Arrested: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನ ದುಂಗುರ ಕದ್ದಿದ್ದ ಇಬ್ಬರ ಸೆರೆ


Team Udayavani, Mar 13, 2024, 9:45 AM IST

Arrested: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನ ದುಂಗುರ ಕದ್ದಿದ್ದ ಇಬ್ಬರ ಸೆರೆ

ಬೆಂಗಳೂರು: ಹೊಸಕೆರೆಹಳ್ಳಿಯಲ್ಲಿರುವ ಕೃಷ್ಣ ಬ್ಯಾಂಕರ್ಸ್‌ ಮತ್ತು ಜ್ಯುವೆಲ್ಲರ್‌ಗೆ ಗ್ರಾಹಕರ ಸೋಗಿನಲ್ಲಿ ಎಂಟ್ರಿ ಕೊಟ್ಟು ಸಿಬ್ಬಂದಿ ಗಮನ ಬೇರೆಡೆ ಸೆಳೆದು ಚಿನ್ನದ ಉಂಗುರ ಕಳ್ಳತನ ಮಾಡಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ವೇಲೂರು ಜಿಲ್ಲೆಯ ಆಸ್ಗರ್‌ ಹಾಗೂ ಮುಬಾರಕ್‌ ಬಂಧಿತರು. ಮಾ.4 ರಂದು ಹೊಸಕೆರೆಹಳ್ಳಿಯಲ್ಲಿರುವ ಕೃಷ್ಣ ಬ್ಯಾಂಕರ್ಸ್‌ ಮತ್ತು ಜ್ಯುವೆಲ್ಲರಿ ಶಾಪ್‌ಗೆ ಗ್ರಾಹಕರ ಸೋಗಿನಲ್ಲಿ ಆರೋಪಿಗಳು ಬಂದಿದ್ದರು. ನಮಗೆ ಹೆಚ್ಚಿನ ಬೆಲೆಯ ಉಂಗುರ ಖರೀದಿಸಬೇಕಿದೆ. ವಿವಿಧ ಶೈಲಿಯ ಉಂಗುರ ತೋರಿಸುವಂತೆ ಅಂಗಡಿಯಲ್ಲಿದ್ದ ಸಿಬ್ಬಂದಿ ಓಂಪ್ರಕಾಶ್‌ಗೆ ಸೂಚಿಸಿದ್ದರು. ವಿವಿಧ ಡಿಸೈನ್‌ ತೋರಿಸಿದರೂ ಒಪ್ಪದೇ ಇನ್ನಷ್ಟು ಬಗೆ ಬಗೆಯ ಚಿನ್ನದುಂಗುರ ತೋರಿಸುವಂತೆ ಕೇಳಿದ್ದರು. ಇದೇ ವೇಳೆ ಅಂಗಡಿಗೆ ಬಂದಿದ್ದ ಇಬ್ಬರು ಮಹಿಳಾ ಗ್ರಾಹಕರೊಂದಿಗೆ ಸಿಬ್ಬಂದಿ ಮಾತನಾಡುವಾಗ ಓಂಪ್ರಕಾಶ್‌ ಗಮನ ಬೇರೆಡೆ ಸೆಳೆದು ಸುಮಾರು 3.60 ಲಕ್ಷ ರೂ. ಬೆಲೆಯ 60 ಗ್ರಾಂ ಮೌಲ್ಯದ ಉಂಗುರವನ್ನು ಜೇಬಿನೊಳಗಿಟ್ಟಿದ್ದರು. ನೀವು ತೋರಿಸಿದ ಡಿಸೈನ್‌ ಇಷ್ಟವಾಗಲಿಲ್ಲ ಎಂದು ಹೇಳಿ ಅಂಗಡಿಯಿಂದ ತೆರಳಿದ್ದರು.

ಆರೋಪಿಗಳ ಸುಳಿವು ಕೊಟ್ಟ ಸಿಸಿ ಕ್ಯಾಮೆರಾ: ಅಭರಣ ಅಂಗಡಿ ಮಾಲೀಕ ಓಮರಾಮ್‌ ಬಂದು ಬಾಕ್ಸ್‌ನಲ್ಲಿದ್ದ ಚಿನ್ನದುಂಗುರ ಪರಿಶೀಲಿಸಿದಾಗ ಇದರಲ್ಲಿ 60 ಗ್ರಾಂ ಮೌಲ್ಯದ ಚಿನ್ನದುಂಗುರ ಇಲ್ಲದಿರುವುದು ಕಂಡು ಬಂದಿತ್ತು. ಈ ಬಗ್ಗೆ ಓಂಪ್ರಕಾಶ್‌ಗೆ ಪ್ರಶ್ನಿಸಿದ್ದರು. ಸತತ ಹುಡುಕಾಟ ನಡೆಸಿದರೂ ಉಂಗುರ ಸಿಗದ ಪರಿಣಾಮ ಅನುಮಾನಗೊಂಡ ಓಂಪ್ರಕಾಶ್‌ ಅಂಗಡಿಗೆ ಬಂದಿದ್ದ ಇಬ್ಬರು ಗ್ರಾಹಕರ ಬಗ್ಗೆ ಸಂಶಯ ವ್ಯಕ್ತಪಡಿಸಿ ಸಿಸಿ ಕ್ಯಾಮೆರಾದಲ್ಲಿ ಪರಿಶೀಲಿಸಿದಾಗ ಅವರು ಚಿನ್ನದುಂಗುರ ಲಪಟಾಯಿಸಿರುವುದು ಕಂಡು ಬಂದಿತ್ತು. ಅಂಗಡಿ ಮಾಲೀಕ ಓಮರಾಮ್‌ ಗಿರಿನಗರ ಪೊಲೀಸರಿಗೆ ದೂರು ನೀಡಿದ್ದರು.

 ಬೈಕ್‌ ಸಂಖ್ಯೆ ಆಧರಿಸಿ ಕಾರ್ಯಾಚರಣೆ : ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳು ಬಂದಿದ್ದ ಬೈಕ್‌ ಸಂಖ್ಯೆ ಆಧಾರಿಸಿ ಕಾರ್ಯಾಚರಣೆ ನಡೆಸಿದಾಗ ತಮಿಳುನಾಡಿನ ವೇಲೂರಿನಲ್ಲಿರುವುದು ಕಂಡು ಬಂದಿತ್ತು. ಕೂಡಲೇ ಅವರನ್ನು ಅಲ್ಲಿಗೆ ಬಂಧಿಸಲು ಹೊರಟಾಗ ಆರೋಪಿಗಳು ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದರು.

ಬಳಿಕ ಸ್ಥಳೀಯ ಪೊಲೀಸರ ನೆರವಿನಿಂದ ಬಂಧಿಸಿ ತಮಿಳುನಾಡಿನಿಂದ ಬೆಂಗಳೂರಿಗೆ ಪೊಲೀಸರು ಆರೋಪಿಗಳನ್ನು ಕರೆತಂದು ವಿಚಾರಣೆ ನಡೆಸಿದ್ದಾರೆ. ಕದ್ದ ಚಿನ್ನವನ್ನು ಬೇರೆಡೆ ಮಾರಾಟ ಮಾಡಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಹೀಗಾಗಿ ಇನ್ನಷ್ಟೇ ಆಭರಣ ಜಪ್ತಿ ಮಾಡಿಕೊಳ್ಳಬೇಕಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.