Arrested: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನ ದುಂಗುರ ಕದ್ದಿದ್ದ ಇಬ್ಬರ ಸೆರೆ
Team Udayavani, Mar 13, 2024, 9:45 AM IST
ಬೆಂಗಳೂರು: ಹೊಸಕೆರೆಹಳ್ಳಿಯಲ್ಲಿರುವ ಕೃಷ್ಣ ಬ್ಯಾಂಕರ್ಸ್ ಮತ್ತು ಜ್ಯುವೆಲ್ಲರ್ಗೆ ಗ್ರಾಹಕರ ಸೋಗಿನಲ್ಲಿ ಎಂಟ್ರಿ ಕೊಟ್ಟು ಸಿಬ್ಬಂದಿ ಗಮನ ಬೇರೆಡೆ ಸೆಳೆದು ಚಿನ್ನದ ಉಂಗುರ ಕಳ್ಳತನ ಮಾಡಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ವೇಲೂರು ಜಿಲ್ಲೆಯ ಆಸ್ಗರ್ ಹಾಗೂ ಮುಬಾರಕ್ ಬಂಧಿತರು. ಮಾ.4 ರಂದು ಹೊಸಕೆರೆಹಳ್ಳಿಯಲ್ಲಿರುವ ಕೃಷ್ಣ ಬ್ಯಾಂಕರ್ಸ್ ಮತ್ತು ಜ್ಯುವೆಲ್ಲರಿ ಶಾಪ್ಗೆ ಗ್ರಾಹಕರ ಸೋಗಿನಲ್ಲಿ ಆರೋಪಿಗಳು ಬಂದಿದ್ದರು. ನಮಗೆ ಹೆಚ್ಚಿನ ಬೆಲೆಯ ಉಂಗುರ ಖರೀದಿಸಬೇಕಿದೆ. ವಿವಿಧ ಶೈಲಿಯ ಉಂಗುರ ತೋರಿಸುವಂತೆ ಅಂಗಡಿಯಲ್ಲಿದ್ದ ಸಿಬ್ಬಂದಿ ಓಂಪ್ರಕಾಶ್ಗೆ ಸೂಚಿಸಿದ್ದರು. ವಿವಿಧ ಡಿಸೈನ್ ತೋರಿಸಿದರೂ ಒಪ್ಪದೇ ಇನ್ನಷ್ಟು ಬಗೆ ಬಗೆಯ ಚಿನ್ನದುಂಗುರ ತೋರಿಸುವಂತೆ ಕೇಳಿದ್ದರು. ಇದೇ ವೇಳೆ ಅಂಗಡಿಗೆ ಬಂದಿದ್ದ ಇಬ್ಬರು ಮಹಿಳಾ ಗ್ರಾಹಕರೊಂದಿಗೆ ಸಿಬ್ಬಂದಿ ಮಾತನಾಡುವಾಗ ಓಂಪ್ರಕಾಶ್ ಗಮನ ಬೇರೆಡೆ ಸೆಳೆದು ಸುಮಾರು 3.60 ಲಕ್ಷ ರೂ. ಬೆಲೆಯ 60 ಗ್ರಾಂ ಮೌಲ್ಯದ ಉಂಗುರವನ್ನು ಜೇಬಿನೊಳಗಿಟ್ಟಿದ್ದರು. ನೀವು ತೋರಿಸಿದ ಡಿಸೈನ್ ಇಷ್ಟವಾಗಲಿಲ್ಲ ಎಂದು ಹೇಳಿ ಅಂಗಡಿಯಿಂದ ತೆರಳಿದ್ದರು.
ಆರೋಪಿಗಳ ಸುಳಿವು ಕೊಟ್ಟ ಸಿಸಿ ಕ್ಯಾಮೆರಾ: ಅಭರಣ ಅಂಗಡಿ ಮಾಲೀಕ ಓಮರಾಮ್ ಬಂದು ಬಾಕ್ಸ್ನಲ್ಲಿದ್ದ ಚಿನ್ನದುಂಗುರ ಪರಿಶೀಲಿಸಿದಾಗ ಇದರಲ್ಲಿ 60 ಗ್ರಾಂ ಮೌಲ್ಯದ ಚಿನ್ನದುಂಗುರ ಇಲ್ಲದಿರುವುದು ಕಂಡು ಬಂದಿತ್ತು. ಈ ಬಗ್ಗೆ ಓಂಪ್ರಕಾಶ್ಗೆ ಪ್ರಶ್ನಿಸಿದ್ದರು. ಸತತ ಹುಡುಕಾಟ ನಡೆಸಿದರೂ ಉಂಗುರ ಸಿಗದ ಪರಿಣಾಮ ಅನುಮಾನಗೊಂಡ ಓಂಪ್ರಕಾಶ್ ಅಂಗಡಿಗೆ ಬಂದಿದ್ದ ಇಬ್ಬರು ಗ್ರಾಹಕರ ಬಗ್ಗೆ ಸಂಶಯ ವ್ಯಕ್ತಪಡಿಸಿ ಸಿಸಿ ಕ್ಯಾಮೆರಾದಲ್ಲಿ ಪರಿಶೀಲಿಸಿದಾಗ ಅವರು ಚಿನ್ನದುಂಗುರ ಲಪಟಾಯಿಸಿರುವುದು ಕಂಡು ಬಂದಿತ್ತು. ಅಂಗಡಿ ಮಾಲೀಕ ಓಮರಾಮ್ ಗಿರಿನಗರ ಪೊಲೀಸರಿಗೆ ದೂರು ನೀಡಿದ್ದರು.
ಬೈಕ್ ಸಂಖ್ಯೆ ಆಧರಿಸಿ ಕಾರ್ಯಾಚರಣೆ : ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳು ಬಂದಿದ್ದ ಬೈಕ್ ಸಂಖ್ಯೆ ಆಧಾರಿಸಿ ಕಾರ್ಯಾಚರಣೆ ನಡೆಸಿದಾಗ ತಮಿಳುನಾಡಿನ ವೇಲೂರಿನಲ್ಲಿರುವುದು ಕಂಡು ಬಂದಿತ್ತು. ಕೂಡಲೇ ಅವರನ್ನು ಅಲ್ಲಿಗೆ ಬಂಧಿಸಲು ಹೊರಟಾಗ ಆರೋಪಿಗಳು ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದರು.
ಬಳಿಕ ಸ್ಥಳೀಯ ಪೊಲೀಸರ ನೆರವಿನಿಂದ ಬಂಧಿಸಿ ತಮಿಳುನಾಡಿನಿಂದ ಬೆಂಗಳೂರಿಗೆ ಪೊಲೀಸರು ಆರೋಪಿಗಳನ್ನು ಕರೆತಂದು ವಿಚಾರಣೆ ನಡೆಸಿದ್ದಾರೆ. ಕದ್ದ ಚಿನ್ನವನ್ನು ಬೇರೆಡೆ ಮಾರಾಟ ಮಾಡಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಹೀಗಾಗಿ ಇನ್ನಷ್ಟೇ ಆಭರಣ ಜಪ್ತಿ ಮಾಡಿಕೊಳ್ಳಬೇಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.