬಹುದು ಎನ್ನಲಾಗುತ್ತಿದೆ. ಈ ಮಾತಿಗೆ ತಕ್ಕಂತೆ ಟಾಲಿವುಡ್‌ ವಲಯದಲ್ಲಿ ಹೊಸದೊಂದು ಚರ್ಚೆ ಶುರುವಾಗಿದೆ.

ʼಕಾಂತಾರ ಪ್ರೀಕ್ವೆಲ್‌ʼ ನಲ್ಲಿ ಟಾಲಿವುಡ್‌ ಸೂಪರ್‌ ಸ್ಟಾರ್‌ ಸಿನಿಮಾದ ಸ್ಟಾರ್‌ ನಟರೊಬ್ಬರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡಿದೆ. ಈ ಹಿಂದೆ ಕಾಂತಾರ ಸಿನಿಮಾವನ್ನು ನೋಡಿ ರಿಷಬ್‌ ಶೆಟ್ಟಿ ಅವರಿಗೆ ಕರೆ ಮಾಡಿ ಅಭಿನಂದತೆ ಸಲ್ಲಿಸಿದ ನಟ ಜೂ. ಎನ್‌ ಟಿಆರ್‌ ʼಕಾಂತಾರ ಪ್ರೀಕ್ವೆಲ್‌ʼ ನಲ್ಲಿ ನಟಿಸುತ್ತಾರೆ ಎನ್ನುವ ಮಾತುಗಳು ಟಾಲಿವುಡ್‌ ನಲ್ಲಿ ಹರಿದಾಡಿದೆ.

ಇತ್ತೀಚೆಗೆ ಪ್ರಶಾಂತ್‌ ನೀಲ್‌ ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೂ.ಎನ್‌ ಟಿಆರ್‌ ದಂಪತಿ ಸಹಿತ ಭಾಗಿಯಾಗಿದ್ದರು. ಇದೇ ಕಾರ್ಯಕ್ರಮದಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರ್, ರಿಷಬ್ ಶೆಟ್ಟಿ ದಂಪತಿ ಕೂಡ ಆಗಿದ್ದರು. ಈ ವೇಳೆ ರಿಷಬ್ ಶೆಟ್ಟಿ ತಾರಕ್‌ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಈ ಫೋಟೋ ವೈರಲ್‌ ಆಗಿತ್ತು. ಇದೇ ಕಾರಣದಿಂದ ಜೂ.ಎನ್‌ ಟಿಆರ್‌ ʼಕಾಂತಾರ-1ʼ ರಲ್ಲಿ ನಟಿಸಲಿದ್ದಾರೆ ಎನ್ನುವ ಮಾತುಗಳು ಹರಿದಾಡಿದೆ.

ಪ್ರಶಾಂತ್‌ ನೀಲ್‌ ಅವರೊಂದಿಗೆ ಜೂ.ಎನ್‌ ಟಿಆರ್‌ ಮುಂದಿನ ಸಿನಿಮಾ ಮಾಡುತ್ತಿದ್ದಾರೆ. ಜೂ.ಎನ್‌ ಟಿಆರ್‌ ಹಾಗೂ ರಿಷಬ್‌ ಶೆಟ್ಟಿ ಅವರ ಊರು ಕುಂದಾಪುರಕ್ಕೂ ನಂಟಿದೆ. ತಾರಕ್‌ ಅವರ ತಾಯಿ ಶಾಲಿನಿ ಮೂಲತಃ ಕುಂದಾಪುರದವರು. ಈ ಕಾರಣದಿಂದ ತಾರಕ್‌ ಕನ್ನಡವನ್ನು ಸರಾಗವಾಗಿ ಮಾತನಾಡುತ್ತಾರೆ.

ಈ ಹಿಂದೆ‌ ಜೂ. ಎನ್‌ಟಿಆರ್ ಜೊತೆ ಸಿನಿಮಾ ಮಾಡುತ್ತೀರಾ ಎಂದು ರಿಷಬ್‌ ಅವರಿಗೆ ಕೇಳಲಾಗಿತ್ತು. ಆದರೆ ಸದ್ಯಕ್ಕೆ ಅಂಥ ಯೋಚನೆ ಇಲ್ಲ ಎಂದಿದ್ದರು. ಕಥೆ, ಸ್ಕ್ರಿಪ್ಟ್‌ ತಯಾರಿ ಬಳಿಕ ಕಲಾವಿದರ ಆಯ್ಕೆ ಆಗುತ್ತದೆ ಎಂದು ರಿಷಬ್‌ ಹೇಳಿದ್ದರು.

ಇದೀಗ ಜೂ. ಎನ್‌ ಟಿಆರ್‌ ʼಕಾಂತಾರ ಪ್ರೀಕ್ವೆಲ್‌ʼ ನಲ್ಲಿ ನಟಿಸಲಿದ್ದಾರೆ ಎಂದು ಟಾಲಿವುಡ್‌ ಅಭಿಮಾನಿಗಳ ನಡುವೆ ಮಾತುಗಳು ಹರಿದಾಡುತ್ತಿದೆ.

ಆದರೆ ಈ ಬಗ್ಗೆ ಎಲ್ಲೂ ಕೂಡ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.