ಅಮೀನಗಡ: ಗೆಳೆಯರ ಬಳಗದಿಂದ ಪಕ್ಷಿಗಳಿಗೆ ಆಹಾರ-ನೀರು


Team Udayavani, Mar 12, 2024, 11:17 AM IST

ಅಮೀನಗಡ: ಗೆಳೆಯರ ಬಳಗದಿಂದ ಪಕ್ಷಿಗಳಿಗೆ ಆಹಾರ-ನೀರು

ಉದಯವಾಣಿ ಸಮಾಚಾರ
ಅಮೀನಗಡ: ಪಕ್ಷಿಗಳಿಗೆ ಆಹಾರ, ನೀರು ಪೂರೈಸುವ ಮೂಲಕ ಗೆಳೆಯರ ಬಳಗ ಮಾನವೀಯತೆ ಮೆರೆದಿದೆ. ಹೌದು. ತಾಪಮಾನ ದಿನೇ ದಿನೆ ಹೆಚ್ಚಾಗುತ್ತಿದ್ದು, ಬಿಸಿಲಿನ ಬೇಗೆಯಿಂದ ಪಕ್ಷಿಗಳು ತತ್ತರಿಸುತ್ತಿವೆ. ಇದನ್ನು ಮನಗೊಂಡ ಪಟ್ಟಣದ ಗೆಳೆಯರ ಬಳಗ ಸ್ವಯಂ ಪ್ರೇರಣೆಯಿಂದ ಪಟ್ಟಣದ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ಹಾದಿ ಬಸವೇಶ್ವರ ದೇವಸ್ಥಾನದಿಂದ, ಸಾಯಿ ಶಾಲೆಯವರೆಗೆ 100ಕ್ಕೂ ಹೆಚ್ಚು ಗಿಡಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಸುವ ಕಾರ್ಯ ಮಾಡುತ್ತಿದೆ. ಗೆಳೆಯರ ಬಳಗದ ಈ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಪಟ್ಟಣದ ಗೆಳೆಯರ ಬಳಗ ಸೇರಿಕೊಂಡು ಸ್ಥಳಿಯ ಅಂಗಡಿಗಳಿಗೆ ಭೇಟಿ ನೀಡಿ, ಬಳಕೆಗೆ ಬಾರದ ಬಾಟಲ್‌ಗ‌ಳನ್ನು ಸಂಗ್ರಹಿಸಿ ಅವುಗಳನ್ನು ಎರಡು ತುಂಡುಗಳಾಗಿ ಮಾಡಿ, ತಮ್ಮ ತಮ್ಮ  ಮನೆಗಳಿಂದ ಅಕ್ಕಿ ಮತ್ತು ಜೋಳವನ್ನು ತಂದು ಎರಡನ್ನು ಕೂಡಿಸಿ ಅವುಗಳನ್ನು ಸಂಗ್ರಹಿಸಿ, ಒಂದು ಭಾಗದಲ್ಲಿ ಅಕ್ಕಿ ಮತ್ತು ಜೋಳ, ಮತ್ತೊಂದು ಭಾಗದಲ್ಲಿ ನೀರನ್ನು ಹಾಕಿ, ತಂತಿಯ ಮೂಲಕ ಗಿಡಗಳಿಗೆ ಕಟ್ಟುತ್ತಿದ್ದಾರೆ.

ಪಟ್ಟಣದ ಯುವಕರಾದ ನವೀನ ಪಲ್ಲಕ್ಕಿ, ಬಾಲು ಬಿ, ಹುಲ್ಲಪ್ಪ ಭಜಂತ್ರಿ, ಮುತ್ತು ನರಿ, ಸಂಗು ಬೇನಾಳ, ಮುತ್ತು ಬಿ., ಸಚಿನ
ಶಿವಮೂರ್ತಿಮಠ, ಬಸು ಗೌಡರ ಅವರನ್ನು ಒಳಗೊಂಡ ಗೆಳೆಯರ ಬಳಗ, ಪಕ್ಷಿಗಳ ಆಕ್ರಂದನ ಹಾಗೂ ವನ್ಯ ಜೀವಿಗಳ ನೋವಿಗೆ
ಸ್ಪಂದಿಸುತ್ತಿದೆ. ಎರಡು ದಿನಕೊಮ್ಮೆ ಗಿಡಗಳಿಗೆ ಕಟ್ಟಿರುವ ಬಾಟಲ್‌ಗ‌ಳಿಗೆ ಅಕ್ಕಿ, ಜೋಳ ಹಾಗೂ ನೀರನ್ನು ಹಾಕುವ ಯೋಜನೆ ಮಾಡಿ, ಪಕ್ಷಿಗಳ ದಾಹ ಇಂಗಿಸುವ ಮಾನವೀಯ ಕಾರ್ಯ ಮಾಡುತ್ತಿದ್ದಾರೆ.

ಯುವಕರ ಕಾರ್ಯ ಮಾದರಿ: ಆಧುನಿಕ ತಂತ್ರಜ್ಞಾನದ ಕಾಲಮಾನದಲ್ಲಿ ಪಕ್ಷಿಗಳ ಸಂಕುಲ ಅಳಿವಿನಂಚಿನಲ್ಲಿದೆ. ಪಕ್ಷಿಗಳ
ಸಂಕುಲ ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಯುವಕರ ನಡೆ ಇತರರಿಗೆ ಮಾದರಿಯಾಗಿದೆ. ಇದೇ ರೀತಿಯ ಹವ್ಯಾಸವನ್ನು ಎಲ್ಲರೂ ಬೆಳೆಸಿಕೊಂಡರೆ ಪಕ್ಷಿ ಸಂಕುಲ ರಕ್ಷಿಸಬಹುದು ಎಂದು ಗೆಳೆಯರ ಬಳಗದ ಕಾರ್ಯಕ್ಕೆ ಪ್ರಜ್ಞಾವಂತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

*ಎಚ್‌.ಎಚ್‌.ಬೇಪಾರಿ

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.